ಆ್ಯಪ್ನಗರ

ಅಕ್ರಮ ಹಣ ವರ್ಗಾವಣೆ ಪ್ರಕರಣ; 5 ಗಂಟೆಗಳ ಕಾಲ 'ವಿಕ್ರಾಂತ್ ರೋಣ' ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿಚಾರಣೆ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರವಾಗಿ ಜಾರಿ ನಿರ್ದೇಶನಾಲಯ 5 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

TIMESOFINDIA.COM 30 Aug 2021, 7:56 pm
ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಡ್ಯಾನ್ಸ್ ಮಾಡಿದ್ದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ. ಐದು ಗಂಟೆಗಳ ಕಾಲ ಜಾಕ್ವೆಲಿನ್‌ರನ್ನು ದೆಹಲಿಯಲ್ಲಿ ವಿಚಾರಣೆ ನಡೆಸಿದೆ. ಸುಕೇಶ್ ಚಂದ್ರಶೇಖರ್ ನಡೆಸುತ್ತಿದ್ದ ಜಾಲದ ಸಂಬಂಧವಾಗಿ ಜಾಕ್ವೆಲಿನ್ ವಿಚಾರಣೆ ಮಾಡಲಾಗಿದೆ.
Vijaya Karnataka Web Jacqueline Fernandez


ಸುಕೇಶ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಪಟ್ಟಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ, 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದಾನೆ.

ಕಿಚ್ಚ ಸುದೀಪ್ 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಕನ್ನಡ ಕಲಿತು ನಟಿಸಿದ ನಟಿ ಜಾಕ್ವೆಲಿನ್ ಫರ್ನಾಂಡೀಸ್

ಜಾಕ್ವೆಲಿನ್ ಫರ್ನಾಂಡೀಸ್ ಈ ಪ್ರಕರಣದಲ್ಲಿ ಸಾಕ್ಷಿದಾರರು. ಹೀಗಾಗಿ ಜಾರಿ ನಿರ್ದೇಶನಾಲಯ ಇಂದು ಜಾಕ್ವೆಲಿನ್ ಫರ್ನಾಂಡೀಸ್ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಕೂಡ ಬಲಿಪಶು ಆಗಬಹುದು ಎಂದು ಕೂಡ ಹೇಳಲಾಗುತ್ತಿದೆ. ಈ ಘಟನೆ ಕುರಿತಂಂತೆ ಜಾಕ್ವೆಲಿನ್ ಮಾಧ್ಯಮದ ಬಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Photos: ನಟ ಕಿಚ್ಚ ಸುದೀಪ್‌ 'ವಿಕ್ರಾಂತ್ ರೋಣ' ಸಿನಿಮಾದಲ್ಲಿ 'ಗಡಂಗ್ ರಕ್ಕಮ್ಮ' ಜಾಕ್ವೆಲಿನ್ ಫರ್ನಾಂಡೀಸ್‌

ನಟ ಸೈಫ್ ಅಲಿ ಖಾನ್, ಅರ್ಜುನ್ ಕಪೂರ್, ಯಾಮಿ ಗೌತಮ್ ನಟನೆಯ 'ಭೂತ್ ಪೊಲೀಸ್' ಸಿನಿಮಾದಲ್ಲಿ ನಟಿಸಿದ್ದಾರೆ. ಮುಂದಿನ ತಿಂಗಳು ಓಟಿಟಿಯಲ್ಲಿ ಈ ಚಿತ್ರ ರಿಲೀಸ್ ಆಗುವ ಸಾಧ್ಯತೆಯಿದೆ. ಪವನ್ ಕಿರ್ಪಲಾನಿ ಅವರು ಈ ಚಿತ್ರದ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಬಾದ್‌ಷಾ ಜೊತೆಗೆ ಜಾಕ್ವೆಲಿನ್ ಫರ್ನಾಂಡೀಸ್ ಅವರು 'ಪಾನಿ ಪಾನಿ' ಆಲ್ಬಂ ಹಾಡಿನಲ್ಲಿ ಕಾಣಿಸಿಕೊಂಡಿದ್ದರು. 'ರಾಮ್ ಸೇತು', 'ಅಟ್ಯಾಕ್', 'ಬಚ್ಚನ್ ಪಾಂಡೆ' ಸಿನಿಮಾದಲ್ಲಿ ಕೂಡ ಜಾಕ್ವೆಲಿನ್ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ನಟನೆಯ 'ಕಿಕ್ 2' ಸಿನಿಮಾದಲ್ಲಿ ಕೂಡ ಜಾಕ್ವೆಲಿನ್ ಬಣ್ಣ ಹಚ್ಚುತ್ತಿದ್ದಾರೆ.

'ವಿಕ್ರಾಂತ್‌ ರೋಣ' ಚಿತ್ರದಲ್ಲಿ ಜಾಕ್ವೆಲಿನ್‌ ನೃತ್ಯ ಮಾಡುವುದಲ್ಲದೆ, ಕೆಲ ದೃಶ್ಯಗಳಲ್ಲಿಯೂ ನಟಿಸಿದ್ದಾರಂತೆ. ಅದಕ್ಕಾಗಿ ಅವರು ಕನ್ನಡವನ್ನು ಕಲಿತು ನಟಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಈ ವಿಶೇ‍ಷ ಹಾಡಿಗೋಸ್ಕರ ಬೆಂಗಳೂರಿನ ಕಂಠೀರವ ಸೆಟ್‌ನಲ್ಲಿ ವಿಭಿನ್ನವಾದ ಸೆಟ್‌ ಹಾಕಿ, ಆರು ದಿನಗಳ ಕಾಲ ಹಾಕಿ ಚಿತ್ರೀಕರಣ ಮಾಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌