ಆ್ಯಪ್ನಗರ

ವಾರದಲ್ಲಿ ಅಭ್ಯರ್ಥಿಗಳು ಅಂತಿಮ: ಬಿಎಸ್‌ವೈ

ಇನ್ನೊಂದು ವಾರದಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Vijaya Karnataka 3 Mar 2019, 5:00 am
ತುಮಕೂರು: ಇನ್ನೊಂದು ವಾರದಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.
Vijaya Karnataka Web Yadiyurappa


ಶನಿವಾರ ತುಮಕೂರಿಗೆ ಆಗಮಿಸಿದ ಅವರು, ಸಿದ್ಧಗಂಗಾ ಮಠಕ್ಕೆ ತೆರಳಿ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಲಿಂ. ಡಾ.ಶ್ರೀ ಶಿವಕುಮಾರಸ್ವಾಮೀಜಿಗಳ ಮಂಟಪಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಒಂದು ಸಾವಿರಕ್ಕೂ ಅಧಿಕ ವಿಜಯ ಸಂಕಲ್ಪ ಬೈಕ್‌ರಾರ‍ಯಲಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಾತಿನ ಭರದಲ್ಲಿ ಕರ್ನಾಟಕದಲ್ಲಿ 120ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲಬೇಕು. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. 300ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮೋದಿ ಅವರನ್ನು ಪ್ರಧಾನಿ ಮಾಡಬೇಕು ಎನ್ನುವುದು ರಾರ‍ಯಲಿಯ ಉದ್ದೇಶವಾಗಿದೆ ಎಂದ ಅವರು, ಬಳಿಕ ರಾಜ್ಯದಲ್ಲಿ ಕನಿಷ್ಟ 22 ಕ್ಷೇತ್ರವನ್ನು ಗೆಲ್ಲುವ ವಿಶ್ವಾಸವಿದೆ ಎಂದು ಪುನರುಚ್ಚರಿಸಿದರು. ಮಂಡ್ಯದಲ್ಲಿ ನಟಿ ಸುಮಲತಾ ಸ್ಪರ್ಧೆ ವಿಚಾರವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಚರ್ಚೆ ನಡೆಯುತ್ತಿದೆ. ತುಮಕೂರಿನ ಅಭ್ಯರ್ಥಿಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌