ಆ್ಯಪ್ನಗರ

ಸಿನಿಮಾ ಪ್ರಶಸ್ತಿ ಆಯ್ಕೆ ಸಮಿತಿಯಿಂದ ಸುಮನಾ ಕಿತ್ತೂರಿಗೆ ಕೊಕ್

2018ನೇ ಸಾಲಿನ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಲನಚಿತ್ರಗಳ ವಾರ್ಷಿಕ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಗೆ ಸುಮನಾ ಕಿತ್ತೂರು ಅವರ ಬದಲಿಗೆ ಜೋಸೈಮನ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Vijaya Karnataka 9 Mar 2019, 11:58 am
2018ನೇ ಸಾಲಿನ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಲನಚಿತ್ರಗಳ ವಾರ್ಷಿಕ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಗೆ ಸುಮನಾ ಕಿತ್ತೂರು ಅವರ ಬದಲಿಗೆ ಜೋಸೈಮನ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web suman-kittur


ಅದೇ ರೀತಿ 2017ನೇ ಸಾಲಿನ ಕನ್ನಡ ಮತ್ತು ಇತರೆ ಪ್ರಾದೇಶಿಕ ಭಾಷೆಗಳ ಗುಣಾತ್ಮಕ ಸಿನಿಮಾಗಳನ್ನು ಸಹಾಯಧನಕ್ಕೆ ಆಯ್ಕೆ ಮಾಡಲು ನೇಮಿಸಿದ್ದ ಸಲಹಾ ಸಮಿತಿಗೆ ಪಿ.ಆರ್‌.ರಾಮದಾಸ ನಾಯ್ಡು ಬದಲಿಗೆ ಎಸ್‌.ಕೆ.ಭಗವಾನ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ದೊಡ್ಡ ಹುಲ್ಲೂರು ರುಕ್ಕೋಜಿ ಬದಲಿಗೆ ಲಕ್ಷ್ಮಿಪತಿ ಕೋಲಾರ ಅವರನ್ನು ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

2018ನೇ ಸಾಲಿನ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಆಯ್ಕೆ ಸಮಿತಿಗೆ ಚಲನಚಿತ್ರ ನಿರ್ದೇಶಕಿ ಸುಮನಾ ಕಿತ್ತೂರು ಅಧ್ಯಕ್ಷತೆಯ ಸಮಿತಿ ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಇದೇ ಸಮಿತಿಯು ಡಾ.ರಾಜ್‌ ಕುಮಾರ್‌, ಪುಟ್ಟಣ್ಣ ಕಣಗಾಲ್‌, ಡಾ.ವಿಷ್ಣುವರ್ಧನ್‌ ಪ್ರಶಸ್ತಿಗೂ ಆಯ್ಕೆ ಮಾಡಲಿದೆ.

ಸರಕಾರದ ಈ ಹಿಂದಿನ ಆದೇಶದಲ್ಲಿ ನಿರ್ಮಾಪಕ ಯಾಕುಬ್‌ ಖಾದರ್‌ ಗುಲ್ವಾಡಿ, ನಿರ್ದೇಶಕ ಲೆಸ್ಲಿ ಕರ್ವಾಲೋ, ರಂಗಭೂಮಿ ಕಲಾವಿದ ವಿ.ಲಕ್ಷ್ಮಿಪತಿ, ವಸ್ತ್ರಾಲಂಕಾರ ಕಲಾವಿದ ಚಿನ್ಮಯ್‌, ಛಾಯಾಗ್ರಾಹಕ ಬಿ.ಎಲ್‌.ಬಾಬು, ಸಂಕಲನಕಾರ ಎಸ್‌.ಶಿವಕುಮಾರಸ್ವಾಮಿ, ಹಿನ್ನೆಲೆ ಗಾಯಕಿ ಅರ್ಚನಾ ಉಡುಪ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌