ತಮಿಳುನಾಡಿನ ರೆಸಾರ್ಟ್ನಲ್ಲಿ ಪೊಲೀಸ್ ವಶಕ್ಕೆ ನಟ ದುನಿಯಾ ವಿಜಿ
ತಮಿಳುನಾಡಿನ ರೆಸಾರ್ಟ್ವೊಂದರಲ್ಲಿದ್ದ ನಟ ದುನಿಯಾ ವಿಜಯ್ರನ್ನು ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಶುಕ್ರವಾರ ಮುಂಜಾನೆ ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಉಪ ಆಯುಕ್ತ (ದಕ್ಷಿಣ ವಿಭಾಗ) ಎಸ್ ಡಿ ಶರಣಪ್ಪ ತಿಳಿಸಿದ್ದಾರೆ.
Vijaya Karnataka Web 8 Jun 2018, 12:35 pm
ತಮಿಳುನಾಡಿನ ರೆಸಾರ್ಟ್ವೊಂದರಲ್ಲಿದ್ದ ನಟ ದುನಿಯಾ ವಿಜಯ್ರನ್ನು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಶುಕ್ರವಾರ ಮುಂಜಾನೆ ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಉಪ ಆಯುಕ್ತ (ದಕ್ಷಿಣ ವಿಭಾಗ) ಎಸ್ ಡಿ ಶರಣಪ್ಪ ತಿಳಿಸಿದ್ದಾರೆ. ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲಾಗಿದ್ದ ಕಾರಣ ತಲೆಮರೆಸಿಕೊಂಡಿದ್ದರು.
'ಮಾಸ್ತಿಗುಡಿ' ಚಿತ್ರದ ನಿರ್ಮಾಪಕ ಸುಂದರ್ ಗೌಡನ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಹಾಗೂ ಸುಂದರ್ ಗೌಡ ಪರಾರಿ ಆಗಲು ಸಹಕಾರ ನೀಡಿದ ಆರೋಪದ ಮೇಲೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ನಟ ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
2016ರಲ್ಲಿ ಮಾಸ್ತಿಗುಡಿ ಸಾಹಸ ಸನ್ನಿವೇಶದ ಚಿತ್ರೀಕರಣ ವೇಳೆ ಹೆಲಿಕಾಪ್ಟರ್ನಿಂದ ಜಿಗಿದು ಇಬ್ಬರು ನಟರು ತಿಪ್ಪಗೊಂಡನ ಹಳ್ಳಿ ಕೆರೆಯಲ್ಲಿ ಮುಳುಗಿ ಸಾವಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಗೌಡ ಮುಖ್ಯ ಆರೋಪಿಯಾಗಿದ್ದರು.
ಪ್ರಕರಣದ ವಿಚಾರಣೆಗೆ ಸುಂದರ್ ಗೌಡ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಕುರಿತಂತೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಿತ್ರದ ನಿರ್ಮಾಪಕ ಸುಂದರ ಗೌಡ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ತಾವರೆಕೆರೆ ಪೊಲೀಸರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿರುವ ಸುಂದರಗೌಡ ನಿವಾಸಕ್ಕೆ ಆಗಮಿಸಿ ವಾರೆಂಟ್ ಜಾರಿಗೊಳಿಸಿ ಬಂಧಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಕಾಣಿಸಿಕೊಂಡ ದುನಿಯಾ ವಿಜಿ ತಾವರೆಕೆರೆ ಪೊಲೀಸರೊಂದಿಗೆ ಮಾತನಾಡಿಸುತ್ತಿದ್ದಾಗ ನಿರ್ಮಾಪಕ ಸುಂದರಗೌಡ ಪರಾರಿಯಾಗಿದ್ದರು.
"ಶುಕ್ರವಾರ (ಜೂ.8) ಮುಂಜಾನೆ ದುನಿಯಾ ವಿಜಯ್ ಅವರನ್ನು ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ರೆಸಾರ್ಟ್ವೊಂದರಲ್ಲಿ ವಶಕ್ಕೆ ಪಡೆಯಲಾಗಿದೆ. ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಶೀಘ್ರದಲ್ಲೇ ಕಾನುನು ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ" ಎಂದಿದ್ದಾರೆ ಡಿಸಿಪಿ ಶರಣಪ್ಪ.
'ಮಾಸ್ತಿಗುಡಿ' ಚಿತ್ರದ ನಿರ್ಮಾಪಕ ಸುಂದರ್ ಗೌಡನ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಹಾಗೂ ಸುಂದರ್ ಗೌಡ ಪರಾರಿ ಆಗಲು ಸಹಕಾರ ನೀಡಿದ ಆರೋಪದ ಮೇಲೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ನಟ ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
2016ರಲ್ಲಿ ಮಾಸ್ತಿಗುಡಿ ಸಾಹಸ ಸನ್ನಿವೇಶದ ಚಿತ್ರೀಕರಣ ವೇಳೆ ಹೆಲಿಕಾಪ್ಟರ್ನಿಂದ ಜಿಗಿದು ಇಬ್ಬರು ನಟರು ತಿಪ್ಪಗೊಂಡನ ಹಳ್ಳಿ ಕೆರೆಯಲ್ಲಿ ಮುಳುಗಿ ಸಾವಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಗೌಡ ಮುಖ್ಯ ಆರೋಪಿಯಾಗಿದ್ದರು.
ಪ್ರಕರಣದ ವಿಚಾರಣೆಗೆ ಸುಂದರ್ ಗೌಡ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಕುರಿತಂತೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಿತ್ರದ ನಿರ್ಮಾಪಕ ಸುಂದರ ಗೌಡ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ತಾವರೆಕೆರೆ ಪೊಲೀಸರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿರುವ ಸುಂದರಗೌಡ ನಿವಾಸಕ್ಕೆ ಆಗಮಿಸಿ ವಾರೆಂಟ್ ಜಾರಿಗೊಳಿಸಿ ಬಂಧಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಕಾಣಿಸಿಕೊಂಡ ದುನಿಯಾ ವಿಜಿ ತಾವರೆಕೆರೆ ಪೊಲೀಸರೊಂದಿಗೆ ಮಾತನಾಡಿಸುತ್ತಿದ್ದಾಗ ನಿರ್ಮಾಪಕ ಸುಂದರಗೌಡ ಪರಾರಿಯಾಗಿದ್ದರು.
"ಶುಕ್ರವಾರ (ಜೂ.8) ಮುಂಜಾನೆ ದುನಿಯಾ ವಿಜಯ್ ಅವರನ್ನು ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ರೆಸಾರ್ಟ್ವೊಂದರಲ್ಲಿ ವಶಕ್ಕೆ ಪಡೆಯಲಾಗಿದೆ. ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಶೀಘ್ರದಲ್ಲೇ ಕಾನುನು ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ" ಎಂದಿದ್ದಾರೆ ಡಿಸಿಪಿ ಶರಣಪ್ಪ.