ಆ್ಯಪ್ನಗರ

ಹುಬ್ಬಳ್ಳಿ ಕಾಲೇಜಿನಲ್ಲಿ ಸುಮಲತಾ ಅಂಬರೀಷ್ ಹೇಳಿದ್ದೇನು?

ನನಗೆ ಮಂಡ್ಯದಲ್ಲಿ ಹೆಚ್ಚಾಗಿ ಮಹಿಳೆಯರು ಮತಹಾಕಿದ್ದಾರೆ. ಮಂಡ್ಯದ ಸ್ವಾಭಿಮಾನಿ ಜನತೆ ನನಗೆ ಮತನೀಡಿ ಸಂಸದೆ ಪಟ್ಟವನ್ನು ನೀಡಿದ್ದಾರೆ. ಅಷ್ಟೇ ಅಲ್ಲ, ರಾಜ್ಯದ ಎಲ್ಲ ಜನತೆಯ ಆಶೀರ್ವಾದ ನನ್ನ ಮೇಲಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ ಮತ್ತು ಆಶೀರ್ವಾದ ಹೀಗೇ ಇರಲಿ.

Vijaya Karnataka Web 15 Jun 2019, 5:20 pm
ಮಂಡ್ಯದ ನೂತನ ಸಂಸದೆ, ನಟಿ ಹಾಗು ಅಂಬರೀಷ್ ಪತ್ನಿ ಸುಮಲತಾ ಅಂಬರೀಷ್ ಅವರು ನಿನ್ನೆ ಧಾರವಾಡ ಮತ್ತು ಹಬ್ಬಳ್ಳಿಗೆ ಹೋಗಿದ್ದರು. ಹುಬ್ಬಳ್ಳಿ ಕಾಲೇಜಿನಲ್ಲಿ ಅಮರ್ ಚಿತ್ರದ ಬಗ್ಗೆ ಸಂವಾದ ಕಾರ್ಯಕ್ರಮ ಏರ್ಪಿಡಿಸಲಾಗಿತ್ತು. ಸಂವಾದ ಪ್ರಾರಂಭವಾಗುತ್ತಿದ್ದಂತೇ ವಿದ್ಯಾರ್ಥಿಗಳು 'ನಿಖಿಲ್ ಎಲ್ಲಿದೀಯಪ್ಪ?..' ಎಂದು ಕೂಗತೊಡಗಿದ್ದಾರೆ. ತಕ್ಷಣ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಮರ್ ನಾಯಕ, ಸುಮಲತಾ ಅಂಬರೀಷ್ ಮಗ ಅಭಿಷೇಕ್ "ಯಾರಾದ್ರೂ ಎಲ್ಲಾದ್ರೂ ಹೋಗ್ಲಿ ಬಿಡಿ... ನಾವು ಇಲ್ಲಿದೀವಿ... ದಯವಿಟ್ಟು ಅದನ್ನು ಬಿಟ್ಟು ಬಿಡಿ... " ಎಂದು ವಿನಂತಿಸಿಕೊಂಡಿದ್ದಾರೆ.
Vijaya Karnataka Web hubballi1506


ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡ ಸುಮಲತಾ ಅವರು ಮಾತನಾಡುತ್ತ "ನಾನು ಅಮರ್ ಚಿತ್ರದ ಪ್ರಮೋಶನ್‌ಗಾಗಿ ಇಲ್ಲಿಗೆ ಬಂದಿದ್ದೇನೆ. ನಿಮ್ಮನ್ನು ನೋಡಿ ತುಂಬಾ ಖುಷಿಯಾಯಿತು" ಎಂದು ಹೇಳಿ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ತಮ್ಮ ರಾಜಕೀಯ ಜೀವನದ ಬಗ್ಗೆ ಮಾತನಾಡುತ್ತ "ನನಗೆ ಮಂಡ್ಯದಲ್ಲಿ ಹೆಚ್ಚಾಗಿ ಮಹಿಳೆಯರು ಮತಹಾಕಿದ್ದಾರೆ. ಮಂಡ್ಯದ ಸ್ವಾಭಿಮಾನಿ ಜನತೆ ನನಗೆ ಮತನೀಡಿ ಸಂಸದೆ ಪಟ್ಟವನ್ನು ನೀಡಿದ್ದಾರೆ. ಅಷ್ಟೇ ಅಲ್ಲ, ರಾಜ್ಯದ ಎಲ್ಲ ಜನತೆಯ ಆಶೀರ್ವಾದ ನನ್ನ ಮೇಲಿದೆ.

ನಿಮ್ಮೆಲ್ಲರ ಪ್ರೀತಿ, ಹಾರೈಕೆ ಮತ್ತು ಆಶೀರ್ವಾದ ಹೀಗೇ ಇರಲಿ. ನಾನು ಮಂಡ್ಯದ ಸ್ವಾಭಿಮಾನಿ ಜನತೆ ಹಾಗೂ ರಾಜ್ಯದ ಎಲ್ಲ ಜನರ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದಾನೆ" ಎಂದು ಸುಮಲತಾ ಹುಬ್ಬಳ್ಳಿ ಕಾಲೇಜಿನಲ್ಲಿ ಹೇಳಿದ್ದಾರೆ. ಜೊತೆಗೆ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ಸಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅವರಿಬ್ಬರು ಲೋಕಸಭಾ ಚುನಾವಣೆ ಮತ್ತು ಅಮರ್ ಚಿತ್ರದ ಗೆಲುವಿಗಾಗಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ಪಾಲ್ಗೊಂಡರು.

ಧಾರವಾಡದ ಪುರಾಣ ಪ್ರಸಿದ್ಧ ನುಗ್ಗಿಕೇರಿ ಅಂಜನೇಯ ದೇವಸ್ಥಾನದಲ್ಲಿ 'ಮಂಡ್ಯದ ಲೋಕಸಭಾ ಚುನಾವಣೆ' ಮತ್ತು 'ಅಮರ್' ಚಿತ್ರದ ಗೆಲುವಿಗಾಗಿ ಅವರ ಅಭಿಮಾನಿಗಳು ತುಲಾಭಾರ ಸೇವೆ ಹರಕೆ ಹೊತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ ಅಭಿಷೇಕ್ ಅವರಿಗೆ 100 ಕೆಜಿ ಸಕ್ಕರೆ, 15 ಕೆಜಿ ತುಪ್ಪ ಮತ್ತು ಸುಮಲತಾ ಅವರಿಗೆ 75 ಕೆಜಿ ಸಕ್ಕರೆ, 15 ಕೆಜಿ ತುಪ್ಪದ ತುಲಾಭಾರ ನೇರವೇರಿಸಲಾಯಿತು. ಈ ಸಂದರ್ಭದಲ್ಲಿ ನಟ ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಿರ್ದೇಶಕ ಯೋಗರಾಜ್ ಭಟ್ ಮತ್ತು ಅಮರ್ ಚಿತ್ರದ ನಿರ್ದೇಶಕ ನಾಗಶೇಖರ್ ಸಹ ಇದ್ದರು.

ಅಂಬರೀಷ್ ಅಭಿಮಾನಿ ಹಾಗೂ ಉದ್ಯಮಿ ನಾರಾಯಣ ಕಲಾಲ್ ಅವರು ತುಲಾಭಾರ ಆಯೋಜಿಸಿದ್ದರು. ದೇವಸ್ಥಾನದ ಪಾರುಪತ್ತೆದಾರ ಪಿ.ಆರ್.ದೇಸಾಯಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಮಲತಾ ಅಂಬರೀಷ್, "ಏಳು ವರ್ಷಗಳ ಹಿಂದೆ ಹುಬ್ಬಳ್ಳಿ-ಧಾರವಾಡಕ್ಕೆ ಬಂದಿದ್ದೆ. ಈಗ ಮತ್ತೆ ಬರುವ ಅವಕಾಶ ಸಿಕ್ಕಿದೆ" ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌