ಆ್ಯಪ್ನಗರ

ನಟಿ ಜಯಶ್ರೀಯನ್ನು ನಡುರಾತ್ರಿಯಲ್ಲಿ ಬೀದಿಗೆ ತಳ್ಳಿದ ಸೋದರ ಮಾವ

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯ ಸ್ವಂತ ಮಾವನೇ ಕಿರುಕುಳ ನೀಡಿದ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ನಡುರಾತ್ರಿ ಎಂಬುದನ್ನೂ ಲೆಕ್ಕಿಸದೆ ಮನೆಯಿಂದ ಹೊರಹಾಕಿದ ಅಮಾನವೀಯತೆ ಮೆರೆದಿದ್ದು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka Web 11 Sep 2019, 2:24 pm

ಬಿಗ್ ಬಾಸ್ ಕನ್ನಡ ಸೀಸನ್ 3ರ ಸ್ಪರ್ಧಿ, ನಟಿ ಜಯಶ್ರೀ ಮತ್ತವರ ತಾಯಿಯನ್ನು ಸೋದರ ಮಾವ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web jayashree-ramaiah


ಘಟನೆಯ ವಿವರಗಳು ಈ ರೀತಿ ಇವೆ. ಈವೆಂಟ್ ಆರ್ಗನೈಸರ್ ಆಗಿರುವ ಜಯಶ್ರೀ ಸೋದರ ಮಾವ ಗಿರೀಶ್ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿರುವುದಾಗಿ ದೂರು ನೀಡಲಾಗಿದೆ. ನಡುರಾತ್ರಿ ಅನ್ನೋದನ್ನೂ ಲೆಕ್ಕಿಸದೆ ಮನೆಯಿಂದ ಹೊರ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ ಜಯಶ್ರೀ.
ನಟಿಗೆ ಲೈಂಗಿಕ ಕಿರುಕುಳ, ದೂರು ದಾಖಲು

ಸದ್ಯ ಅಶೋಕನಗರದಲ್ಲಿರುವ ಅಜ್ಜಿಯ ಮನೆಯಲ್ಲಿ ಜಯಶ್ರೀ ಆಶ್ರಯ ಪಡೆದಿದ್ದಾರೆ. ಮಾವ ಗಿರೀಶ್ ವಿರುದ್ದ ದೂರು ದಾಖಲಿಸಿದ್ದು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆಸ್ತಿ ವಿವಾದ ಮತ್ತು ಖಾಸಗಿ ಕಾರಣಗಳೇ ಈ ಜಗಳಕ್ಕೆ ಕಾರಣ ಎನ್ನಲಾಗಿದೆ. ಸೆಪ್ಟೆಂಬರ್ 10ರ ನಡುರಾತ್ರಿ ಈ ಘಟನೆ ನಡೆದಿದೆ.

ಬಿಗ್ ಬಾಸ್ ಬಳಿಕ ಜಯಶ್ರೀ ನಟನೆ ಕಡೆಗೆ ಗಮನಹರಿಸಿದ್ದರು. ಖಾಸಗಿ ಕಂಪೆನಿಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿದ್ದರೂ ಮಾಡೆಲಿಂಗ್ ಕ್ಷೇತದ ಕಡೆಗೆ ಆಕರ್ಷಿತರಾಗಿದ್ದರು. ಬಳಿಕ ಬಿಗ್ ಬಾಸ್‌ಗೆ ಅಡಿಯಿಟ್ಟು ಎಲ್ಲರ ಗಮನಸೆಳೆದದ್ದು ಗೊತ್ತೇ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌