ಆ್ಯಪ್ನಗರ

ಆಂಧ್ರ ಮತದಾನ ಹಿಂಸಾಚಾರ: ಟಿಡಿಪಿ-ವೈಎಸ್‌ಆರ್‌ ಕಾರ್ಯಕರ್ತರ ನಡುವೆ ಘರ್ಷಣೆ, ಇಬ್ಬರ ಹತ್ಯೆ

ಪಶ್ಚಿಮ ಗೋವಾವರಿ ಜಿಲ್ಲೆಯಲ್ಲು ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಸಂಭವಿಸಿದ್ದು, ಟಿಡಿಪಿ ಕಾರ್ಯಕರ್ತರು ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

Agencies 11 Apr 2019, 3:27 pm
ಹೈದರಾಬಾದ್‌: ಲೋಕಸಭೆ ಚುನಾವಣೆ 2019ರ ಮೊದಲ ಹಂತದ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಆಂಧ್ರ ಪ್ರದೇಶದಲ್ಲಿ ಹಿಂಸಾಚಾರ ಉದ್ಭವಿಸಿದ್ದು, ಓರ್ವ ಟಿಡಿಪಿ ಕಾರ್ಯಕರ್ತ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ನ ಓರ್ವ ಕಾರ್ಯಕರ್ತನ ಹತ್ಯೆ ನಡೆದಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಮತ್ತು ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.
Vijaya Karnataka Web TDP fight


ಅನಂತಪುರ ಜಿಲ್ಲೆಯ ತಡಿಪತ್ರಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿವಾದಿತ ಟಿಡಿಪಿ ಮಾಜಿ ಸಂಸದ ಜೆಸಿ ದಿವಾಕರ್‌ ರೆಡ್ಡಿ ಅವರ ಮಗ ಪವನ್‌ ಕುಮಾರ್‌ ರೆಡ್ಡಿ ಟಿಡಿಪಿ ಟಿಕೆಟ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಮೊದಲಿನಿಂದಲೂ ಚುನಾವಣೆ ಆಯೋಗವು ಈ ಪ್ರದೇಶವನ್ನು ಸೂಕ್ಷ್ಮ ಪ್ರದೇಶ ಎಂದು ಗುರುತಿಸುತ್ತಲೇ ಬಂದಿದೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಇಲುರು ಪ್ರದೇಶದ ಇಂದಿರಾ ಕಾಲೋನಿ ಹೈಸ್ಕೂಲ್‌ ಆವರಣದಲ್ಲಿ ಟಿಡಿಪಿ ಕಾರ್ಯಕರ್ತರು ವೈಎಸ್‌ಆರ್‌ ಕಾಂಗ್ರೆಸ್‌ನ ಕಾರ್ಯಕರ್ತ ಮಟ್ಟ ರಾಜು ಎಂಬುವವರ ಮೇಲೆ ಹಲ್ಲೆ ನಡೆಸಿದ ವರದಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌