ಆ್ಯಪ್ನಗರ

ಬ್ರೇಕಿಂಗ್ ನ್ಯೂಸ್: ಬಗೆಹರಿದ ಡಾ ವಿಷ್ಣುವರ್ಧನ್ ಸ್ಮಾರಕ ವಿವಾದ!

ಅಂದು ಕೇವಲ ವಿಷ್ಣು ವರ್ಧನ್ ಕುಟುಂಬಸ್ಥರು ಆ ಜಾಗದಲ್ಲಿ ಭೂಮಿಪೂಜೆ ನಡೆಸಿದ್ದರು. ಪೂಜೆ ನಡೆಸಿದ ಬಳಿಕ ಸ್ಥಳಕ್ಕೆ ಸಂಬಂಧಪಟ್ಟಂತೆ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೀಗಾಗಿ, ವಿಷ್ಣುವರ್ಧನ್ ಸ್ಮಾರಕದ ಕೆಲಸ ಅಲ್ಲಿಗೆ ನಿಂತು ಹೋಗಿತ್ತು.

Vijaya Karnataka Web 12 Apr 2019, 6:35 pm
ಕನ್ನಡದ ಹಿರಿಯ ನಟ ದಿವಂಗತ ಡಾ ವಿಷ್ಣುವರ್ಧನ್ ಸ್ಮಾರಕ ವಿವಾದಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಮೈಸೂರು ತಾಲೂಕು ಉದ್ಬೂರು ಸಮೀಪ ವಿಷ್ಣುವರ್ಧನ್ ಸ್ಮಾರಕಕ್ಕೆ ಜಿಲ್ಲಾಡಳಿತ ಸ್ಥಳ ನಿಗದಿ ಮಾಡಿತ್ತು. ಜಿಲ್ಲಾಡಳಿತವು ಸ್ಮಾರಕಕ್ಕೆ ನೀಡಿದ್ದ ಭೂಮಿಗೆ ಸಂಬಂಧಪಟ್ಟಂತೆ, ಸ್ಮಾರಕ ನಿರ್ಮಾಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು, ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
Vijaya Karnataka Web vishnu1204


ಅರ್ಜಿ ವಿಚಾರಣೆ ನಡೆಸಿದ 'ಹೈಕೋರ್ಟ್ ನ್ಯಾಯಪೀಠ' ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದು ಮಾಡಿ ವಿಷ್ಣು ಸ್ಮಾರಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ಅರ್ಜಿಯ ಅಂತಿಮ ವಿಚಾರಣೆ ಬಾಕಿ ಇದೆ

ವಿಷ್ಣುವರ್ಧನ್ ಸ್ಮಾರಕಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರ ಸ್ಮಾರಕದ ಕೆಲಸವನ್ನು ನಿಧಾನಗತಿಯಲ್ಲಿ ಮುಂದುವರಿಸಿಕೊಂಡು ಬಂದಿತ್ತು. ಇದೇ ವೇಳೆ ಭಾರತಿ ವಿಷ್ಣುವರ್ಧನ್ ಅವರ ಒತ್ತಾಯಕ್ಕೆ ಮಣಿದು ಸರ್ಕಾರವು, ವಿಷ್ಣು ಸ್ಮಾರಕಕ್ಕೆ ಮೈಸೂರಿನ ಎಚ್‌ಡಿ ಕೋಟೆ ರಸ್ತೆಯಲ್ಲಿರುವ ಹಾಲಾಳುವಿನ ಉದ್ಬೂರು ಕ್ರಾಸ್ ಬಳಿ ಜಮೀನು ನೀಡಿತ್ತು.

ಇದೇ ವೇಳೆ, 2016 ರ ಡಿಸೆಂಬರ್ 6 ರಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷ್ಣುವರ್ಧನ್ ಸ್ಮಾರಕ ಶಂಕುಸ್ಥಾಪನೆ ಮಾಡುವುದಕ್ಕೆ ಮುಂದಾಗಿದ್ದರು. ಆದರೆ, ಶಂಕುಸ್ಥಾಪನೆ ಹಿಂದಿನ ದಿನ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನರಾದರು. ಈ ವಿಷ್ಣುವರ್ಧನ್ ಸ್ಮಾರಕದ ಶಂಕುಸ್ಥಾಪನೆಯ ಸರ್ಕಾರಿ ಕಾರ್ಯಕ್ರಮ ಆ ಕಾರಣಕ್ಕೆ ರದ್ದಾಯಿತು.

ಅಂದು ಕೇವಲ ವಿಷ್ಣು ವರ್ಧನ್ ಕುಟುಂಬಸ್ಥರು ಆ ಜಾಗದಲ್ಲಿ ಭೂಮಿಪೂಜೆ ನಡೆಸಿದ್ದರು. ಪೂಜೆ ನಡೆಸಿದ ಬಳಿಕ ಸ್ಥಳಕ್ಕೆ ಸಂಬಂಧಪಟ್ಟಂತೆ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೀಗಾಗಿ, ವಿಷ್ಣುವರ್ಧನ್ ಸ್ಮಾರಕದ ಕೆಲಸ ಅಲ್ಲಿಗೆ ನಿಂತು ಹೋಗಿತ್ತು. ಇದೀಗ, ಹೈ ಕೋರ್ಟ್ ಆದೇಶದಂತೆ ವಿಷ್ಣು ಸ್ಮಾರಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ, ಅಂತಿಮ ವಿಚಾರಣೆ ಮಾತ್ರ ಬಾಕಿ ಇದೆ.

ಇಷ್ಟು ದಿನಗಳ ಮೇಲೆ ನಡೆದ ಈ ಬೆಳವಣಿಗೆಯಿಂದ ಡಾ ವಿಷ್ಣುವರ್ಧನ್ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಸದ್ಯದಲ್ಲೇ ಸ್ಮಾರಕ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಮುಂದಿನ ಕಾರ್ಯ ನೆರವೇರಲಿ ಎಂದು ವಿಷ್ಣು ಅಭಿಮಾನಿಗಳು ಹಾರೈಸತೊಡಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌