ಆ್ಯಪ್ನಗರ

ದರ್ಶನ್-ಯಶ್‌ಗೆ ಟಾಂಗ್‌ ಕೊಟ್ಟಿದ್ದ ನಿಖಿಲ್‌ಗೆ ಅಭಿಷೇಕ್ ಹೇಳಿದ್ದೇನು?

ನಾವು ಉದ್ದೇಶಪೂರ್ವಕವಾಗಿ ಯಾವುದೇ ಟೀಕೆಗಳನ್ನು ಮಾಡುತ್ತಿಲ್ಲ. ಬದಲಿಗೆ, ನಮ್ಮ ಎದುರಾಳಿಗಳು ಏನಾದರೂ ನಮ್ಮ ಬಗ್ಗೆ ಕೆಟ್ಟದಾಗಿ ಹೇಳಿದಾಗ ನಾವು ಅದಕ್ಕೆ ಪ್ರತಿಕ್ರಿಯೆ ಮಾಡಲೇಬೇಕಾಗುತ್ತದೆ. ಅಷ್ಟನ್ನು ಮಾತ್ರವೇ ನಾವು ಮಾಡುತ್ತಿದ್ದೇವೆ.

Vijaya Karnataka Web 10 Apr 2019, 12:03 pm
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತ್ರ ಅಭ್ಯರ್ಥಿ ಸುಮಲತಾ ಪರ ಪ್ರಚಾರಕಾರ್ಯದಲ್ಲಿ ಭಾಗಿಯಾಗಿರುವ ನಟ ರಾಕಿಂಗ್ ಸ್ಟಾರ್ ಯಶ್ ಬಗ್ಗೆ 'ಮನೆ ಬಾಡಿಗೆ ಕಟ್ಟೋಕೆ ಆಗದವರು ಮಾತನಾಡ್ತಾರೆ' ಎಂದು ನಿಖಿಲ್ ಹೇಳಿದ್ದರು. ಆ ಬಗ್ಗೆ ಸ್ವತಃ ಯಶ್ ನಿಖಿಲ್ ವಿರುದ್ಧ ಗರಂ ಆಗಿರುವುದು ಗೊತ್ತೇ ಇದೆ. ಇದೀಗ ನಿಖಿಲ್ ಕುಮಾರ್ ಹೇಳಿಕೆಗೆ ಸಮಲತಾ-ಅಂಬರೀ‍ಷ್ ಪುತ್ರ ಅಭಿಷೇಕ್ ಅಂಬರೀಷ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
Vijaya Karnataka Web abhi1004


ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಲಿ ಅಥವಾ ರಾಕಿಂಗ್ ಸ್ಟಾರ್ ಯಶ್ ಆಗಲಿ ಕಷ್ಟದಿಂದ ಮೇಲೆ ಬಂದು ಸಾಧನೆ ಮಾಡಿರುವ ವ್ಯಕ್ತಿಗಳು. ನಮಗೆ ಮತ್ತು ನಮ್ಮ ಎದುರಾಳಿ ಅಭ್ಯರ್ಥಿಗೆ ಕೌಟುಂಬಿಕ ಹಿನ್ನೆಲೆ ಚೆನ್ನಾಗಿದೆ. ಆದ್ರೆ, ದರ್ಶನ್ ಮತ್ತು ಯಶ್ ಅವರಿಗೆ ಯಾವುದೇ ಗಟ್ಟಿಯಾದ ಫ್ಯಾಮಿಲಿ ಹಿನ್ನೆಲೆ ಇರಲಿಲ್ಲ. ಆದರೂ ಸ್ವಂತ ದುಡಿಮೆಯಿಂದ ಮೇಲೆ ಬಂದಿರುವ ಸ್ಟರ್‌ಗಳು ಅವರು. ಅಂತಹ ವ್ಯಕ್ತಿಗಳ ಬಗ್ಗೆ ಮಾತನಾಡುವ ಹಕ್ಕು ನಿಖಲ್‌ಗೆ ಇದ್ಯಾ ಎಂದು ಯೋಚನೆ ಮಾಡ್ಬೇಕು'' ಎಂದಿದ್ದಾರೆ ಅಭಿಷೇಕ್ ಅಂಬರೀಷ್.

ಸುಮಲತಾ ಅಂಬರೀಷ್ ಬೆಂಬಲಿಗರು ಮತ್ತು ಕುಟುಂಬದ ಮೇಲೆ ಕೇಳಿ ಬರುತ್ತಿರುವ ಟೀಕೆಗಳಿಗೆ ಉತ್ತರಿಸಿದ ಅಭಿಷೇಕ್ "ನಾವು ಉದ್ದೇಶಪೂರ್ವಕವಾಗಿ ಯಾವುದೇ ಟೀಕೆಗಳನ್ನು ಮಾಡುತ್ತಿಲ್ಲ. ಬದಲಿಗೆ, ನಮ್ಮ ಎದುರಾಳಿಗಳು ಏನಾದರೂ ನಮ್ಮ ಬಗ್ಗೆ ಕೆಟ್ಟದಾಗಿ ಹೇಳಿದಾಗ ನಾವು ಅದಕ್ಕೆ ಪ್ರತಿಕ್ರಿಯೆ ಮಾಡಲೇಬೇಕಾಗುತ್ತದೆ. ಅಷ್ಟನ್ನು ಮಾತ್ರವೇ ನಾವು ಮಾಡುತ್ತಿದ್ದೇವೆ" ಎಂದು ಖಡಕ್‌ ತಿರುಗೇಟು ನೀಡಿದ್ದಾರೆ.

ಅಂದಹಾಗೆ, ನಟರಾದ ಯಶ್ ಮತ್ತು ದರ್ಶನ್ ಅವರು ಮಂಡ್ಯದಲ್ಲಿ ಅಬ್ಬರದ ಪ್ರಚಾರ ಮುಂದುವರಿಸಿದ್ದಾರೆ. ಒಬ್ಬರ ನಂತರ ಮತ್ತೊಬ್ಬರು ಮಂಡ್ಯದ ಬೇರೆ ಬೇರೆ ಸ್ಥಳಗಳಲ್ಲಿ ಪ್ರಚಾರ ಕೈಗೊಂಡು ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮತಯಾಚನೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಕೂಡ ಮತಯಾಚನೆ ಕಾರ್ಯಕ್ಕೆ ಧುಮುಕಿದ್ದಾರೆ. ಒಟ್ಟಿನಲ್ಲಿ, ಮಂಡ್ಯ ಲೋಕಸಭಾ ಕ್ಷೇತ್ರವು ಇಂಡಿಯಾದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌