ಆ್ಯಪ್ನಗರ

ಕಾರು ಅಪಘಾತದ ಬಗ್ಗೆ ನಟ ದಿಗಂತ್ ಹೇಳುವುದೇನು?

ಇತ್ತೀಚೆಗೆ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿ ಮಧ್ಯರಾತ್ರಿ ನಡೆದ ಬೆಂಜ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಆ ಕಾರಿನಲ್ಲಿ ನಟ ದಿಗಂತ್ ಹಾಗೂ ಪ್ರಜ್ವಲ್ ದೇವರಾಜ್ ಸಹ ಇದ್ದರು ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂದಿತ್ತು.

Vijaya Karnataka Web 30 Sep 2017, 12:36 pm
ಇತ್ತೀಚೆಗೆ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿ ಮಧ್ಯರಾತ್ರಿ ನಡೆದ ಬೆಂಜ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಆ ಕಾರಿನಲ್ಲಿ ನಟ ದಿಗಂತ್ ಹಾಗೂ ಪ್ರಜ್ವಲ್ ದೇವರಾಜ್ ಸಹ ಇದ್ದರು ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂದಿತ್ತು. ಬೆಂಜ್ ಕಾರಿನಲ್ಲಿ ಗಾಂಜಾ ಸಿಕ್ಕಿದೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ದಿಗಂತ್ ಸ್ಪಷ್ಟೀಕರಣ ನೀಡಿದ್ದಾರೆ.
Vijaya Karnataka Web diganth clarifies about car accident on his facebook
ಕಾರು ಅಪಘಾತದ ಬಗ್ಗೆ ನಟ ದಿಗಂತ್ ಹೇಳುವುದೇನು?


'ಮಾಧ್ಯಮಗಳಲ್ಲಿ ಕಾರೊಂದರ ಅಪಘಾತಕ್ಕೆ ಸಂಬಂಧಿಸಿದಂತೆ ಪದೇಪದೇ ನನ್ನನ್ನು ಕೆಣಕುತ್ತಿದ್ದಾರೆ. ನಾನು ಏನೂ ಮಾಡಲಿಕ್ಕಾಗದ ಪರಿಸ್ಥಿತಿಯಲ್ಲಿದ್ದೇನೆ. ಅದಕ್ಕಾಗಿ ನಾನು ಈ ವೀಡಿಯೋ ಮೂಲಕ ಸ್ಪಷ್ಟೀಕರಣ ನೀಡುತ್ತಿದ್ದೇನೆ' ಎಂದಿದ್ದಾರೆ.

ಟಿವಿ ಮಾಧ್ಯಮಗಳಲ್ಲಿ ತೋರಿಸುತ್ತಿರುವ ಕಾರು ಅಪಘಾತದ ಒಂದೇ ಒಂದು ಸಾಕ್ಷಿ ಅವರ ಬಳಿ ಇಲ್ಲ. ನಾನು ಆ ಕಾರಿನಲ್ಲಿದ್ದೆ ಎಂಬ ಬಗ್ಗೆ ನನ್ನ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದಿರುವ ದಿಗಂತ್ ಅಪಘಾತ ನಡೆದ ದಿನ ತಾವು ಕನಕಪುರದಲ್ಲಿ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ಫೇಸ್‍ಬುಕ್‌ನಲ್ಲಿ ದಿಗಂತ್ ಹೇಳಿರುವುದಿಷ್ಟು...

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌