ಆ್ಯಪ್ನಗರ

ಚಿರತೆಗಳನ್ನು ದತ್ತು ಪಡೆದು ಆದರ್ಶ ಮೆರೆದ ನಟ ದರ್ಶನ್ ಅಭಿಮಾನಿಗಳು

ಅಖಿಲ ಭಾರತ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಬೆಂಗಳೂರು ಮತ್ತು ಚನ್ನಪಟ್ಟಣದ ಕರುನಾಡ ಭೂಪತಿ ಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘಗಳ ವತಿಯಿಂದ ತಲಾ 35,000 ರೂ. ಪಾವತಿಸಿ ಎರಡು ಚಿರತೆಗಳನ್ನು ಫೆ.16ರಿಂದ ಒಂದು ವರ್ಷದ ಅವಧಿಗೆ ದತ್ತು ಸ್ವೀಕರಿಸಲಾಸಿದ್ದಾರೆ.

Vijaya Karnataka Web 16 Feb 2019, 9:20 am
ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ. ಆದರೆ ಈ ಸಲ ಅವರು ಹುಟ್ಟುಹಬ್ಬನ್ನು ಆಚರಿಸಿಕೊಳ್ಳುತ್ತಿಲ್ಲ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಹಿರಿಯ ನಟ ಅಂಬರೀಷ್‌ ಅವರ ನಿಧನದ ಹಿನ್ನೆಲೆಯಲ್ಲಿ ಬಾಕ್ಸ್‌ ಆಫೀಸ್‌ ಸುಲ್ತಾನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಫೆ.16) ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ.
Vijaya Karnataka Web darshan


ಮುಖ್ಯವಾಗಿ ದರ್ಶನ್‌ಗೆ ಪ್ರಾಣಿಗಳು ಎಂದರೆ ಎಲ್ಲಿಲ್ಲದ ಅಕ್ಕರೆ. ಈಗಾಗಲೆ ಅವರು ಮೈಸೂರು ಮೃಗಾಲಯದಲ್ಲಿ ಹಲವಾರು ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದಿದ್ದಾರೆ. ಅವರ ಫಾರ್ಮ್ ಹೌಸ್‌ನಲ್ಲೂ ಹಲವಾರು ಪ್ರಾಣಿಗಳಿಗೆ ಆಶ್ರಯ ನೀಡಿದ್ದಾರೆ. ಇದನ್ನೇ ಅವರ ಅಭಿಮಾನಿಗಳು ಈಗ ಫಾಲೋ ಮಾಡುತ್ತಿದ್ದಾರೆ. ಚಲನಚಿತ್ರ ನಟ ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಶುಕ್ರವಾರ ಮೈಸೂರಿನ ಚಾಮರಾಜ ಮೃಗಾಲಯದ ಎರಡು ಚಿರತೆಗಳನ್ನು ದತ್ತು ಸ್ವೀಕರಿಸಿದ್ದಾರೆ.

ಅಖಿಲ ಭಾರತ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ ಬೆಂಗಳೂರು ಮತ್ತು ಚನ್ನಪಟ್ಟಣದ ಕರುನಾಡ ಭೂಪತಿ ಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ
ಸಂಘಗಳ ವತಿಯಿಂದ ತಲಾ 35,000 ರೂ. ಪಾವತಿಸಿ ಎರಡು ಚಿರತೆಗಳನ್ನು ಫೆ.16ರಿಂದ ಒಂದು ವರ್ಷದ ಅವಧಿಗೆ ದತ್ತು ಸ್ವೀಕರಿಸಲಾಸಿದ್ದಾಗಿ ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೊಂದು ಕಡೆ ದರ್ಶನ್ ಅಭಿಮಾನಿಗಳಿಗೆ ಇನ್ನೊಂದು ಕರೆಯನ್ನೂ ನೀಡಿದ್ದಾರೆ. ತಮ್ಮ ಟ್ವಿಟರ್‌ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. "ಇತ್ತೀಚೆಗೆ ಕೆಲವು ಅಭಿಮಾನಿಗಳು ನನ್ನ ಹುಟ್ಟು ಹಬ್ಬದ ಪ್ರಯುಕ್ತ ನನ್ನ ಮನೆಯ ಹತ್ತಿರ ಆಹಾರ ಪದಾರ್ಥಗಳನ್ನು ತಂದು ನೀಡುತ್ತೇವೆ, ಅದನ್ನು ಸಿದ್ದಗಂಗಾ ಮಠ ಹಾಗೂ ಕೆಲವು ಅನಾಥಾಶ್ರಮಕ್ಕೆ ತಲುಪಿಸಿ ಎಂದು ಕೇಳಿಕೊಂಡು ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ಬಿಟ್ಟಿರುವುದು ತುಂಬಾ ಸಂತೋಷದ ವಿಷಯ, ನನ್ನ ಹುಟ್ಟು ಹಬ್ಬಕ್ಕೆ ನೀವುಗಳು ಕೊಡುತ್ತಿರುವ ಉಡುಗೊರೆ ಎಂದು ತಿಳಿದು ಅದನ್ನು ಪ್ರತಿ ಜಿಲ್ಲೆಯ ಒಂದು ಅನಾಥಾಶ್ರಮಕ್ಕೆ, ಒಂದು ವೃದ್ಧಾಶ್ರಮಕ್ಕೆ ಹಾಗೂ ಸಿದ್ದಗಂಗಾ ಮಠಕ್ಕೆ ತಲುಪಿಸುವ ಜವಾಬ್ದಾರಿಯನ್ನು ತುಂಬಾ ಸಂತೋಷದಿಂದ ನಾನೇ ತೆಗೆದು ಕೊಳ್ಳುತ್ತೇನೆ, ಎಂದು ಹೇಳಿರುವ ದರ್ಶನ್‌ ಮಾತು ಅಭಿಮಾನಿಗಳು ಸಂಭ್ರಮಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌