ಆ್ಯಪ್ನಗರ

ಡಾ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

ಸದ್ಯಕ್ಕೆ ವಿಷ್ಣು ಸ್ಮಾರಕ ವಿವಾದ ಬಗೆಹರಿಯದ ಸಮಸ್ಯೆಯಾಗಿ ಉಳಿದುಕೊಂಡಿದೆ. ಚುನಾವಣೆ ಮುಗಿದ ಮೇಲೆ ಆ ಕಾರ್ಯ ಮಾಡೋಣ" ಎಂದು ಕುಮಾರಸ್ವಾಮಿಯವರು ವಿಷ್ಣು ಅಭಿಮಾನಿಗಳ ಮುಂದೆ ಹೇಳುವ ಮೂಲಕ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

Vijaya Karnataka Web 11 Apr 2019, 12:32 pm
ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ, ಮಂಡ್ಯ ಲೋಕಸಭೆ ಕ್ಷೇತ್ರವು ಪಕ್ಕಾ ರಣರಂಗವಾಗಿದೆ. ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಅಬ್ಬರ ಪ್ರಚಾರ ನಡೆಯುತ್ತಿದೆ. ಒಂದು ಕಡೆ ನಿಖಿಲ್ ಪರ ಸಿಎಂ ಕುಮಾರಸ್ವಾಮಿ, ಇನ್ನೊಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಯಶ್-ದರ್ಶನ್ ಬಿರುಸಿನ ಮತಯಾಚನೆ ನಡೆಸಿದ್ದಾರೆ. ಈ ವೇಳೆ, ನಿಖಿಲ್ ಪರವಾಗಿ ಪ್ರಚಾರ ಮಾಡುತ್ತಿದ್ದ ಸಿಎಂ ಕುಮಾರಸ್ವಾಮಿ, ಡಾ ವಿಷ್ಣುವರ್ಧನ್ ಸ್ಮಾರಕದ ಬಗ್ಗೆ ಭರವಸೆ ನೀಡಿ ಗಮನ ಸೆಳೆದರು.
Vijaya Karnataka Web kumarswamy1104


ಮಂಡ್ಯದ ಹಳ್ಳಿಯೊಂದರಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ವಿಷ್ಣುವರ್ಧನ್ ಅಭಿಮಾನಿಗಳು ಸಿಎಂಗೆ ಬೇಡಿಕೆ ಇಟ್ಟರು. ಇದಕ್ಕೆ ಪ್ರತಿಯಾಗಿ ಸ್ಪಂದಿಸಿದ ಕುಮಾರಸ್ವಾಮಿ ''ಡಾ ವಿಷ್ಣುವರ್ಧನ್ ಅವರ ನಿಧನರಾದಾಗ ಅಭಿಮಾನ್ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ಮಾಡಲು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಾನೇ ಹೇಳಿದ್ದೆ. ಅಂದು ಜಯನಗರದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬದವರು ನಿರ್ಧರಿಸಿದ್ದರು'' ಎಂದು ಕುಮಾರಸ್ವಾಮಿಯವರು ತಮ್ಮ ಮುಂದೆ ನಿಂತಿದ್ದ ಅಭಿಮಾನಿಗಳಿಗೆ ಮನವರಿಕೆ ಮಾಡಿಕೊಟ್ಟರು.

'ಸ್ಮಾರಕ ನಿರ್ಮಾಣ ಮಾಡಿ' ಎಂದು ಕೇಳಿದ ಅಭಿಮಾನಿಗಳಿಗೆ ''ಚುನಾವಣೆ ಮುಗಿದ ನಂತರ ಯಾವ ರೀತಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ನೀವು ಆದೇಶ ಮಾಡಿ, ನಾನು ಮಾಡಿಕೊಡುತ್ತೇನೆ'' ಎಂದು ಭರವಸೆ ನೀಡಿದರು. ಮುಂದುವರಿದ ಸಿಎಂ, "ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ಆಗಲಿ ಎಂದು ಕೋಟ್ಯಾಂತರ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಆದರೆ, ಅಲ್ಲಿನ ಜಾಗ ವಿವಾದದ ಗೂಡಾಗಿದೆ. ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ವಿಷ್ಣು ಅವರ ಕುಟುಂಬ ಕೇಳಿಕೊಂಡಿದೆ.

ಹೀಗಾಗಿ, ಸದ್ಯಕ್ಕೆ ವಿಷ್ಣು ಸ್ಮಾರಕ ವಿವಾದ ಬಗೆಹರಿಯದ ಸಮಸ್ಯೆಯಾಗಿ ಉಳಿದುಕೊಂಡಿದೆ. ಚುನಾವಣೆ ಮುಗಿದ ಮೇಲೆ ಆ ಕಾರ್ಯ ಮಾಡೋಣ" ಎಂದು ಕುಮಾರಸ್ವಾಮಿಯವರು ವಿಷ್ಣು ಅಭಿಮಾನಿಗಳ ಮುಂದೆ ಹೇಳುವ ಮೂಲಕ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌