ಆ್ಯಪ್ನಗರ

ಆಸ್ಪತ್ರೆಗೆ ನಟಿ ಖುಷ್ಬೂ ದಾಖಲು, ಇಷ್ಟಕ್ಕೂ ಏನಾಯಿತು?

ಖುಷ್ಬೂ ಅವರ ಟ್ವೀಟ್‌‌ಗೆ ಹಲವಾರು ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದು ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಇತ್ತೀಚೆಗೆ ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಹದ್ ಪರ ಪ್ರಚಾರಕ್ಕೆ ಬಂದಿದ್ದಾಗ ನಟಿ ಖುಷ್ಬೂ ಜತೆ ಅನುಚಿತವಾಗಿ ವರ್ತಿಸಿದ ಯುವಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿತ್ತು.

Vijaya Karnataka Web 24 May 2019, 5:25 pm
ದಕ್ಷಿಣದ ತಾರೆ ಖುಷ್ಬೂ ಕಾಂಗ್ರೆಸ್ ಪಕ್ಷದ ಪರವಾಗಿ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು ಗೊತ್ತೇ ಇದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಖುಷ್ಬೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸ್ವತಃ ಖುಷ್ಬೂ ಟ್ವೀಟ್ ಮಾಡಿದ್ದಾರೆ.
Vijaya Karnataka Web khushboo (1)


ಚುನಾವಣೆ ಫಲಿತಾಂಶಕ್ಕಾಗಿ ಕುತೂಹಲದಿಂದ ನಿರೀಕ್ಷಿಸುತ್ತಿರುವ ಸಂದರ್ಭದಲ್ಲಿ ನನ್ನ ಪರಿಸ್ಥಿತಿ ಈ ರೀತಿ ಆಗಿದೆ. ಆಸ್ಪತ್ರೆ ಪಾಲಾಗಿದ್ದೇನೆ ಎಂದಿದ್ದಾರೆ. "ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಾನು ಟಿವಿಗಳಲ್ಲಿ ಕಾಣಿಸಲ್ಲ. ಯಾಕೆಂದರೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾಳೆ ನಡೆಯಲಿರುವ ಡ್ರಾಮಾ ಮಿಸ್ ಆಗುತ್ತಿದ್ದೇನೆ. ನಾವು ಏನಾದರೂ ಪ್ಲಾನ್ ಮಾಡಿಕೊಂಡರೆ ಪ್ರಕೃತಿ ಮತ್ತೊಂದು ಎಣಿಸುತ್ತದೆ. ತುಂಬಾ ನಿರಾಸೆಗೆ ಒಳಗಾಗಿದ್ದೇನೆ" ಎಂದಿದ್ದಾರೆ.

ಖುಷ್ಬೂ ಅವರ ಟ್ವೀಟ್‌‌ಗೆ ಹಲವಾರು ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದು ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಇತ್ತೀಚೆಗೆ ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಹದ್ ಪರ ಪ್ರಚಾರಕ್ಕೆ ಬಂದಿದ್ದಾಗ ನಟಿ ಖುಷ್ಬೂ ಜತೆ ಅನುಚಿತವಾಗಿ ವರ್ತಿಸಿದ ಯುವಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿತ್ತು.

ಬೆಂಗಳೂರಿನ ಹೊಯ್ಸಳ ನಗರಕ್ಕೆ ಬರುತ್ತಿದ್ದಂತೆ ಯುವಕನೊಬ್ಬ ಖುಷ್ಬೂ ಅವರ ಸೊಂಟ ಮುಟ್ಟಿದಾಗ ರೊಚ್ಚಿಗೆದ್ದ ನಟಿ ಹಿಂದಿರುಗಿ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ. ಈ ದೃಶ್ಯ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌