ಆ್ಯಪ್ನಗರ

ನನಗೇನು ಆಗಿಲ್ಲ....ಚೆನ್ನಾಗಿದ್ದೇನೆ: ನಟಿ ಖುಷ್ಬೂ

ತನಗೇನು ಆಗಿಲ್ಲ, ನಾನು ಚೆನ್ನಾಗಿಯೇ ಇದ್ದೇನೆ ಎಂದು ಖ್ಯಾತ ಚಿತ್ರನಟಿ, ಕಾಂಗ್ರೆಸ್ ಮಹಿಳಾ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಅವರ ಮನೆಗೆ ಬಾಂಬ್ ಬೆದರಿಕೆ ಕರೆ ಬಂದ ಕಾರಣ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು.

ಏಜೆನ್ಸೀಸ್ 6 May 2017, 9:14 pm
ತನಗೇನು ಆಗಿಲ್ಲ, ನಾನು ಚೆನ್ನಾಗಿಯೇ ಇದ್ದೇನೆ ಎಂದು ಖ್ಯಾತ ಚಿತ್ರನಟಿ, ಕಾಂಗ್ರೆಸ್ ಮಹಿಳಾ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಅವರ ಮನೆಗೆ ಬಾಂಬ್ ಬೆದರಿಕೆ ಕರೆ ಬಂದ ಕಾರಣ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು.
Vijaya Karnataka Web actress khushbu says friends im doing fine
ನನಗೇನು ಆಗಿಲ್ಲ....ಚೆನ್ನಾಗಿದ್ದೇನೆ: ನಟಿ ಖುಷ್ಬೂ


ಆಕೆ ಹೇಗಿದ್ದಾರೆ ಎಂದು ತಿಳಿದುಕೊಳ್ಳಲು ಅಭಿಮಾನಿಗಳು ಹಾತೊರೆಯುತ್ತಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಖುಷ್ಬೂ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ತಾನು ಕ್ಷೇಮವಾಗಿರುವುದಾಗಿ, ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ. ಖುಷ್ಬೂ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಮಹಿಳೆಯೊಬ್ಬರು ಫೋನ್ ಮಾಡಿ ಬೆದರಿಕೆ ಒಡ್ಡಿದ್ದರು.

ಹಾಗಾಗಿ ಪೊಲೀಸರು ಖುಷ್ಬೂ ಮನೆಗೆ ಆಗಮಿಸಿ ಬಾಂಬ್‌ಗಾಗಿ ಹುಡುಕಾಟ ನಡೆಸಿದರು. ಕಡೆಗೆ ಅದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ದೂರವಾಣಿ ಕರೆ ಮಾಡಿದ್ದ ಮಹಿಳೆಯನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ ಸಂಪೂರ್ಣ ವಿವರಗಳನ್ನು ನೀಡುತ್ತೇನೆ. ಅಭಿಮಾನಿಗಳು ಈ ಬಗ್ಗೆ ಭಯಬೀಳುವ ಅಗತ್ಯವಿಲ್ಲ ಎಂದಿದ್ದಾರೆ.

Friends..I m dng fine..thank u 4 all the love n concern..Police r investigating the bomb threat at my residence..wl spk aftr investigation. — khushbusundar (@khushsundar) May 6, 2017

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌