ಆ್ಯಪ್ನಗರ

ತೆರೆಗೆ ಪಿಆರ್‌ಕೆ ಬ್ಯಾನರ್ ಚೊಚ್ಚಲ ನಿರ್ಮಾಣದ ಕವಲುದಾರಿ

ನಾಳೆ, ಏಪ್ರಿಲ್ 12, 2019ರಂದು ಡಾ ರಾಜ್‌ಕುಮಾರ್ ಪುಣ್ಯ ಸ್ಮರಣೆ ಪ್ರಯುಕ್ತ ಪುನೀತ್ ನಿರ್ಮಾಣದ ಚೊಚ್ಚಲ ಸಿನಿಮಾ 'ಕವಲುದಾರಿ' ಬಿಡುಗಡೆ ಆಗುತ್ತಿದೆ. ಈ ಮೂಲಕ ಡಾ ರಾಜ್‌ಕುಮಾರ್ ಆಶೀರ್ವಾದಿಂದ ಅವರ ನೆನಪಿನಲ್ಲಿ ಸ್ಥಾಪಿಸಿದ ಸಂಸ್ಥೆಗೆ ಉತ್ತಮ ಆರಂಭ ಸಿಗಲಿದೆ.

Vijaya Karnataka Web 11 Apr 2019, 5:01 pm
"ಪಿಆರ್‌ಕೆ ಬ್ಯಾನರ್ ಹುಟ್ಟಿಕೊಂಡಿದ್ದೇ ಡಾ ರಾಜ್ ಕುಮಾರ್ ಅವರ ನೆನಪಿನಲ್ಲಿ ಮತ್ತು ಅವರ ಆಶೀರ್ವಾದದಲ್ಲಿ" ಎಂದು ನಟ ಹಾಗೂ ಡಾ ರಾಜ್‌ಕುಮಾರ್ ಮಗ ಪುನೀತ್ ರಾಜ್‌ಕುಮಾರ್ ಹೇಳಿದ್ದರು. ಈಗ ಪಿಆರ್‌ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಅಣ್ಣಾವ್ರ ನೆನಪಿನಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಈಗಾಗಲೇ ಸಾಕಷ್ಟು ಸೌಂಡ್ ಮಾಡಿದ್ದು, ಬಹಳಷ್ಟು ನಿರೀಕ್ಷೆ ಮೂಡಿಸಿದೆ ಎನ್ನಬಹುದು.
Vijaya Karnataka Web kavaludari


ನಾಳೆ, ಏಪ್ರಿಲ್ 12, 2019ರಂದು ಡಾ ರಾಜ್‌ಕುಮಾರ್ ಪುಣ್ಯ ಸ್ಮರಣೆ ಪ್ರಯುಕ್ತ ಪುನೀತ್ ನಿರ್ಮಾಣದ ಚೊಚ್ಚಲ ಸಿನಿಮಾ 'ಕವಲುದಾರಿ' ಬಿಡುಗಡೆ ಆಗುತ್ತಿದೆ. ಈ ಮೂಲಕ ಡಾ ರಾಜ್‌ಕುಮಾರ್ ಆಶೀರ್ವಾದಿಂದ ಅವರ ನೆನಪಿನಲ್ಲಿ ಸ್ಥಾಪಿಸಿದ ಸಂಸ್ಥೆಗೆ ಉತ್ತಮ ಆರಂಭ ಸಿಗಲಿದೆ. ಕವಲುದಾರಿ ಚಿತ್ರದಲ್ಲಿ 'ಆಪರೇಷನ್ ಅಲಮೇಲಮ್ಮ' ಖ್ಯಾತಿಯ ರಿಷಿ ನಾಯಕರಾಗಿ ನಟಿಸಿದ್ದು, ಹಿರಿಯ ನಟ ಅನಂತ್ ನಾಗ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸುಮನ್ ರಂಗನಾಥ್ ಹಾಗೂ ರೋಷನಿ ಪ್ರಕಾಶ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೊದಲು 'ಗೋಧಿಬಣ್ಣ ಸಾಧಾರಣ ಮೈಕಟ್ಟು' ನಿರ್ದೇಶಿಸಿದ್ದ ಹೇಮಂತ್ ಕುಮಾರ್ ಈ ಕವಲುದಾರಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಚರಣ್‌ರಾಜ್ ಸಂಗೀತ ನೀಡಿದ್ದಾರೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳು ಮೂಲಕ ಕವಲು ದಾರಿ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಭರವಸೆ ಮೂಡಿಸಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಕಥೆ ಹೊಂದಿರುವ ಈ ಚಿತ್ರ ಸಿನಿಪ್ರೇಕ್ಷಕರನ್ನ ರಂಜಿಸುವಲ್ಲಿ ನಿಜಕ್ಕೂ ಯಶಸ್ಸು ಕಾಣಬಹುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌