ಆ್ಯಪ್ನಗರ

ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ನಿರ್ದೇಶಕ ಮಣಿ ರತ್ನಂ

ಮುಂಬಯಿಯಲ್ಲಿ ಚಿತ್ರೀಕರಣದ ವೇಳೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಾಗ ಕೂಡಲೇ ಅಲ್ಲಿಯ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರನ್ನು ಚೆನ್ನೈಗೆ ಕರೆತಂದಿದ್ದು ಇದೀಗ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

TIMESOFINDIA.COM 17 Jun 2019, 10:48 am
ಮುಂಬಯಿ: ಖ್ಯಾತ ಚಿತ್ರ ನಿರ್ದೇಶಕ ಮಣಿ ರತ್ನಂರವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಚೆನ್ನೈಯ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Vijaya Karnataka Web mani ratnam


ಮುಂಬಯಿಯಲ್ಲಿ ಚಿತ್ರೀಕರಣದ ವೇಳೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಾಗ ಕೂಡಲೇ ಅಲ್ಲಿಯ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರನ್ನು ಚೆನ್ನೈಗೆ ಕರೆತಂದಿದ್ದು ಇದೀಗ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.


ಇವರಿಗೆ ಈ ಹಿಂದೆ 2004ರಲ್ಲಿ ಯುವ ಚಿತ್ರೀಕರಣದ ವೇಳೆ ಹೃದಯ ಬೇನೆ ಕಾಣಿಸಿ ಚಿಕಿತ್ಸೆ ನೀಡಲಾಗಿತ್ತು. ಅದಾದ ಬಳಿಕ 2015ರಲ್ಲಿ ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇವರ ಅನಾರೋಗ್ಯದ ಕುರಿತು ಮಾಹಿತಿಯನ್ನು ಸಾಮಾಜಿಕ ತಾಣದ ಮೂಲಕ ತಿಳಿಸಲಾಯಿತು. ಇದೀಗ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುವುದರ ಕುರಿತು ಇನ್ನು ಮಾಹಿತಿ ಲಭ್ಯವಾಗಿಲ್ಲ.

ಕನ್ನಡ, ಹಿಂದಿ, ತಮಿಳು ಚಿತ್ರಗಳಲ್ಲಿ ಹಲವಾರು ಬ್ಲಾಕ್‌ ಬಸ್ಟರ್‌ ಚಿತ್ರಗಳನ್ನು ನೀಡಿರುವ ಇವರು ಇದೀಗ ಮತ್ತೊಂದು ದೊಡ್ಡ ಪ್ರಾಜೆಕ್ಟ್‌ನಲ್ಲಿ ಬ್ಯುಸಿಯಾಗಿದ್ದರು. ಇವರ ಪತ್ನಿ ಸುಹಾಸಿನಿ ಮಣಿರತ್ನಂ ಬಹುಭಾಷೆ ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌