ಆ್ಯಪ್ನಗರ

ಶ್ರೀರಂಗಪಟ್ಟಣದಲ್ಲಿ ಭಾರಿ ಆರ್ಭಟಿಸಲಿರುವ 'ಡಿ ಬಾಸ್' ದರ್ಶನ್

ದರ್ಶನ್ ವಿರುದ್ಧ ಸಾಕಷ್ಟು ಟೀಕಾ ಪ್ರಹಾರ ಮಾಡುತ್ತಿದ್ದಾರೆ ಮುಖ್ಯಮಂತ್ರಿ ಕುಮಾರಸ್ವಾಮಿ. ಆದಾಗ್ಯೂ ಕೂಡ ನಟ ದರ್ಶನ್ ಆ ಬಗ್ಗೆ ತಲೆ ಕೆಡಿಸಿಕೊಳ್ಳದೇ ಸುಮಲತಾ ಪರ ಪ್ರಚಾರವನ್ನು ಮುಂದುವರಿಸಲಿದ್ದಾರೆ ಎನ್ನಲಾಗಿದೆ.

Vijaya Karnataka Web 31 Mar 2019, 7:03 pm
ಕನ್ನಡದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಳೆಯಿಂದ ಮತ್ತೆ ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಕಣಕ್ಕೆ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟಿ ಹಾಗೂ ದಿವಂಗತ ರೆಬಲ್ ಸ್ಟಾರ್ ಅಂಬರೀಷ್ ಅವರ ಪತ್ನಿ ಸುಮಲತಾ ಪರ ಪ್ರಚಾರಕ್ಕೆ ದರ್ಶನ್ ಅವರು ನಾಳೆ ಬೆಳಿಗ್ಗೆ ಶ್ರೀರಂಗಪಟ್ಟಣಕ್ಕೆ ಹೋಗಲಿದ್ದಾರೆ ಎನ್ನಲಾಗಿದೆ.
Vijaya Karnataka Web darshan3103


ಮಂಡ್ಯ ಲೋಕಸಭೆಯ ಚುನಾವಣೆಯ ರಂಗು ನಾಳೆಯಿಂದ ಮತ್ತಷ್ಟು ಹೆಚ್ಚಾಗಲಿದೆ. ಕಾರಣ, ಅಭಿಮಾನಿಗಳ 'ಡಿ ಬಾಸ್‍' ದರ್ಶನ್ ಅವರು ನಾಳೆ ಮಂಡ್ಯದಲ್ಲಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಪ್ರಚಾರಕ್ಕೆ ಹೋಗಲಿದ್ದಾರೆ. ಶ್ರೀರಂಗಪಟ್ಟಣದ ನಂತರ, ಹುಲಿಕೆರೆ, ಮಂಟಿ, ಮೊಗರಹಳ್ಳಿ, ಹಂಪಾಪುರ, ಚೆನ್ನಹಳ್ಳಿ, ಬಿದರಹಳ್ಳಿ, ತದಗವಾಡಿ, ಕೊಡಿಯಾಲ ಸೇರಿದಂತೆ ಹಲವು ಗ್ರಾಮಗಳಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಜೊತೆಗೆ ನಟ ದರ್ಶನ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಜೆಡಿಎಸ್ ಪಕ್ಷದಿಂದ ಮಂಡ್ಯದಲ್ಲಿ ಅಭ್ಯರ್ಥಿಯಾಗಿ ನಿಂತಿರುವ ಮುಖ್ಯಮಂತ್ರಿ ಮಗ ನಿಖಿಲ್ ಕುಮಾರಸ್ವಾಮಿ ಪರವಾಗಿ ಸ್ವತಃ ಕುಮಾರಸ್ವಾಮಿಯವರು ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ. ಅವರು ನಟ ದರ್ಶನ್ ಅವರಿಗೆ ಬಹಳಷ್ಟು ಟಾಂಗ್ ಕೊಡುವ ಮೂಲಕ ನಟ ದರ್ಶನ್ ಅವರು ಸುಮಲತಾ ಪರ ಪ್ರಚಾರ ಮಾಡುವುದನ್ನು ಬಹಿರಂಗವಾಗಿಯೇ ವಿರೋಧಿಸುತ್ತಿದ್ದಾರೆ. ದರ್ಶನ್ ವಿರುದ್ಧ ಸಾಕಷ್ಟು ಟೀಕಾ ಪ್ರಹಾರ ಮಾಡುತ್ತಿದ್ದಾರೆ ಮುಖ್ಯಮಂತ್ರಿ ಕುಮಾರಸ್ವಾಮಿ. ಆದಾಗ್ಯೂ ಕೂಡ ನಟ ದರ್ಶನ್ ಆ ಬಗ್ಗೆ ತಲೆ ಕೆಡಿಸಿಕೊಳ್ಳದೇ ಸುಮಲತಾ ಪರ ಪ್ರಚಾರವನ್ನು ಮುಂದುವರಿಸಲಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲ, ನಾಳೆ, ಏಪ್ರಿಲ್ 01 ರಂದು ನಟ ದರ್ಶನ್ ಅವರು ಸುಮಲತಾ ಪರ ಪ್ರಚಾರ ಮಾಡಲಿದ್ದರೆ ನಾಡಿದ್ದು, ಏಪ್ರಿಲ್ 02ರಂದು ನಟ ರಾಕಿಂಗ್ ಸ್ಟಾರ್ ಯಶ್ ಅವರು ಸುಮಲತಾ ಪರ ಪ್ರಚಾರಕಾರ್ಯದಲ್ಲಿ ಭಾಗಿಯಾಗುವುದು ಪಕ್ಕಾ ಎನ್ನಲಾಗಿದೆ. ಅಲ್ಲಿಗೆ, ಮುಖ್ಯಮಂತ್ರಿ ಕುಮಾರಸ್ವಾಮಿ ಏನೇ ಬೊಬ್ಬೆ ಹೊಡೆದರೂ ಸ್ಯಾಂಡಲ್‌ವುಡ್ ನಟನರು ಸುಮಲತಾ ಅವರಿಗೆ ಬೆಂಬಲ ಸೂಚಿಸುವುದನ್ನು ಬಿಡುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಒಟ್ಟಿನಲ್ಲಿ, ಮಂಡ್ಯ ಚುನಾವಣಾ ಕಣವು ರಾಜ್ಯದಲ್ಲೇ ಅತ್ಯಂತ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರ ಎನ್ನಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌