ಆ್ಯಪ್ನಗರ

ಸುಶಾಂತ್ ಪ್ರಕರಣ: ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದಂತೆ ಮುಂಬೈ ಪೊಲೀಸರಿಗೆ ಸೂಚನೆ!

ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನ ತನಿಖೆಯ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದಂತೆ ಮುಂಬೈ ಪೊಲೀಸರಿಗೆ ಸೂಚನೆ ನೀಡಲಾಗಿದೆಯಂತೆ. ಹೀಗೆ ಸೂಚನೆ ನೀಡಿದ್ದು ಯಾರು? ಏನಿದು ಹೊಸ ಸಮಾಚಾರ?

Vijaya Karnataka Web 4 Aug 2020, 4:23 pm
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹೊಸ ಹೊಸ ವಿಚಾರಗಳು ಬಹಿರಂಗಗೊಳುತ್ತಿವೆ. ಯಾವಾಗ ಸುಶಾಂತ್ ಸಿಂಗ್ ತಂದೆ ಕೆ.ಕೆ. ಸಿಂಗ್ ದೂರು ದಾಖಲಿಸಿದರೋ, ಆಗಿನಿಂದ ಇದು ಬಿಹಾರ ಮತ್ತು ಮಹಾರಾಷ್ಟ್ರ ಪೊಲೀಸರ ನಡುವೆ ಪೈಪೋಟಿಯೂ ಶುರುವಾಗಿದೆ. ಈಗಾಗಲೇ ಮುಂಬೈ ಪೊಲೀಸರು ನಮಗೆ ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಬಿಹಾರ ಪೊಲೀಸರು ಆರೋಪಿಸಿದ್ದಾರೆ. ಈ ಮಧ್ಯೆ ಮತ್ತೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ.
Vijaya Karnataka Web sushant singh rajput case mumbai police commissioner tells officers not to share information
ಸುಶಾಂತ್ ಪ್ರಕರಣ: ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದಂತೆ ಮುಂಬೈ ಪೊಲೀಸರಿಗೆ ಸೂಚನೆ!


ಮೂಲಗಳ ಪ್ರಕಾರ, ಮುಂಬೈ ಪೊಲೀಸ್ ಕಮೀಷನರ್‌ ಪರಮ್ ಬೀರ್ ಸಿಂಗ್‌, ತಮ್ಮ ಇಲಾಖೆಯ ಸಿಬ್ಬಂದಿಗಳಿಗೆ ಒಂದು ಸೂಚನೆ ನೀಡಿದ್ದಾರಂತೆ. ಅದೇನೆಂದರೆ, ಸುಶಾಂತ್ ಸಿಂಗ್ ಪ್ರಕರಣದ ಕುರಿತು ಯಾವುದೇ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಅವರು ತಿಳಿಸಿದ್ದಾರಂತೆ. ಜೊತೆಗೆ ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್‌ ಸಾವಿನ ಪ್ರಕರಣದ ಮಾಹಿತಿಗಳನ್ನು ಗೌಪ್ಯವಾಗಿ ಇಡಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸೋಮವಾರ ಸುಶಾಂತ್ ಮತ್ತು ದಿಶಾ ಪ್ರಕರಣವನ್ನು ತನಿಖೆ ಮಾಡುತ್ತಿರುವ ಎಲ್ಲ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಈ ಆದೇಶವನ್ನು ಅವರು ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಪ್ರಕರಣದ ಕುರಿತ ಯಾವುದೇ ಮಾಹಿತಿ, ದಾಖಲೆಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಸ್ಪಷ್ಟ ಸಂದೇಶ ನೀಡಲಾಗಿದೆಯಂತೆ. ಇದನ್ನು ಪ್ರತಿಯೊಬ್ಬರು ಪಾಲಿಸಲೇಬೇಕು ಎಂದು ಆದೇಶ ನೀಡಲಾಗಿದೆಯಂತೆ. ಪ್ರಸ್ತುತ ಸುಶಾಂತ್ ಆತ್ಮಹತ್ಯೆ ಪ್ರಕರಣ ಇಡೀ ದೇಶದ ಗಮನಸೆಳೆದಿದೆ. 'ಮುಂಬೈ ಪೊಲೀಸರು ನಮಗೆ ಸರಿಯಾದ ಸಹಕಾರ ನೀಡುತ್ತಿಲ್ಲ' ಎಂದು ಬಿಹಾರ ಪೊಲೀಸರು ಆರೋಪಿಸಿರುವ ಬೆನ್ನಲ್ಲೇ ಇಂತಹದ್ದೊಂದು ಸುದ್ದಿ ಹರಿದಾಡುತ್ತಿರುವುದು ಇನ್ನಷ್ಟು ಚರ್ಚೆ ಹುಟ್ಟುಹಾಕಿದೆ.

ಐದು ದಿನದಲ್ಲಿ 14 ಸಿಮ್ ಕಾರ್ಡ್ ಬದಲಾಯಿಸಿದ್ದ ಸುಶಾಂತ್! ಯಾರ ಹೆಸರಲ್ಲಿದ್ದವು ಆ ಸಿಮ್‌ ಕಾರ್ಡ್‌?

ಬಿಎಂಸಿ ಆಯುಕ್ತರಿಗೆ ಪಾಟ್ನಾ ಐಜಿಪಿ ಮನವಿ
ಸುಶಾಂತ್ ಸಿಂಗ್ ಸಾವಿನ ತನಿಖೆ ಮಾಡಲು ಮುಂಬೈಗೆ ಬಂದಿದ್ದ ಪಾಟ್ನಾ ಪೊಲೀಸ್‌ ಅಧಿಕಾರಿ ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದು ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿತ್ತು. 'ಪೊಲೀಸ್ ಅಧಿಕಾರಿಯು ನಿಮಯಗಳನ್ನು ಸರಿಯಾಗಿ ಪಾಲನೆ ಮಾಡಿರಲಿಲ್ಲ. ಅದಕ್ಕಾಗಿ ಕ್ವಾರಂಟೈನ್ ಮಾಡಲಾಗಿದೆ' ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದರು. ಇದೀಗ ಅವರನ್ನು ಕ್ವಾರಂಟೈನ್‌ನಿಂದ ಮುಕ್ತಗೊಳಿಸುವಂತೆ ಪಾಟ್ನಾ ಐಜಿಪಿ ಸಂಜಯ್ ಸಿಂಗ್ ಬಿಎಂಸಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ಮಾಡುವುದರಿಂದ ತನಿಖೆಗೆ ಅಡಚಣೆ ಆಗಲಿದೆ. ಅವರನ್ನು ಕೂಡಲೇ ಕ್ವಾರಂಟೈನ್‌ನಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇನ್ನು, ಬಿಹಾರ ಸಿಎಂ ನಿತೀಶ್ ಕುಮಾರ್‌ ಅವರು ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಸಿಫಾರಸ್ಸು ಮಾಡಿದ್ದಾರೆ.

ಶಾಕಿಂಗ್‌..! 'ನೋವಿಲ್ಲದೆ ಸಾಯುವುದು ಹೇಗೆ' ಎಂದು ಗೂಗಲ್‌ನಲ್ಲಿ ಸರ್ಚ್‌ ಮಾಡಿದ್ದ ಸುಶಾಂತ್?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌