ಆ್ಯಪ್ನಗರ

ಅಪಘಾತದ ಬಳಿಕ ನಟ ಶಶಿಕುಮಾರ್ ಬಾಳಿಗೆ ಬೆಳಕಾಗಿದ್ದು ಯಾರು ಗೊತ್ತೇ?

ಇನ್ನೇನು ಎಲ್ಲವೂ ಮುಗಿಯಿತು ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಶಶಿಕುಮಾರ್ ಮನೆಗೆ ನಿರ್ದೇಶಕ ಡಿ ರಾಜೇಂದ್ರ ಬಾಬು ಅವರ ಜೊತೆಯಲ್ಲಿ ನಿರ್ಮಾಪಕಿ ಜಯಶ್ರೀದೇವಿ ಅವರು ಹೋಗಿದ್ದರಂತೆ. ಆಗ ಅವರು "ಒಂದು ಸಿನಿಮಾ ಮಾಡ್ತಿದ್ದೀನಿ, ಐದು ಜನ ಹೀರೋ. ಅದರಲ್ಲಿ ನೀವು ಒಬ್ಬರು ಆಕ್ಟ್ ಮಾಡಿ" ಎಂದು ನಟ ಶಶಿಕುಮಾರ್ ಅವರಿಗೆ ಚಾನ್ಸ್ ಕೊಟ್ಟರಂತೆ.

Vijaya Karnataka Web 16 May 2019, 8:19 pm
ಕನ್ನಡದ ನಟ, ಸುಪ್ರಿಂ ಹೀರೋ ಶಶಿಕುಮಾರ್ ಬದುಕಿನಲ್ಲಿ ನಡೆದ ಆ ಅಪಘಾತ ನಟನ ಬದುಕನ್ನೇ ಬದಲಾಯಿಸಿಬಿಟ್ಟತು. 1998 ಜುಲೈ 31 ರಂದು ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಸುಪ್ರೀಂ ಹೀರೋ ಶಶಿ ಕುಮಾರ್ ಅವರ ಕಾರು ಅಪಘಾತವಾಯಿತು.ಆ ಆಕ್ಸಿಡೆಂಟ್‌ನಲ್ಲಿ ನಟ ಶಶಿ ಕುಮಾರ್ ಅವರ ಮುಖಕ್ಕೆ ಗಂಭೀರ ಗಾಯಗಳಾಗಿ ಮೂಗಿಗೆ ಹೆಚ್ಚು ಡ್ಯಾಮೇಜ್ ಆಯಿತು.
Vijaya Karnataka Web shashikumar1605


ಸತತ 8 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನೀಡಿದ ಬಳಿಕ ಒಂದು ಹಂತಕ್ಕೆ ಶಶಿಕುಮಾರ್ ಅವರ ಮುಖದಲ್ಲಿ ಸ್ವಲ್ಪ ಚೇತರಿಕೆಯಾಯಿತು. ಆದರೆ, ಅದರಿಂದ ಶಶಿಕುಮಾರ್ ಅವರಿಗೆ ಡ್ಯಾನ್ಸ್ ಮಾಡೋಕೆ ಆಗಲ್ಲ, ಫೈಟ್ ಮಾಡೋಕೆ ಆಗಲ್ಲ, ಅದೂ ಇದೂ ಎಂದು ಪತ್ರಿಕೆಗಳಲ್ಲಿ ವರದಿಯಾದ ಪರಿಣಾಮ ಯಾವ ಸಿನಿಮಾ ಅವಕಾಶವೂ ಅವರಿಗೆ ಸಿಗಲಿಲ್ಲ.
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಶಿಕುಮಾರ್ ಗೆ ಆಗ ಮದುವೆ ಆಗಿ ಇಬ್ಬರು ಮಕ್ಕಳು ಕೂಡ ಇದ್ದರು.

ಇನ್ನೇನು ಎಲ್ಲವೂ ಮುಗಿಯಿತು ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಶಶಿಕುಮಾರ್ ಮನೆಗೆ ನಿರ್ದೇಶಕ ಡಿ ರಾಜೇಂದ್ರ ಬಾಬು ಅವರ ಜೊತೆಯಲ್ಲಿ ನಿರ್ಮಾಪಕಿ ಜಯಶ್ರೀದೇವಿ ಅವರು ಹೋಗಿದ್ದರಂತೆ. ಆಗ ಅವರು "ಒಂದು ಸಿನಿಮಾ ಮಾಡ್ತಿದ್ದೀನಿ, ಐದು ಜನ ಹೀರೋ. ಅದರಲ್ಲಿ ನೀವು ಒಬ್ಬರು ಆಕ್ಟ್ ಮಾಡಿ" ಎಂದು ನಟ ಶಶಿಕುಮಾರ್ ಅವರಿಗೆ ಚಾನ್ಸ್ ಕೊಟ್ಟರಂತೆ.

ಹೀಗೆ ನಿರ್ಮಾಪಕಿ ಜಯಶ್ರೀ ಕೊಟ್ಟ ಅವಕಾಶದ ಪ್ರತಿಫಲವೇ ಹಬ್ಬ ಸಿನಿಮಾ. ಈ ಚಿತ್ರ ಸುಪ್ರೀಂ ಹೀರೋ ಜೀವನದಲ್ಲಿ ನಿರೀಕ್ಷೆಗೂ ಮೀರಿ ಬದಲಾವಣೆ ತಂದಿತು. ಡಾ ವಿಷ್ಣುವರ್ಧನ್, ಅಂಬರೀಷ್, ದೇವರಾಜ್, ರಾಮ್ ಕುಮಾರ್ ಮತ್ತು ಶಶಿ ಕುಮಾರ್ ನಟಿಸಿದ ಹಬ್ಬ ಚಿತ್ರವು ಸೂಪರ್ ಹಿಟ್ ಆಯ್ತು. ಅಲ್ಲಿಂದ ಮತ್ತೆ ಶಶಿ ಕುಮಾರ್ ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿ ಆದರು.

ಶಶಿಕುಮಾರ್ ಅವರು ಹಬ್ಬ ಸಿನಿಮಾದಲ್ಲಿ ನಟಿಸಿದ್ದು ಶಶಿಕುಮಾರ್ ಅವರ ಪತ್ನಿಗೂ ಖುಷಿ ಇತ್ತಂತೆ. ಯಾಕೆಂದರೆ, ಈ ಚಿತ್ರದಲ್ಲಿ ಶಶಿಕುಮಾರ್ ನಟಿಸಿದ್ದು ಅವರ ನಿಜ ಜೀವನಕ್ಕೆ ಬಹಳ ಹತ್ತಿರವಾಗಿತ್ತಂತೆ. ಸುಳ್ಳನ್ನೇ ಹೇಳದ ವ್ಯಕ್ತಿ ಪಾತ್ರದಲ್ಲಿ ಹಬ್ಬ ಚಿತ್ರದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್ ನಟಿಸಿದ್ದರು. 1999 ಏಪ್ರಿಲ್ 16 ರಂದು ಬಿಡುಗಡೆಯಾದ ಹಬ್ಬ ಚಿತ್ರವನ್ನು ಡಿ ರಾಜೇಂದ್ರ ಬಾಬು ನಿರ್ದೇಶನ ಮಾಡಿದ್ದರು. ಹಂಸಲೇಖ ಸಂಗೀತ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌