ಕನ್ನಡದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚುನಾವಣೆ ಪ್ರಚಾರದಲ್ಲಿ ಸಖತ್ ಬ್ಯಸಿಯಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕೆ ಇಳಿದಿರುವ ನಟಿ ಸುಮಲತಾ ಅಂಬರೀಷ್ ಪರ ದರ್ಶನ್ ಪ್ರಚಾರ ಮಾಡುತ್ತಿದ್ದಾರೆ. ಯಜಮಾನ ಚಿತ್ರದ ಬಿಡುಗಡೆ ಬಳಿಕ ಒಡೆಯ ಚಿತ್ರದ ಶೂಟಿಂಗ್ ಮಗಿಸಿಕೊಟ್ಟಿರುವ ನಟ ದರ್ಶನ್ ಅವರು ಸದ್ಯಕ್ಕೆ ಫುಲ್ ಚುನಾವಣೆ ಪ್ರಚಾರಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಜೆಡಿಎಸ್ ಸಂಸದ ಶಿವರಾಮೇಗೌಡ ಅವರು ಸುಮಲತಾ ಅಂಬರೀಶ್ ಬಗ್ಗೆ "ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನ ಮೀರಿಸುವಂತಹ ಮಾಯಾಂಗನೆ ಸುಮಲತಾ" ಎಂದು ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ದರ್ಶನ್ ಪ್ರಚಾರ ಮಾಡುತ್ತಿದ್ದ ವೇಳೆ, ಶಿವರಾಮೇಗೌಡ ಅವರ ಟೀಕೆಗೆ ಏನು ಹೇಳುತ್ತೀರಿ ಎಂಬ ಪ್ರಶ್ನೆಗೆ ನಟ ದರ್ಶನ್ "ಯಾರೇ ಆಗಲಿ, ಯಾವುದೇ ರೀತಿಯಲ್ಲಿ ಟೀಕೆ ಮಾಡಿದರೂ ನಾವು ಕೋಪ ಮಾಡಿಕೊಳ್ಳಲ್ಲ, ಬೇಜಾರು ಮಾಡಿಕೊಳ್ಳಲ್ಲ, ನೊಂದುಕೊಳ್ಳುವುದಿಲ್ಲ"ಎಂದು ಮೊದಲಿನ ಉತ್ತರವನ್ನೇ ನೀಡಿ ಅಲ್ಲಿದ್ದವರ ಮುಖದಲ್ಲಿ ನಗು ಮೂಡಿಸಿದ್ದಾರೆ.
ಅಂದಹಾಗೆ, ನಟರಾದ ದರ್ಶನ್ ಮತ್ತು ಯಶ್ ಅವರಿಬ್ಬರೂ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರಕಾರ್ಯಕ್ಕೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಈ ಇಬ್ಬರೂ ಬೇರೆ ಬೇರೆಯಾಗಿ, ಬೇರೆ ಬೇರೆ ಕಡೆಗಳಲ್ಲಿ ಸುಮಲತಾ ಪರ ಪ್ರಚಾರ ಕೈಗೊಂಡಿದ್ದಾರೆ. ಅವರಿಬ್ಬರು ಹೋದಲ್ಲೆಲ್ಲ ಲಕ್ಷಾಂತರ ಜನರು ಸೇರುತ್ತಿದ್ದಾರೆ. ಡಿ ಬಾಸ್ ಹಾಗೂ ರಾಕಿಂಗ್ ಸ್ಟಾರ್ ಅವರಿಬ್ಬರಿಗೂ ಮಂಡ್ಯದಲ್ಲಿ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಸುಮಲತಾ ಅವರಿಗೆ ಈ ಇಬ್ಬರೂ ಮನೆಯ ಮಕ್ಕಳಂತೆ ಬೆಂಬಲ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವು ತೀವ್ರ ಕುತೂಹಲ ಕೆರಳಿಸುವ ರಣರಂಗವಾಗಿದೆ.
ಜೆಡಿಎಸ್ ಸಂಸದ ಶಿವರಾಮೇಗೌಡ ಅವರು ಸುಮಲತಾ ಅಂಬರೀಶ್ ಬಗ್ಗೆ "ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನ ಮೀರಿಸುವಂತಹ ಮಾಯಾಂಗನೆ ಸುಮಲತಾ" ಎಂದು ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ದರ್ಶನ್ ಪ್ರಚಾರ ಮಾಡುತ್ತಿದ್ದ ವೇಳೆ, ಶಿವರಾಮೇಗೌಡ ಅವರ ಟೀಕೆಗೆ ಏನು ಹೇಳುತ್ತೀರಿ ಎಂಬ ಪ್ರಶ್ನೆಗೆ ನಟ ದರ್ಶನ್ "ಯಾರೇ ಆಗಲಿ, ಯಾವುದೇ ರೀತಿಯಲ್ಲಿ ಟೀಕೆ ಮಾಡಿದರೂ ನಾವು ಕೋಪ ಮಾಡಿಕೊಳ್ಳಲ್ಲ, ಬೇಜಾರು ಮಾಡಿಕೊಳ್ಳಲ್ಲ, ನೊಂದುಕೊಳ್ಳುವುದಿಲ್ಲ"ಎಂದು ಮೊದಲಿನ ಉತ್ತರವನ್ನೇ ನೀಡಿ ಅಲ್ಲಿದ್ದವರ ಮುಖದಲ್ಲಿ ನಗು ಮೂಡಿಸಿದ್ದಾರೆ.
ಅಂದಹಾಗೆ, ನಟರಾದ ದರ್ಶನ್ ಮತ್ತು ಯಶ್ ಅವರಿಬ್ಬರೂ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರಕಾರ್ಯಕ್ಕೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಈ ಇಬ್ಬರೂ ಬೇರೆ ಬೇರೆಯಾಗಿ, ಬೇರೆ ಬೇರೆ ಕಡೆಗಳಲ್ಲಿ ಸುಮಲತಾ ಪರ ಪ್ರಚಾರ ಕೈಗೊಂಡಿದ್ದಾರೆ. ಅವರಿಬ್ಬರು ಹೋದಲ್ಲೆಲ್ಲ ಲಕ್ಷಾಂತರ ಜನರು ಸೇರುತ್ತಿದ್ದಾರೆ. ಡಿ ಬಾಸ್ ಹಾಗೂ ರಾಕಿಂಗ್ ಸ್ಟಾರ್ ಅವರಿಬ್ಬರಿಗೂ ಮಂಡ್ಯದಲ್ಲಿ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಸುಮಲತಾ ಅವರಿಗೆ ಈ ಇಬ್ಬರೂ ಮನೆಯ ಮಕ್ಕಳಂತೆ ಬೆಂಬಲ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವು ತೀವ್ರ ಕುತೂಹಲ ಕೆರಳಿಸುವ ರಣರಂಗವಾಗಿದೆ.