ಆ್ಯಪ್ನಗರ

ಪತ್ನಿಯನ್ನೇ ತೊರೆದ ಮೋದಿ ಬೇರೆ ಮಹಿಳೆಯರನ್ನು ಗೌರವಿಸಲು ಹೇಗೆ ಸಾಧ್ಯ?: ಮಾಯಾವತಿ

ರಾಜಕೀಯ ಲಾಭಕ್ಕಾಗಿ ಪತ್ನಿಯನ್ನು ಬಿಟ್ಟ ನರೇಂದ್ರ ಮೋದಿ ಇತರ ಮಹಿಳೆಯರನ್ನು ಗೌರವಿಸಲು ಹೇಗೆ ಸಾಧ್ಯ? ಎಂದು ಮಾಯಾವತಿ ಪ್ರಶ್ನಿಸಿದ್ದಾರೆ.

TOI.in 13 May 2019, 2:18 pm
ಹೊಸದಿಲ್ಲಿ: ಬಿಜೆಪಿ ನಾಯಕಿಯರು ತಮ್ಮ ಗಂಡಂದಿರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಬಗ್ಗೆ ಭೀತಿ ಹೊಂದಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ.
Vijaya Karnataka Web Mayawati


ಪತಿಯರು ಎಲ್ಲಿ ನರೇಂದ್ರ ಮೋದಿ ಅವರಂತೆ ತಮ್ಮ ಬಿಟ್ಟುಬಿಡುತ್ತಾರೋ ಎಂಬ ಭಯವನ್ನು ಬಿಜೆಪಿ ನಾಯಕಿಯರು ಎದುರಿಸುತ್ತಿದ್ದಾರೆ ಎಂದು ಮಾಯಾವಕಿ ಅಣಕವಾಡಿದ್ದಾರೆ.

ಬಿಜೆಪಿಯಲ್ಲಿ ಮದುವೆಯಾದ ಮಹಿಳೆಯರು ತಮ್ಮ ಗಂಡಂದಿರು ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದನ್ನು ನೋಡಿ ಭಯ ಪಡುತ್ತಿದ್ದಾರೆ. ಎಲ್ಲಿ ನರೇಂದ್ರ ಮೋದಿ ಅವರು ತಮ್ಮ ಗಂಡಂದಿರನ್ನು ತಮ್ಮಿಂದ ದೂರ ಮಾಡಿಬಿಡುತ್ತಾರೋ ಎಂಬ ಭೀತಿ ಎದುರಿಸುತ್ತಿರುವ ವಿಚಾರ ನನಗೆ ತಿಳಿದಿದೆ ಎಂದು ಮಾಯಾವತಿ ಹೇಳಿದ್ದಾರೆ.

ರಾಜಕೀಯ ಲಾಭಕ್ಕಾಗಿ ಪತ್ನಿಯನ್ನು ಬಿಟ್ಟ ನರೇಂದ್ರ ಮೋದಿ ಇತರ ಮಹಿಳೆಯರನ್ನು ಗೌರವಿಸಲು ಹೇಗೆ ಸಾಧ್ಯ? ಎಂದು ಮಾಯಾವತಿ ಪ್ರಶ್ನಿಸಿದ್ದಾರೆ.

ಅಲ್ವಾರ್‌ನಲ್ಲಿ ದಲಿತ ಮಹಿಳೆಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನರೇಂದ್ರ ಮೋದಿ ಮೌನವಾಗಿದ್ದರು. ನಾನು ಪ್ರಕರಣದ ಬಗ್ಗೆ ಧ್ವನಿ ಎತ್ತಿದಾಗ ನರೇಂದ್ರ ಮೋದಿ ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಯಾವತಿ ಆಕ್ರೋಷ ವ್ಯಕ್ತ ಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌