ಆ್ಯಪ್ನಗರ

ಕಣಕ್ಕಿಳಿಯುತ್ತಿಲ್ಲ ಉಮಾ ಭಾರತಿ!

ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಈ ಬಗ್ಗೆ ಅಧಿಕೃತ ಘೋಷಣೆ ಮಾಡಿ ಎಂದವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಲ್ಲಿ ಮನವಿ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ಆದರೆ ರಾಜಕೀಯದಿಂದ ನಾನೆಂದಿಗೂ ಸನ್ಯಾಸ ತೆಗೆದುಕೊಳ್ಳುವುದಿಲ್ಲ ಎಂದವರು ಹೇಳಿದ್ದಾರೆ.

Navbharat Times 24 Mar 2019, 12:30 pm
ಲಖನೌ: ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ರಾಜಕೀಯ ಪಕ್ಷಗಳ ನೇತಾರರು ಹೇಗಾದರೂ ಮಾಡಿ ಟಿಕೆಟ್ ಉಳಿಸಿಕೊಳ್ಳುವ ಮತ್ತು ಪಡೆದುಕೊಳ್ಳುವ ಕಾಯಕದಲ್ಲಿ ವ್ಯಸ್ತರಾಗಿದ್ದಾರೆ. ಮತ್ತೆ ಕೆಲವರು ಪಕ್ಷಾಂತರದಲ್ಲಿ ಮುಳುಗಿದ್ದಾರೆ. ಈ ಮಧ್ಯೆ ಭಾರತೀಯ ಜನತಾ ಪಕ್ಷದ ನಾಯಕಿ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಮತ್ತೆ ಪುನಃ ಚುನಾವಣೆಗೆ ಸ್ಪರ್ಧಿಸದಿರುವ ಮಾತುಗಳನ್ನಾಡಿದ್ದಾರೆ.
Vijaya Karnataka Web Uma Bharti


ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಈ ಬಗ್ಗೆ ಅಧಿಕೃತ ಘೋಷಣೆ ಮಾಡಿ ಎಂದವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಲ್ಲಿ ಮನವಿ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ಆದರೆ ರಾಜಕೀಯದಿಂದ ನಾನೆಂದಿಗೂ ಸನ್ಯಾಸ ತೆಗೆದುಕೊಳ್ಳುವುದಿಲ್ಲ ಎಂದವರು ಹೇಳಿದ್ದಾರೆ.


ದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಪಕ್ಷದ ಸಭೆಗೂ ಕೆಲ ಗಂಟೆಗಳ ಮೊದಲವರು ಈ ಟ್ವೀಟ್ ಮಾಡಿದ್ದಾರೆ. ಈ ಮೊದಲು ಘೋಷಿಸಿರುವುದನ್ನೇ ನಾನು ಪುನರುಚ್ಛರಿಸುತ್ತಿದ್ದೇನೆ. ನಾನು ಈ ಬಾರಿ ಲೋಕ ಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ, ಈ ಬಗ್ಗೆ ಅಮಿತ್ ಶಾ ಅವರಿಗೆ ಪತ್ರ ಮುಖೇನ ಸ್ಪಷ್ಟ ಪಡಿಸಿದ್ದು, ಪಕ್ಷದಿಂದ ಅಧಿಕೃತವಾಗಿ ಈ ಕುರಿತು ಘೋಷಿಸಬೇಕೆಂದು ಹೇಳಿದ್ದೇನೆ. ಮತ್ತೆ ಒಂದುವರೆ ವರ್ಷಗಳವರೆಗೆ ಹೆಚ್ಚಿನ ಸಮಯವನ್ನು ನಾನು ಗಂಗಾ ತಟದಲ್ಲಿಯೇ ವ್ಯಯಿಸಲು ಬಯಸುತ್ತೇನೆ ಎಂದವರು ಹೇಳಿದ್ದಾರೆ.

ಸಾಯುವವರೆಗೆ ಬಡವರಿಗಾಗಿ ರಾಜಕೀಯದಲ್ಲಿರುತ್ತೇನೆ

ಎಂದಿಗೂ ತಾವು ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವುದಿಲ್ಲವೆಂದು ಅವರು ಸ್ಪಷ್ಟ ಪಡಿಸಿದ್ದಾರೆ. ನಾನು ಕೊನೆಯುಸಿರಿರುವವರೆಗೆ ರಾಜಕೀಯದಿಂದ ನಿವೃತ್ತಿ ಪಡೆದುಕೊಳ್ಳುವುದಿಲ್ಲ. ಬಡ ಜನರ ಹಕ್ಕು, ಅಧಿಕಾರಕ್ಕಾಗಿ ಕೆಲಸ ಮಾಡುತ್ತೇನೆ.

ಪ್ರಸಕ್ತ ಆಡಳಿತದಲ್ಲಿರುವ ಮೋದಿ ಸರಕಾರದಲ್ಲಿ ಉಮಾ ಭಾರತಿ ಕೇಂದ್ರ ಸಚಿವೆಯಾಗಿದ್ದು ಉತ್ತರ ಪ್ರದೇಶಧ ಝಾನ್ಸಿ ಕ್ಷೇತ್ರದ ಸಂಸದರಾಗಿದ್ದಾರೆ.

ಉತ್ತರ ಪ್ರದೇಶದ ಹಲವು ಸಂಸದರಿಗೆ ಈ ಬಾರಿ ಬಿಜೆಪಿ ಟಿಕೆಟ್ ‌ನೀಡುವುದಿಲ್ಲ ಎಂಬ ಮಾತು ಸಹ ಕೇಳಿ ಬಂದಿತ್ತು. ಕೆಲವು ಮೂಲಗಳ ಪ್ರಕಾರ ಉಮ ಭಾರತಿ ಅವರಿಗೂ ಟಿಕೆಟ್ ನೀಡದಿರುವುದೆಂದು ನಿರ್ಣಯವಾಗಿತ್ತು. ಹೀಗಾಗಿ ಅವರಾಗಿಯೇ ಈ ಘೋಷಣೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತದೆ.

ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಯಾವುದೇ ಜವಾಬ್ದಾರಿ ನೀಡಿದರೂ ನಾನು ವಹಿಸಿಕೊಳ್ಳಲು ಸಿದ್ಧ ಎಂದು ಸಹ ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ