ಆ್ಯಪ್ನಗರ

ಜಿನ್ನಾ ಭಾವಚಿತ್ರ ಪಾಕ್‌ಗೆ ಕಳುಹಿಸುವುದೇ ನನ್ನ ಮೊದಲ ಆದ್ಯತೆ: ಬಿಜೆಪಿ ಸಂಸದ

ಅಲಿಘರ್ ಲೋಕಸಭೆ ಕ್ಷೇತ್ರದಲ್ಲಿ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಡಾ. ಅಜಿತ್ ಬಲಿಯಾನ್ ವಿರುದ್ಧ ಬಿಜೆಪಿಯ ಸತೀಶ್ ಕುಮಾರ್ ಗೌತಂ ಭರ್ಜರಿ ಜಯ ಸಾಧಿಸಿದ್ದಾರೆ.

Agencies 24 May 2019, 2:33 pm
ಲಖನೌ: ಉತ್ತರ ಪ್ರದೇಶದ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಕೋಣೆಯೊಂದರಲ್ಲಿರುವ ಮೊಹಮ್ಮದ್ ಅಲಿ ಜಿನ್ನಾ ಭಾವಚಿತ್ರವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡುವುದೇ ನನ್ನ ಮೊದಲ ಆದ್ಯತೆ ಎಂದು ಆಲಿಘರ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಜಯಭೇರಿಯಾಗಿರುವ ಸತೀಶ್ ಕುಮಾರ್ ಗೌತಂ ಹೇಳಿದರು.
Vijaya Karnataka Web bjp


ಅಲಿಘರ್ ಲೋಕಸಭೆ ಕ್ಷೇತ್ರದಲ್ಲಿ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಡಾ. ಅಜಿತ್ ಬಲಿಯಾನ್ ವಿರುದ್ಧ ಬಿಜೆಪಿಯ ಸತೀಶ್ ಕುಮಾರ್ ಗೌತಂ ಭರ್ಜರಿ ಜಯ ಸಾಧಿಸಿದ್ದಾರೆ. ಗೆಲುವಿನ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಅವರು, ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಕೋಣೆಯಲ್ಲಿರುವ ಜಿನ್ನಾ ಭಾವಚಿತ್ರವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡುವುದಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದಿದ್ದಾರೆ.


ದೇಶದ 542 ಕ್ಷೇತ್ರಗಳ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ನೇತೃತ್ವದಲ್ಲಿ ಭಾರೀ ಜನಾದೇಶ ಪಡೆದ ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಸರಕಾರ ರಚನೆಗೆ ಸಿದ್ದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌