ಆ್ಯಪ್ನಗರ

ಉರ್ವಿ ನಿರ್ದೇಶಕನ ಚಿತ್ರದಲ್ಲಿ ಅನುಪಮಾ ಗೌಡ

ಆ ಕರಾಳ ರಾತ್ರಿ ಚಿತ್ರದಲ್ಲಿ ನಟಿಸಿದ್ದ ನಟಿ ಅನುಪಮಾ ಗೌಡ ಹೊಸ ಚಿತ್ರಕ್ಕೆ ಸಹಿ ಮಾಡಿದ್ದಾರೆ.

Vijaya Karnataka 2 Jul 2019, 5:00 am
ಆ ಕರಾಳ ರಾತ್ರಿ ಚಿತ್ರದಲ್ಲಿ ನಟಿಸಿದ್ದ ನಟಿ ಅನುಪಮಾ ಗೌಡ ಹೊಸ ಚಿತ್ರಕ್ಕೆ ಸಹಿ ಮಾಡಿದ್ದಾರೆ. ನಿರ್ದೇಶಕ ಬಿ.ಎಸ್‌. ಪ್ರದೀಪ್‌ ವರ್ಮಾ ಹೊಸ ಚಿತ್ರ ನಿರ್ದೇಶನ ಮಾಡಲು ಸಿದ್ಧರಾಗಿದ್ದು, ಇದರಲ್ಲಿ ಅನುಪಮಾ ಗೌಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವಿಷಯವನ್ನು ಸ್ವತಃ ನಿರ್ದೇಶಕ ಪ್ರದೀಪ್‌ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Vijaya Karnataka Web anupama 7


'ಕ್ರೇಜಿ ಹುಡುಗಿ, ಆಸಮ್‌ ಹ್ಯೂಮನ್‌ ಬೀಯಿಂಗ್‌. ಶೂಟಿಂಗ್‌ ಜುಲೈ 7ರಿಂದ ಪ್ರಾರಂಭವಾಗಲಿದೆ. ಕ್ರೇಜಿ ಸಂಗತಿಗಳು ಸದ್ಯದಲ್ಲೇ ನಿಮ್ಮ ಮುಂದೆ ಬರಲಿದೆ' ಎಂದು ಬರೆದುಕೊಂಡಿದ್ದಾರೆ. ಪ್ರದೀಪ್‌ ಉರ್ವಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ಶ್ರುತಿ ಹರಿಹರನ್‌ ನಟಿಸಿದ್ದರು. ಹೊಸ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ.

ನಟಿ ಅನುಪಮಾ ಗೌಡ ಬಿಗ್‌ ಬಾಸ್‌ ಮನೆಯಿಂದ ಬಂದ ನಂತರ ಆ ಕರಾಳ ರಾತ್ರಿ ಚಿತ್ರದಲ್ಲಿ ನಟಿಸಿದ್ದರು. ನಂತರ ಕೆಲ ತಿಂಗಳ ಹಿಂದೆ ಅವರ ನಟನೆಯ ತ್ರಯಂಬಕಂ ಚಿತ್ರ ರಿಲೀಸ್‌ ಆಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌