ಆ್ಯಪ್ನಗರ

ರಸ್ತೆ ಅಪಘಾತದಲ್ಲಿ ಬಾಲನಟ ಶಿವಲೇಖ್ ಸಿಂಗ್ ದುರ್ಮರಣ

ಬಾಲ ಕಲಾವಿದ ಶಿವಲೇಖ್ ಸಿಂಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರ್ಯಕ್ರಮವೊಂದಕ್ಕೆ ತಂದೆತಾಯಿ ಜತೆಗೆ ಪ್ರಯಾಣಿಸುತ್ತಿದ್ದಾಗ ರಾಯ್‍ಪುರದ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು ಶಿವಲೇಖ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ತಂದೆತಾಯಿ ತೀವ್ರವಾಗಿ ಗಾಯಗೊಂಡಿದ್ದಾರೆ.

TIMESOFINDIA.COM 19 Jul 2019, 2:37 pm
ಬಾಲಿವುಡ್‍ನ 'ಸಸುರಲ್ ಸಿಮರ್ ಕಾ' ಧಾರಾವಾಹಿಯ ಜನಪ್ರಿಯ ಬಾಲ ಕಲಾವಿದ ಶಿವಲೇಖ್ ಸಿಂಗ್ (14) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಲೇಖ್ ಪ್ರಯಾಣಿಸುತ್ತಿದ್ದ ಕಾರು ಜುಲೈ 18ರಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಪ್ಪಿದ್ದಾರೆ.
Vijaya Karnataka Web Shivlekh Singh


ರಾಯ್‌ಪುರದ ಹೊರವಲಯದಲ್ಲಿ ಈ ಅಪಘಾತ ನಡೆದಿದೆ. ರಾಯ್‌ಪುರದ ಧರ್ಸಿವ ಎಂಬಲ್ಲಿ ಗುರುವಾರ ಸಂಜೆ 3 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರಿಫ್ ಶೇಖ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಶಿವಲೇಖ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಿವಲೇಖ ತಂದೆ ಶಿವೇಂದ್ರ ಸಿಂಗ್ ಹಾಗೂ ತಾಯಿ ಲೇಖನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ವ್ಯಕ್ತಿ ನವೀನ್ ಸಿಂಗ್ ಎಂಬುವವರೂ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಲಾಸಪುರದಿಂದ ರಾಯ್‍ಪುರಕ್ಕೆ ಮಾಧ್ಯಮಗಳೊಂದಿಗಿನ ಸಂವಾದ ಕಾರ್ಯಕ್ರಮಕ್ಕಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಟ್ರಕ್ಕಿನ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ. ಶಿವಲೇಖ್ ಅವರ ತಾಯಿ ಲೇಖನಾ ಸಿಂಗ್ ಪರಿಸ್ಥಿತಿ ಗಂಭೀರವಾಗಿದೆ ಎಂದಿವೆ ಮೂಲಗಳು. ಟ್ರಕ್ ಚಾಲಕ ಪರಾರಿಯಾಗಿದ್ದು ಆತನ ಪತ್ತೆಗಾಗಿ ಪೊಲೀಸರು ಹುಡುಕುತ್ತಿದ್ದಾರೆ.

ಛತ್ತೀಸಗಢದ ಜಂಜ್‌ಗಿರ್-ಚಂಪ ಜಿಲ್ಲೆಯವರಾದ ಶಿವಲೇಖ್ ಕಳೆದ ಹತ್ತು ವರ್ಷಗಳಿಂದ ತಂದೆತಾಯಿಯ ಜತೆಗೆ ಮುಂಬಯಿನಲ್ಲಿ ವಾಸವಾಗಿದ್ದರು. ಸಂಕಟಮೋಚನ್ ಹನುಮಾನ್, ಸಸುರಲ್ ಸಿಮರ್ ಕಾ, ಅಗ್ನಿಫೆರಾ ಸೇರಿದಂತೆ ಹಲವಾರು ಟಿವಿ ಕಾರ್ಯಕ್ರಮಗಳಲ್ಲಿ ಅಭಿನಯಿಸಿದ್ದಾರೆ. ಇದರ ಜತೆಗೆ ಹಲವಾರು ರಿಯಾಲಿಟಿ ಶೋಗಳಲ್ಲೂ ಭಾಗಿಯಾಗಿದ್ದಾರೆ. ಕೇಸರಿ ನಂದನ ಎಂಬ ಶೋನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌