ಆ್ಯಪ್ನಗರ

ಪುನೀತ್‌ ರಾಜ್‌ಕುಮಾರ್‌ಗೆ ವಾಲ್ಮೀಕಿ ರಾಮಾಯಣ ಗಿಫ್ಟ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಅಭಿಮಾನಿಯೊಬ್ಬರು 'ವಾಲ್ಮೀಕಿ ರಾಮಾಯಣ' ಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

Vijaya Karnataka Web 9 Feb 2018, 12:58 pm
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಅಭಿಮಾನಿಯೊಬ್ಬರು 'ವಾಲ್ಮೀಕಿ ರಾಮಾಯಣ' ಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಬಗ್ಗೆ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಪುಸ್ತಕ ಹಿಡಿದುಕೊಂಡಿರುವ ಫೋಟೋವನ್ನೂ ಹಂಚಿಕೊಂಡಿದ್ದು ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.
Vijaya Karnataka Web fan gifts valmiki ramayana book to puneeth rajkumar
ಪುನೀತ್‌ ರಾಜ್‌ಕುಮಾರ್‌ಗೆ ವಾಲ್ಮೀಕಿ ರಾಮಾಯಣ ಗಿಫ್ಟ್


'ಬೆಟ್ಟದ ಹೂವು ಸಿನಿಮಾದಲ್ಲಿ ಎಷ್ಟೇ ದುಡ್ಡು ಸೇವ್ ಮಾಡಿದ್ರೂ ತಗೊಳ್ಳೋಕೆ ಆಗಿರಲಿಲ್ಲ. Finally a fan gifted it.' ಎಂದಿದ್ದಾರೆ. ಬೆಟ್ಟದ ಹೂವು ಸಿನಿಮಾದ ಬಿಸಿಲೇ ಇರಲಿ ಮಳೆಯೇ ಬರಲಿ ಕಾಡಲ್ಲಿ ಮೇಡಲ್ಲಿ ಅಲೆವೆ.. ಎಂಬ ಹಾಡಿನಲ್ಲಿ ಹಣ ಕೂಡಿಸಿ ರಾಮಾಯಣದ ಪುಸ್ತಕ ತೆಗೆದುಕೊಳ್ಳುತ್ತೇನೆ ಎಂಬ ಸಾಲಿದೆ. ಅದನ್ನು ಪುನೀತ್ ಅವರು ಇಲ್ಲಿ ನೆನಪಿಸಿಕೊಂಡು ಈ ರೀತಿ ಪೋಸ್ಟ್ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.



ಇನ್ನು ಅವರ ಅಭಿನಯದ 'ಅಂಜನಿಪುತ್ರ' ಸಿನಿಮಾ ಐವತ್ತು ದಿನ ಪೂರೈಸಿದೆ. ಇದೇ ಸಂದರ್ಭದಲ್ಲಿ ಅವರಿಗೆ ವಾಲ್ಮೀಕಿ ರಾಮಾಯಣ ಕೃತಿ ಉಡುಗೊರೆಯಾಗಿ ಸಿಕ್ಕಿರುವುದು ವಿಶೇಷ. ಆ ಅಭಿಮಾನಿ ಯಾರು, ಅವರ ಜತೆಗೂ ಒಂದು ಫೋಟೋ ತೆಗೆಸಿಕೊಂಡು ಪೋಸ್ಟ್ ಮಾಡಿದ್ದರೆ ಆ ಅಭಿಮಾನಿಗೆ ಇನ್ನಷ್ಟು ಖುಷಿಯಾಗುತ್ತಿತ್ತು ಎಂದು ಇನ್ನೊಬ್ಬ ಅಭಿಮಾನಿ ಕಾಮೆಂಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌