ಆ್ಯಪ್ನಗರ

ಹುತಾತ್ಮ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ ಶಿವರಾಜ್‌ಕುಮಾರ್

ನಟ ಶಿವರಾಜ್‌ಕುಮಾರ್ ಅವರು 'ಪುಲ್ವಾಮಾದಲ್ಲಿ ಭಾರತದ ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕರ ಆತ್ಮಾಹುತಿ ದಾಳಿ' ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

Vijaya Karnataka Web 17 Feb 2019, 1:35 pm
ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು 'ಪುಲ್ವಾಮಾದಲ್ಲಿ ಭಾರತದ ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕರ ಆತ್ಮಾಹುತಿ ದಾಳಿ' ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಕೇರಳದಲ್ಲಿ ತಮ್ಮ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಂಡಿರುವ ನಟ ಶಿವರಾಜ್‌ಕುಮಾರ್ ಅವರು "ಹುತಾತ್ಮರಾದ ಯೋಧರ ಕುಟುಂಬಗಳ ಜೊತೆ ನಾವಿದ್ದೇವೆ" ಎಂದು ಸಾಂತ್ವನ ನುಡಿದಿದ್ದಾರೆ.
Vijaya Karnataka Web shivanna17


ಪುಲ್ವಾಮಾದಲ್ಲಿ ಭಾರತದ ಸೈನಿಕ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಯೋಧರು ವೀರ ಮರಣವನ್ನಪ್ಪಿರುವ ಸಂಗತಿ ಇಡೀ ಭಾರತದ ಜನರನ್ನು ಕಂಗೆಡಿಸಿದೆ. ಈ ಬಗ್ಗೆ ಸಿನಿಮಾ, ಕ್ರೀಡೆ ಹಾಗೂ ರಾಜಕೀಯ ವಲಯದ ಬಹಳಷ್ಟು ಗಣ್ಯ ವ್ಯಕ್ತಿಗಳು ಕಂಬನಿ ಮಿಡಿದಿದ್ದಾರೆ. ಬಹುತೇಕ ಸ್ಯಾಂಡಲ್‌ವುಡ್ ತಾರೆಗಳು 'ಪುಲ್ವಾಮಾ ದುರಂತ'ದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಷ್ಟೇ ಅಲ್ಲ, ಭಯೋತ್ಪಾದಕರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಆತ್ಮಕ್ಕೆ ಶಾಂತಿ ಕೋರಿ ಅವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಟ ಅನಂತ್ ನಾಗ್ "ಧರ್ಮದ ಆಧಾರದಲ್ಲಿ ದೇಶ ವಿಭಜನೆ ಆದ ಬಳಿಕವೂ ಇಂಥಹ ಹೇಯ ಕೃತ್ಯಗಳು ನಮ್ಮ ದೇಶದಲ್ಲಿ ಮುಂದುವರಿದಿವೆ. ಇದು ನಿಜವಾಗಿಯೂ ಯೋಚಿಸಬೇಕಾದ ಸಂಗತಿ. ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕರ ಈ ದಾಳಿ ಅತ್ಯಂತ ಭೀಕರ. ಇದು ದೇಶದಲ್ಲಿನ ಜನರ ಮನಸ್ಸನ್ನು ತೀವ್ರವಾಗಿ ಘಾಸಿ ಗೊಳಿಸಿದೆ. ಈಗ, ದೇಶದ ಪ್ರತಿನಿಧಿಯಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಯೋತ್ಪಾದಕ ವಿರುದ್ಧ ದಿಟ್ಟ ನಿಲುವನ್ನು ಪ್ರದರ್ಶಿಸಬೇಕಾಗಿದೆ" ಎಂದಿದ್ದಾರೆ ನಟ ಅನಂತ್ ನಾಗ್.

ರಿಯಲ್ ಸ್ಟಾರ್ ಉಪೇಂದ್ರ, ಯಶ್, ದರ್ಶನ್, ಪುನೀತ್, ಶಿವರಾಜ್‌ಕುಮಾರ್, ನೆನಪಿರಲಿ ಪ್ರೇಮ್, ನೀನಾಸಂ ಸತೀಶ್, ಸುಮಲತಾ ಅಂಬರೀಷ್ ಮುಂತಾದವರು ವೀರ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಕನ್ನಡ ನಟ ಅನಂತ್ ನಾಗ್ ಅವರೂ ಸಹ ಈ ಬಗ್ಗೆ ಮಾತನಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌