ಆ್ಯಪ್ನಗರ

ಮರ್ಸೆಲ್‌ಗೆ ಸಪೋರ್ಟ್‌ ಮಾಡಿದ ಸಂಪತ್‌ರಾಜ್‌

ತಮಿಳು ನಟ ಇಳಯ ದಳಪತಿ ವಿಜಯ ಅಭಿನಯದ ಮೆರ್ಸೆಲ್‌ ಚಿತ್ರ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ.

Vijaya Karnataka Web 30 Oct 2017, 12:34 pm
ತಮಿಳು ನಟ ಇಳಯ ದಳಪತಿ ವಿಜಯ ಅಭಿನಯದ ಮರ್ಸೆಲ್‌ ಚಿತ್ರ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ನಟನ ವಿಚಾರದಲ್ಲಿ ಜಾತಿ ಧರ್ಮ ಕೂಡಾ ಚರ್ಚೆಯಾಗುತ್ತಿದೆ. ಈ ನಡುವೆ ಬಹುಭಾಷಾ ಖಳನಟ ಸಂಪತ್‌ ರಾಜ್‌ ನಟ ವಿಜಯ ಪರ ಬ್ಯಾಚ್‌ ಬೀಸಿದ್ದಾರೆ.
Vijaya Karnataka Web famous villain sampath raj supports mersal
ಮರ್ಸೆಲ್‌ಗೆ ಸಪೋರ್ಟ್‌ ಮಾಡಿದ ಸಂಪತ್‌ರಾಜ್‌


ಕ್ರಿಯೇಟಿವ್‌ ಫೀಲ್ಡ… ಸಿನೆಮಾವನ್ನು ಸಿನಿಮಾವಾಗಿ ಸ್ವೀಕರಿಸಬೇಕು. ಚಿತ್ರಕಥೆಯನ್ನು ನಿಜ ಜೀವನಕ್ಕೆ ಅಳವಡಿಸಿದರೆ ತೊಂದರೆ ಹೆಚ್ಚು ಎಂದಿದ್ದಾರೆ. ಬಣ್ಣ ಹಚ್ಚುವ ಕಲಾವಿದನಿಗೆ ಜಾತಿ ಇಲ್ಲ, ನಾನು ಉತ್ತರ ಪ್ರದೇಶದಲ್ಲಿ ಹುಟ್ಟಿದವನು. ದೆಹಲಿಯಲ್ಲಿ ಬೆಳೆದು ಬೆಂಗಳೂರಲ್ಲಿ ನೆಲೆಸಿದ್ದೇನೆ. ಮದ್ರಾಸಿನಲ್ಲಿ ನಾನು ಹೆಚ್ಚು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಈವರೆಗೆ ಯಾರೂ ನನ್ನ ಜಾತಿ ಕೇಳಿಲ್ಲ. ಟೀಕೆಯನ್ನು ಹೇಗೆ ಸ್ವೀಕಾರ ಮಾಡುತ್ತೀರಿ ಅನ್ನೋದು ಮುಖ್ಯ. ಅದನ್ನು ಚಾಲೆಂಜಾಗಿ ಯಾಕೆ ತೆಗೆದುಕೊಳ್ಳಬಾರದು ಎಂದು ಪ್ರಶ್ನೆ ಮಾಡಿ ಮೋದಿ ಪರ ಬ್ಯಾಚ್‌ ಬೀಸಿ ತಮಿಳುನಾಡಿನ ಹೋರಾಟಗಾರರಿಗೆ ಟಾಂಗ್‌ ನೀಡಿದ್ದಾರೆ. ಇತ್ತೀಚೆಗೆ ಅನುಕ್ತ ಸಿನಿಮಾದಲ್ಲಿ ನಟಿಸುವ ಸಲುವಾಗಿ ಸಂಪತ್‌ರಾಜ್‌ ಉಡುಪಿಗೆ ಬಂದಿದ್ದಾರೆ. ಈ ಸಮಯದಲ್ಲಿ ಮಾದ್ಯಮಗಳಿಗೆ ಹೀಗೆ ಮಾತನಾಡಿದ್ದಾಋುಎ. ಉಡುಪಿಯನ್ನು ನೋಡಿದ ಸಂಪತ್‌ಗೆ ಅಲ್ಲಿಯೇ ನೆಲೆಸುವ ಆಸೆಯಾಗಿದೆಯಂತೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌