ಮಂಡ್ಯ ಲೋಕಸಭಾ ಕ್ಷೇತ್ರವು ಕರ್ನಾಟಕದ ಅತ್ಯಂತ ಕುತೂಹಲ ಸೃಷ್ಟಿಸಿರುವ ಕ್ಷೇತ್ರವಾಗಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಬ್ಬರೂ ಕಡೆಯಿಂದಲೂ ಮಂಡ್ಯದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದೆ.
ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದ ವೇಳೆ ದರ್ಶನ್ ಅಭಿಮಾನಿಗಳು 'ಡಿ ಬಾಸ್' ಎಂದು ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲ, 'ಗೋ ಬ್ಯಾಕ್ ನಿಖಿಲ್' ಎಂದು ಘೋಷಣೆ ಕೂಗುವ ಮೂಲಕ ಈ ಮೊದಲು ದರ್ಶನ್ಗೆ 'ಗೋ ಬ್ಯಾಕ್ ದರ್ಶನ್' ಎಂಬ ಹೇಳಿಕೆಯ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ. ಈ ಘಟನೆ ಕೆಆರ್ ನಗರ ತಾಲೂಕಿನ ಕೆಸ್ತೂರುಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕೊಪ್ಪಲು ಗ್ರಾಮಕ್ಕೆ ಬಂದು ಪ್ರಚಾರ ನಡೆಸುತ್ತಿದ್ದ ವೇಳೆ, ಡಿ ಬಾಸ್ ಅಭಿಮಾನಿಗಳು ಸಿಟ್ಟಿಗೆದ್ದು 'ಗೋ ಬ್ಯಾಕ್ ನಿಖಿಲ್' ಎಂದು ಘೋಷಣೆ ಕೂಗಿದ್ದಾರೆ. ಕೂಡಲೇ ನಿಖಿಲ್ ಜೊತೆಯಿದ್ದ ಸಾರಾ ಮಹೇಶ್ ಅವರು ಘೋಷಣೆ ಕೂಗುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸರಿಗೆ ಸೂಚನೆ ನೀಡಿದರು. ತಕ್ಷಣ, ಪರಿಸ್ಥಿತಿ ತಿಳಿಯಾಗಿದೆ.
ಸದ್ಯಂಕಂತೂ ನಟ ದರ್ಶನ್ ಅವರು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಚುನಾವಣೆ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟರಾದ ದರ್ಶನ್ ಮತ್ತು ಯಶ್ ಅವರಿಬ್ಬರೂ ಸುಮಲತಾ ಪರ ಪ್ರಚಾರದಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಮಂಡ್ಯ ಲೋಕಸಭೆ ಚುನಾವಣೆ ದೇಶದಲ್ಲೇ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರವಾಗಿದೆ ಎಂದರೆ ತಪ್ಪಿಲ್ಲ.
ಸಿಎಂ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಇಬ್ಬರೂ ಸಹ ಸುಮಲತಾ ಪರ ಪ್ರಚಾರ ಕೈಗೊಂಡಿರುವ ನಟರಾದ ದರ್ಶನ್ ಮತ್ತು ಯಶ್ ವಿರುದ್ಧ ಸಾಕಷ್ಟು ಟಾಂಗ್ ಕೊಡುತ್ತಿದ್ದಾರೆ. ಆದರೂ ದರ್ಶನ್ ಮತ್ತು ಯಶ್ ಸುಮಲತಾ ಪರ ಪ್ರಚಾರಕ್ಕೆ ಹೋಗುತ್ತಿದ್ದು, ಅವರಿಬ್ಬರ ಏಟುಗಳಿಗೆ ತಿರುಗೇಟು ಕೊಡುತ್ತಿದ್ದಾರೆ. ಒಟ್ಟಿನಲ್ಲಿ ಮಂಡ್ಯ ಚುನಾವಣೆ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ನಡುವೆ ಪ್ರತಿಷ್ಠೆಯ ಕಣವಾಗಿದೆ.
ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದ ವೇಳೆ ದರ್ಶನ್ ಅಭಿಮಾನಿಗಳು 'ಡಿ ಬಾಸ್' ಎಂದು ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲ, 'ಗೋ ಬ್ಯಾಕ್ ನಿಖಿಲ್' ಎಂದು ಘೋಷಣೆ ಕೂಗುವ ಮೂಲಕ ಈ ಮೊದಲು ದರ್ಶನ್ಗೆ 'ಗೋ ಬ್ಯಾಕ್ ದರ್ಶನ್' ಎಂಬ ಹೇಳಿಕೆಯ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ. ಈ ಘಟನೆ ಕೆಆರ್ ನಗರ ತಾಲೂಕಿನ ಕೆಸ್ತೂರುಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕೊಪ್ಪಲು ಗ್ರಾಮಕ್ಕೆ ಬಂದು ಪ್ರಚಾರ ನಡೆಸುತ್ತಿದ್ದ ವೇಳೆ, ಡಿ ಬಾಸ್ ಅಭಿಮಾನಿಗಳು ಸಿಟ್ಟಿಗೆದ್ದು 'ಗೋ ಬ್ಯಾಕ್ ನಿಖಿಲ್' ಎಂದು ಘೋಷಣೆ ಕೂಗಿದ್ದಾರೆ. ಕೂಡಲೇ ನಿಖಿಲ್ ಜೊತೆಯಿದ್ದ ಸಾರಾ ಮಹೇಶ್ ಅವರು ಘೋಷಣೆ ಕೂಗುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸರಿಗೆ ಸೂಚನೆ ನೀಡಿದರು. ತಕ್ಷಣ, ಪರಿಸ್ಥಿತಿ ತಿಳಿಯಾಗಿದೆ.
ಸದ್ಯಂಕಂತೂ ನಟ ದರ್ಶನ್ ಅವರು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಚುನಾವಣೆ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟರಾದ ದರ್ಶನ್ ಮತ್ತು ಯಶ್ ಅವರಿಬ್ಬರೂ ಸುಮಲತಾ ಪರ ಪ್ರಚಾರದಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಮಂಡ್ಯ ಲೋಕಸಭೆ ಚುನಾವಣೆ ದೇಶದಲ್ಲೇ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರವಾಗಿದೆ ಎಂದರೆ ತಪ್ಪಿಲ್ಲ.
ಸಿಎಂ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಇಬ್ಬರೂ ಸಹ ಸುಮಲತಾ ಪರ ಪ್ರಚಾರ ಕೈಗೊಂಡಿರುವ ನಟರಾದ ದರ್ಶನ್ ಮತ್ತು ಯಶ್ ವಿರುದ್ಧ ಸಾಕಷ್ಟು ಟಾಂಗ್ ಕೊಡುತ್ತಿದ್ದಾರೆ. ಆದರೂ ದರ್ಶನ್ ಮತ್ತು ಯಶ್ ಸುಮಲತಾ ಪರ ಪ್ರಚಾರಕ್ಕೆ ಹೋಗುತ್ತಿದ್ದು, ಅವರಿಬ್ಬರ ಏಟುಗಳಿಗೆ ತಿರುಗೇಟು ಕೊಡುತ್ತಿದ್ದಾರೆ. ಒಟ್ಟಿನಲ್ಲಿ ಮಂಡ್ಯ ಚುನಾವಣೆ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ನಡುವೆ ಪ್ರತಿಷ್ಠೆಯ ಕಣವಾಗಿದೆ.