ಆ್ಯಪ್ನಗರ

'ರಾಜಕುಮಾರ'ನಿಗೆ ಸಿಎಂ ಅಭಿನಂದನೆ

ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ ಅಭಿನಯದ 'ರಾಜಕುಮಾರ' ಚಿತ್ರ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ವಿಕ ಸುದ್ದಿಲೋಕ 11 Apr 2017, 2:21 pm
ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಮತ್ತು 'ರಾಜಕುಮಾರ' ಸಿನಿಮಾ ಟೀಮ್‌ ಸೋಮವಾರ (ಏ.10) ಬೆಳಿಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿತು. ಭಾನುವಾರ ಮುಖ್ಯಮಂತ್ರಿಗಳು ಮೈಸೂರಿನಲ್ಲಿ ರಾಜಕುಮಾರ ಸಿನಿಮಾ ವೀಕ್ಷಿಸಿದ್ದರು. ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನೂ ಆಡಿದ್ದರು. ಅಲ್ಲದೇ, ಸ್ವತಃ ಮುಖ್ಯಮಂತ್ರಿಗಳೇ ಸಿನಿಮಾ ತಂಡವನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದರು.
Vijaya Karnataka Web cm siddaramaiah congratulates raajakumara team
'ರಾಜಕುಮಾರ'ನಿಗೆ ಸಿಎಂ ಅಭಿನಂದನೆ


ಪುನೀತ್‌ ಜತೆ ಚಿತ್ರದ ನಿರ್ದೇಶಕ ಸಂತೋಷ್‌ ಆನಂದ್‌ರಾಮ್‌, ನಿರ್ಮಾಪಕ ವಿಜಯ್‌ ಕಿರಗಂದೂರು, ಕಾರ್ತೀಕ್‌ ಮತ್ತಿತರರು ಸಿಎಂ ನಿವಾಸಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾಲಿಗೆ ನಮಸ್ಕರಿಸಿದ ಪುನೀತ್‌, ಬಿಡುವಿಲ್ಲದ ನಡುವೆಯೂ ತಮ್ಮ ಸಿನಿಮಾ ನೋಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌