ಆ್ಯಪ್ನಗರ

ಡಾನ್ಸರ್ ಮೇಲೆ ಕಾಳಜಿ ತೋರಿಸಿದ ನಟ ವರುಣ್ ಧವನ್!

ಬಾಲಿವುಡ್ ನಟ ವರುಣ್ ಧವನ್ ಅವರು ವ್ಯಕ್ತಪಡಿಸಿರುವ ಮಾನವೀಯತೆಗೆ ಸೋಷಿಯಲ್ ಮೀಡಿಯಾದಲ್ಲಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವರುಣ್ ಧವನ್ ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೆ ಬಲಗೈಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಎಂಬಂತೆ, ನಟ ವರುಣ್ ಧವನ್ ಅವರು ಸಹಾಯ ಮಾಡಿ ಸುಮ್ಮನಾಗಿದ್ದಾರೆ.

Vijaya Karnataka Web 19 May 2019, 12:43 pm
ಮುಂಬೈನಲ್ಲಿ ಡ್ಯಾನ್ಸ್ ಅಭ್ಯಾಸದ ವೇಳೆ ಗಾಯಗೊಂಡಿದ್ದ ಯುವ ಡ್ಯಾನ್ಸರ್ ಚಿಕಿತ್ಸೆಗೆ 5 ಲಕ್ಷ ರೂ. ನೀಡಿ ಸಹಾಯ ಮಾಡುವ ಮೂಲಕ ಬಾಲಿವುಡ್ ಖ್ಯಾತ ನಟ ವರುಣ್ ಧವನ್ ಮಾನವೀಯತೆ ಮೆರೆದಿದ್ದಾರೆ. ಸಿಕ್ಕ ಮಾಹಿತಿ ಪ್ರಕಾರ, ಯುವನಟ ಇಶಾನ್ ಡ್ಯಾನ್ಸ್ ಅಭ್ಯಾಸದ ವೇಳೆ ಡಬಲ್ ಫ್ರಂಟ್ ಫ್ಲಿಪ್ ಒಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾನೆ.
Vijaya Karnataka Web varundhawan1905


ಈ ವಿಷಯ ತಿಳಿದ ಹಲವು ಡ್ಯಾನ್ಸರ್ ಗಳು ಇಶಾನ್ ಚಿಕಿತ್ಸೆಗೆ ಹಣವನ್ನು ಸಂಗ್ರಹಿಸಲು ಶುರು ಮಾಡಿದ್ದರು. ಡ್ಯಾನರ್ಸ್ ಹಣ ಸಂಗ್ರಹಿಸುತ್ತಿರುವ ವಿಷಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಡ್ಯಾನ್ಸರ್ ಒಬ್ಬರು ವರುಣ್ ಜೊತೆ ಚಾಟ್ ಮಾಡಿದ ಸ್ಕ್ರೀನ್ ಶಾಟ್ ತೆಗೆದು ಅದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನು ನೋಡಿದ ವರುಣ್ ಇನ್ಸ್ಟಾಗ್ರಾಂ ಮೆಸೇಜ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಇಶಾನ್ ಬಗ್ಗೆ ಮಾಹಿತಿ ಪಡೆದು ಸಹಾಯಕ್ಕೆ ಮುಂದಾಗಿದ್ದಾರೆ. ನಟ ವರುಣ್ ಧವನ್ ಅವರು ಇಶಾನ್ ಚಿಕಿತ್ಸೆಗಾಗಿ 5 ಲಕ್ಷ ರೂ. ಹಣ ನೀಡಿದ್ದಾರೆ.

ಬಾಲಿವುಡ್ ನಟ ವರುಣ್ ಧವನ್ ಅವರು ವ್ಯಕ್ತಪಡಿಸಿರುವ ಮಾನವೀಯತೆಗೆ ಸೋಷಿಯಲ್ ಮೀಡಿಯಾದಲ್ಲಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವರುಣ್ ಧವನ್ ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೆ ಬಲಗೈಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಎಂಬಂತೆ, ನಟ ವರುಣ್ ಧವನ್ ಅವರು ಸಹಾಯ ಮಾಡಿ ಸುಮ್ಮನಾಗಿದ್ದಾರೆ. ಆದರೆ, ಅವರು ಸಹಾಯ ಪಡೆದುಕೊಂಡ ಡಾನ್ಸರ್ ಸ್ನೇಹಿತರ ಬಳಗ ಈ ಸಂಗತಿಯನ್ನು ಹೊರಜಗತ್ತಿಗೆ ಅನಾವರಣ ಮಾಡಿ ವರಣ್ ತೋರಿಸಿರುವ ಕಾಳಜಿಗೆ ಕೃತಜ್ಞತೆ ಸಲ್ಲಿಸಿದೆ.

ಅಂದಹಾಗೆ, ನಟ ವರುರ್ಣ ಧವನ್ ಅವರು ಇತ್ತೀಚೆಗೆ ನಟಿ ಆಲಿಯಾ ಭಟ್ ಜೋಡಿಯಾಗಿ ಬಹುತಾರಾಗಣದ 'ಕಳಂಕ್' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸಾಕಷ್ಟು ಹೊಸ ಪ್ರಾಜೆಕ್ಟ್‌ಗಳಿಗೆ ನಟ ವರುಣ್ ಧವನ್ ಸಹಿ ಹಾಕಿದ್ದು, ಒಟ್ಟಿನಲ್ಲಿ ಬಹಳಷ್ಟು ಬ್ಯುಸಿ ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌