ಆ್ಯಪ್ನಗರ

ವಿಜಿ ಪತ್ನಿ ನಾಗರತ್ನಗೆ ಮಧ್ಯಂತರ ಜಾಮೀನು ಮಂಜೂರು

ನಾಗತ್ನ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಜೊತೆಗೆ ದೀಪಾವಳಿ ಹಬ್ಬ ಇರುವ ಕಾರಣ ಜಾಮೀನು ನೀಡಬೇಕೆಂದು ನಾಗರತ್ನ ಪರ ವಕೀಲರು ವಾದ ಮಂಡಿಸಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ಇತ್ಯರ್ಥವಾಗುವವರೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದಿದೆ ಕೋರ್ಟ್.

Vijaya Karnataka Web 5 Nov 2018, 6:51 pm
ನಟ ದುನಿಯಾ ವಿಜಯ್ ಪತ್ನಿ ನಾಗರತ್ನಗೆ ಸೆಷನ್ಸ್ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದುನಿಯಾ ವಿಜಿ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣದ ಬಳಿಕ ನಾಗರತ್ನ ನಾಪತ್ತೆಯಾಗಿದ್ದರು. ಬಳಿಕ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆಹೋಗಿದ್ದರು.
Vijaya Karnataka Web duniya-vijay


ಈ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿರುವ ಸೆಷನ್ಸ್ ನ್ಯಾಯಾಲಯ 50 ಸಾವಿರ ರೂ. ಬಾಂಡ್, ಒಬ್ಬರು ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಮಾಡಿದೆ. ಪೊಲೀಸರ ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದ್ದು ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿದೆ.

ನಾಗತ್ನ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಜೊತೆಗೆ ದೀಪಾವಳಿ ಹಬ್ಬ ಇರುವ ಕಾರಣ ಜಾಮೀನು ನೀಡಬೇಕೆಂದು ನಾಗರತ್ನ ಪರ ವಕೀಲರು ವಾದ ಮಂಡಿಸಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ಇತ್ಯರ್ಥವಾಗುವವರೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದಿದೆ ಕೋರ್ಟ್.

ನಟ ವಿಜಯ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ನಾಗರತ್ನ ಅವರು ಕೀರ್ತಿಗೌಡ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಸಂಬಂಧ ಕೀರ್ತಿಗೌಡ ದಾಖಲಿಸಿರುವ ದೂರಿನನ್ವಯ ತನ್ನನ್ನು ಬಂಧಿಸಲೆಂದೇ ಪೊಲೀಸರು ಬಂದಿರಬಹುದು ಎಂಬ ಭೀತಿಯಲ್ಲಿ ನಾಗರತ್ನ ಬಾಗಿಲು ತೆಗೆಯಲು ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದೆ.

ದುನಿಯಾ ವಿಜಿ ಕುಟುಂಬ ಕಲಹ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳಂತೂ ಕಾಣುತ್ತಿಲ್ಲ. ಮೊದಲ ಪತ್ನಿ ನಾಗರತ್ನ ಹಾಗೂ 2ನೇ ಪತ್ನಿ ಕೀರ್ತಿಗೌಡ ಅವರ ನಡುವಿನ ಜಗಳದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌