ಆ್ಯಪ್ನಗರ

ಸುಪ್ರೀಂ ಮೆಟ್ಟಿಲೇರಿದ 'ಪದ್ಮಾವತ್' ನಿರ್ಮಾಪಕರು

ಸಾಕಷ್ಟು ವಿವಾದಗಳಿಗೆ ಕಾರಣವಾಗಿರುವ ಬಾಲಿವುಡ್ ಚಿತ್ರ 'ಪದ್ಮಾವತ್'. ಈ ಸಿನಿಮಾ ಕೊನೆಗೂ ಜನವರಿ 25ರಂದು ತೆರೆಗೆ ಬರುತ್ತಿದೆ. ಸೆನ್ಸಾರ್ ಮಂಡಳಿ ಕೆಲವು ಬದಲಾವಣೆಗಳನ್ನು ಮಾಡಿ ಸಿನಿಮಾಗೆ ಪ್ರಮಾಣ ಪತ್ರ ನೀಡಿದೆ.

TNN 17 Jan 2018, 12:24 pm
ಸಾಕಷ್ಟು ವಿವಾದಗಳಿಗೆ ಕಾರಣವಾಗಿರುವ ಬಾಲಿವುಡ್ ಚಿತ್ರ 'ಪದ್ಮಾವತ್'. ಈ ಸಿನಿಮಾ ಕೊನೆಗೂ ಜನವರಿ 25ರಂದು ತೆರೆಗೆ ಬರುತ್ತಿದೆ. ಸೆನ್ಸಾರ್ ಮಂಡಳಿ ಕೆಲವು ಬದಲಾವಣೆಗಳನ್ನು ಮಾಡಿ ಸಿನಿಮಾಗೆ ಪ್ರಮಾಣ ಪತ್ರ ನೀಡಿದೆ. ಆದರೂ ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಸಿನಿಮಾಗೆ ನಿಷೇಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರ ನಿರ್ಮಾಪಕರು ಬುಧುವಾರ ಸುಪ್ರೀಂ ಕೋರ್ಟ್‍ ಮೊರೆ ಹೋಗಿದ್ದಾರೆ.
Vijaya Karnataka Web padmaavat producer moves supreme court
ಸುಪ್ರೀಂ ಮೆಟ್ಟಿಲೇರಿದ 'ಪದ್ಮಾವತ್' ನಿರ್ಮಾಪಕರು


ಸೆನ್ಸರ್ ಮಂಡಳಿ ಅನುಮತಿ ನೀಡಿದ್ದರೂ ಸಿನಿಮಾವನ್ನು ತಡೆಯುವ ಹಕ್ಕು ಯಾವ ರಾಜ್ಯಕ್ಕೂ ಇಲ್ಲ. ತಮ್ಮ ಸಿನಿಮಾ ಎಲ್ಲಾ ರಾಜ್ಯಗಳಲ್ಲೂ ಬಿಡುಗಡೆಯಾಗುವಂತೆ ಅವಕಾಶ ನೀಡಬೇಕೆಂದು ನಿರ್ಮಾಪಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿರುವ ಪೀಠ ಪ್ರಕರಣದ ವಿಚಾರಣೆಯನ್ನು ಗುರುವಾರ ನಡೆಸುವುದಾಗಿ ಹೇಳಿದ್ದಾರೆ.

ಇನ್ನೊಂದು ಕಡೆ ಸಿನಿಮಾವನ್ನು ಜನವರಿ 25ಕ್ಕೆ ಅಲ್ಲದೆ ಜನವರಿ 24ಕ್ಕೇ ಬಿಡುಗಡೆ ಮಾಡಬೇಕೆಂದು ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ನಿರ್ಧರಿಸಿದ್ದಾಗಿ ಬಾಲಿವುಡ್ ಮೂಲಗಳು ಮಾಹಿತಿ ನೀಡಿವೆ. ಈ ಚಿತ್ರದಲ್ಲಿ ನಟಿಸಿರುವ ದೀಪಿಕಾ ಪಡುಕೋಣೆ, ಶಾಹಿದ್ ಕಪೂರ್, ರಣವೀರ್ ಸಿಂಗ್ ಜೀವ ಬೆದರಿಕೆ ಇರುವ ಕಾರಣ ಯಾವುದೇ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌