ಆ್ಯಪ್ನಗರ

ಸ್ಯಾಂಡಲ್‌ವುಡ್‌ನಲ್ಲಿ ಕಾಣಿಸಿಕೊಂಡ ಹೃದಯ

ಒರಟ ಐ ಲವ್‌ ಯೂ ಸಿನಿಮಾದ ನಂತರ ನಾಯಕಿ ಹೃದಯಾ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ. ತ್ರಾಟಕ ಸಿನಿಮಾದ ಮೂಲಕ ಮತ್ತೆ ಬಣ್ಣ ಹಚ್ಚಿದ್ದಾರೆ.

Vijaya Karnataka 15 Jun 2018, 9:30 am
ತನ್ನ ಟೈಟಲ್‌ನಿಂದಾಗಿಯೇ ಗಮನ ಸೆಳೆದಿರುವ ತ್ರಾಟಕ ಸಿನಿಮಾದ ಮೂಲಕ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ ಹೃದಯ. ಒರಟ ಐ ಲವ್‌ ಯೂ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದ ಇವರು, ನಂತರ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ.
Vijaya Karnataka Web hrudaya


ಸಿನಿಮಾದ ಕಥೆಯೇ ವಿಭಿನ್ನವಾಗಿದೆಯಂತೆ. ಹಾಗಾಗಿ ಮತ್ತೆ ಚಿತ್ರ ಮಾಡಿದ್ದಾರೆ. ಅಪರಾಧಿಗಳ ಬೆನ್ನೆತ್ತುವ ಅಧಿಕಾರಿಗೆ ಏನೆಲ್ಲ ಸಂಕಷ್ಟಗಳು ಎದುರಾಗುತ್ತವೆ. ಅವುಗಳನ್ನು ಅಧಿಕಾರಿ ಹೇಗೆ ಎದುರಿಸುತ್ತಾನೆ ಎನ್ನುವುದನ್ನು ಸಿನಿಮಾದಲ್ಲಿ ಹೇಳಿದ್ದಾರೆ ನಿರ್ದೇಶಕ ಶಿವಗಣೇಶ್‌. ಇದೊಂದು ಮರ್ಡರ್‌ ಮಿಸ್ಟರಿ ಸಿನಿಮಾವಾಗಿದ್ದು, ಥ್ರಿಲ್‌ ನೀಡುವಂಥ ಹಲವು ಅಂಶಗಳು ಚಿತ್ರದಲ್ಲಿವೆ. ಪೊಲೀಸ್‌ ಅಧಿಕಾರಿಗಳ ನಿಜ ಜೀವನದಲ್ಲಿ ನಡೆದ ಅನೇಕ ಘಟನೆಗಳನ್ನು ಈ ಚಿತ್ರದಲ್ಲಿ ಬಳಸಿಕೊಂಡಿದ್ದಾರಂತೆ ನಿರ್ದೇಶಕರು.

ಉತ್ತರ ಕರ್ನಾಟಕ ಮೂಲದ ರಾಹುಲ್‌ ಈ ಚಿತ್ರದ ನಾಯಕ. ಈ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪೊಲೀಸ್‌ ಇನ್ಸ್‌ಪೆಕ್ಟ ಪಾತ್ರವನ್ನು ಇವರು ನಿರ್ವಹಿಸುತ್ತಿದ್ದಾರೆ. ಇವರ ಜತೆಯಾಗಿ ಹೃದಯಾ ನಟಿಸುತ್ತಿದ್ದಾರೆ. ಉಪನಾಯಕನಾಗಿ ಅಜಿತ್‌ ಜಯರಾಜ್‌ ಬಣ್ಣ ಹಚ್ಚಿದ್ದು, ಮೊನ್ನೆಯಷ್ಟೇ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌