ಆ್ಯಪ್ನಗರ

ಮಂಗಳವಾರ ಮತದಾನ: ಹಲವು ರಾಜಕೀಯ ನಾಯಕರ ಭವಿಷ್ಯ ನಿರ್ಧಾರ

ಮೂರನೇ ಹಂತದಲ್ಲಿ 13 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ 116 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Vijaya Karnataka Web 22 Apr 2019, 8:21 pm
ಹೊಸದಿಲ್ಲಿ: ಮಂಗಳವಾರ ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಪ್ರಮುಖ ಪಕ್ಷಗಳ ಹಲವಾರು ನಾಯಕರ ಭವಿಷ್ಯ ನಿರ್ಧಾರವಾಗಲಿದೆ.
Vijaya Karnataka Web ವಿವಿ ಪ್ಯಾಟ್‌
ವಿವಿ ಪ್ಯಾಟ್‌


ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್, ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂಸಿಂಗ್ ಯಾದವ್, ರಾಷ್ಟ್ರೀಯ ಜನತಾದಳ ಪಕ್ಷದ ಶರದ್ ಯಾದವ್ ಈ ಹಂತದಲ್ಲಿ ಸ್ಪರ್ಧಿಸಿರುವ ಪ್ರಮುಖರು.

ಮೂರನೇ ಹಂತದಲ್ಲಿ 13 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ 116 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಗುಜರಾತ್‌ನ ಎಲ್ಲ 26 ಕ್ಷೇತ್ರಗಳು, ಕೇರಳದ 20, ಕರ್ನಾಟಕ ಮತ್ತು ಮಹಾರಾಷ್ಟ್ರದ 14, ಉತ್ತರಪ್ರದೇಶ 10, ಛತ್ತೀಸ್‌ಗಢ 7, ಓಡಿಶಾ 5, ಬಿಹಾರ ಮತ್ತು ಪಶ್ಚಿಮ ಬಂಗಾಳದ 5, ಅಸ್ಸಾಂ 4, ಗೋವಾ 2 ಮತ್ತು ಜಮ್ಮು-ಕಾಶ್ಮೀರ, ದಾದ್ರಾ ನಗರ್ ಹವೇಲಿ, ದಾಮನ್ ಮತ್ತು ಡಿಯು ಹಾಗೂ ತ್ರಿಪುರಾದ ತಲಾ ಒಂದು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಒಡಿಶಾದಲ್ಲಿ 42 ವಿಧಾನಸಭಾ ಕ್ಷೇತ್ರಗಳಿಗೂ ಸಹ ಮಂಗಳವಾರ ಮತದಾನ ನಡೆಯಲಿದೆ. ಮತದಾನ ನಡೆಯಲಿರುವ ಕೆಲವು ಪ್ರದೇಶಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಶಾಂತಿಯುತ ಮತದಾನಕ್ಕಾಗಿ ವ್ಯಾಪಕ ಭದ್ರತಾ ಏರ್ಪಾಡು ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌