ಆ್ಯಪ್ನಗರ

ದುರ್ಬಲ ಕಾಂಗ್ರೆಸ್‌ನಿಂದ ಉತ್ತಮ ಆಡಳಿತ ಸಾಧ್ಯವಿಲ್ಲ: ನರೇಂದ್ರ ಮೋದಿ

ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನದ ಶಕ್ತಿ ಕುಗ್ಗಿಸಲು ಹಲವಾರು ರಾಷ್ಟ್ರಗಳು ಕೈಜೋಡಿಸಿವೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ಉಗ್ರ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ.

Vijaya Karnataka Web 5 May 2019, 9:04 pm
ಸಾಗರ್‌ (ಮಧ್ಯಪ್ರದೇಶ): ದೇಶದಲ್ಲಿ ದುರ್ಬಲ ಆಡಳಿತ ನಡೆಸಿದ ಕಾಂಗ್ರೆಸ್‌ನಿಂದ ಅಭಿವೃದ್ಧಿ ಸಾಧ್ಯವಿಲ್ಲ, ಪ್ರತಿ ಮನೆಗೂ ವಿದ್ಯುತ್ ಸಂಪರ್ಕ, ಪ್ರತಿ ಗ್ರಾಮದಲ್ಲಿ ಉತ್ತಮ ರಸ್ತೆ ಇರಬೇಕು ಎಂಬ ಧ್ಯೇಯ ಗುರಿಯೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.
Vijaya Karnataka Web ಮೋದಿ
ಮೋದಿ


ಮಧ್ಯಪ್ರದೇಶದ ಸಾಗರ್‌ನಲ್ಲಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಭಾಷಣ ಮಾಡಿದರು.

ದೇಶದ ಭದ್ರತೆ ಮತ್ತು ರಕ್ಷಣೆ ವಿಷಯದಲ್ಲಿ ನಾವು ಯಾರೊಂದಿಗೆ ರಾಜೀ ಮಾಡಿಕೊಂಡಿಲ್ಲ. ಹಿಂದಿನ ದುರ್ಬಲ ಕಾಂಗ್ರೆಸ್‌ ಸರಕಾರ ಸಾಕ್ಷ್ಯಗಳನ್ನು ಒದಗಿಸುವುದಕ್ಕೆ ಸೀಮಿತವಾಗಿತ್ತು ಎಂದರು.

ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನದ ಶಕ್ತಿ ಕುಗ್ಗಿಸಲು ಹಲವಾರು ರಾಷ್ಟ್ರಗಳು ಕೈಜೋಡಿಸಿವೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ಉಗ್ರ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ ಎಂದರು.

ದೇಶದ ಭದ್ರತೆ ವಿಚಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೆರವು ಪಡೆಯಲು ಸರಕಾರ ಕಾರ್ಯನಿರ್ವಹಿಸಿದೆ ಎಂದು ಮೋದಿ ಹೇಳಿದರು.

ನಂತರ ಉತ್ತರ ಪ್ರದೇಶದ ಬದೋಹಿ ಜಿಲ್ಲೆಯಲ್ಲಿಯೂ ಪ್ರಧಾನಿ ಪ್ರಚಾರ ಮಾಡಿದರು.

ಪ್ರತಿಪಕ್ಷಗಳು ಸರ್ಜಿಕಲ್ ಸ್ಟ್ರೈಕ್‌ನೊಂದಿಗೆ ಚುನಾವಣಾ ಪ್ರಚಾರವನ್ನು ಥಳಕು ಹಾಕುತ್ತಿವೆ. ಪ್ರತಿಯೊಂದರಲ್ಲೂ ಚುನಾವಣಾ ದೃಷ್ಟಿಕೋನವಿದೆ, ಜಾಗತಿಕವಾಗಿ ಭಾರತಕ್ಕೆ ಹೆಚ್ಚಿನ ಮನ್ನಣೆಯಿದ್ದು, ಗೌರವ ಕೂಡ ಹೆಚ್ಚಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌