ಆ್ಯಪ್ನಗರ

ಪಡ್ಡೆಹುಲಿ ಹಾಡು ಮೆಚ್ಚಿದ ದರ್ಶನ್‌

ಪಡ್ಡೆಹುಲಿ ಸಿನಿಮಾದ ಮೂಲಕ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಕೆಲ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ ಆಗಿದ್ದು, ಮೊನ್ನೆಯಷ್ಟೇ ದರ್ಶನ್‌ ಕೂಡ ಹಾಡುಗಳನ್ನು ವೀಕ್ಷಿಸಿದ್ದಾರೆ. ಈ ಕುರಿತು ಅವರು ಮೆಚ್ಚುಗೆಯನ್ನೂ ವ್ಯಕ್ತ ಪಡಿಸಿದ್ದಾರೆ.

Vijaya Karnataka 8 Feb 2019, 7:37 am
ಗುರು ದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಸಿನಿಮಾದ ಹಾಡುಗಳನ್ನು ಕೇಳಿ ಮೆಚ್ಚಿಕೊಂಡಿದ್ದಾರೆ ನಟ ದರ್ಶನ್‌. ಮೊದಲ ಬಾರಿಗೆ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿರುವ ನಾಯಕ ಶ್ರೇಯಸ್‌ಗೂ ಅವರು ಹಾರೈಸಿದ್ದಾರೆ.
Vijaya Karnataka Web Darshan


ಪಡ್ಡೆಹುಲಿ ಸಿನಿಮಾದ ಮೂಲಕ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಕೆಲ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ ಆಗಿದ್ದು, ಮೊನ್ನೆಯಷ್ಟೇ ದರ್ಶನ್‌ ಕೂಡ ಹಾಡುಗಳನ್ನು ವೀಕ್ಷಿಸಿದ್ದಾರೆ. ಈ ಕುರಿತು ಅವರು ಮೆಚ್ಚುಗೆಯನ್ನೂ ವ್ಯಕ್ತ ಪಡಿಸಿದ್ದಾರೆ.

'ಸಾಮಾನ್ಯವಾಗಿ ನಿರ್ಮಾಪಕರ ಮಕ್ಕಳು ಚಿತ್ರರಂಗಕ್ಕೆ ಪ್ರವೇಶ ಮಾಡುವಾಗ, ದುಡ್ಡಿರುವವರು ಮಕ್ಕಳು ಸಿನಿಮಾ ರಂಗಕ್ಕೆ ಬರುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ, ಶ್ರೇಯಸ್‌ ಪಕ್ಕಾ ತಯಾರಿಯೊಂದಿಗೆ ಬಂದಿದ್ದಾರೆ ಎನ್ನುವುದು ಅವರ ಹಾಡುಗಳಿಂದ ಗೊತ್ತಾಗುತ್ತದೆ. ಹಾಡುಗಳಲ್ಲಿ ಅವರು ತುಂಬಾ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಕಲರ್‌ಫುಲ್‌ ಆಗಿ ಹಾಡುಗಳನ್ನು ಶೂಟ್‌ ಮಾಡಿದ್ದಾರೆ' ಎಂದಿದ್ದಾರೆ ದರ್ಶನ್‌.

'ದರ್ಶನ್‌ ಅವರಿಗೆ ಮೂರ್ನಾಲ್ಕು ಹಾಡುಗಳನ್ನು ತೋರಿಸಿದೆವು. ಅಲ್ಲದೇ, ಸಿನಿಮಾದ ಒಂದಷ್ಟು ದೃಶ್ಯಗಳನ್ನೂ ಕೂಡ ತೋರಿಸಿದೆವು. ತುಂಬಾನೇ ಖುಷಿ ಪಟ್ಟರು. ಚಿತ್ರದ ಮೇಕಿಂಗ್‌ ಮತ್ತು ಶ್ರೇಯಸ್‌ ನಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಅಂತಹ ದೊಡ್ಡ ಕಲಾವಿದರು ನಮ್ಮ ಸಿನಿಮಾದ ಬಗ್ಗೆ ಮಾತನಾಡಿದ್ದು ಖುಷಿ ತಂದಿದೆ' ಎನ್ನುವುದು ನಿರ್ದೇಶಕ ಗುರು ದೇಶಪಾಂಡೆ ಮಾತು.

ಮೊನ್ನೆಯಷ್ಟೇ ಡಾ.ವಿಷ್ಣುವರ್ಧನ್‌ ಅಭಿಮಾನಿಗಳಿಗಾಗಿ ಹಾಡೊಂದನ್ನು ಬಿಡುಗಡೆ ಮಾಡಿತ್ತು ಚಿತ್ರತಂಡ. ಆ ಹಾಡು ಕೂಡ ಟ್ರೆಂಡ್‌ ಕ್ರಿಯೇಟ್‌ ಮಾಡಿದೆ. ನುರಿತ ಕಲಾವಿದರ ತಂಡವೇ ಸಿನಿಮಾದಲ್ಲಿದ್ದು, ಮೇ ತಿಂಗಳಲ್ಲಿ ಈ ಚಿತ್ರ ತೆರೆ ಕಾಣಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌