ಆ್ಯಪ್ನಗರ

ಕಿಡ್ನಿ ವೈಫಲ್ಯದಿಂದ ಹಾಸ್ಯನಟ ವಠಾರ ಮಲ್ಲೇಶ್ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಾಸ್ಯನಟ ವಠಾರ ಮಲ್ಲೇಶ್ ಶುಕ್ರವಾರ (ಜು.6) ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಹಾಗೂ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Vijaya Karnataka Web 6 Jul 2018, 12:37 pm
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಾಸ್ಯನಟ ವಠಾರ ಮಲ್ಲೇಶ್ ಶುಕ್ರವಾರ (ಜು.6) ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಹಾಗೂ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
Vijaya Karnataka Web vathara-mallesh1


ಇತ್ತೀಚೆಗಷ್ಟೇ ಡಿಸ್ಚಾರ್ಜ್ ಆಗಿದ್ದ ಮಲ್ಲೇಶ್ ತನ್ನ ಆನೇಕಲ್‌ನ ಸ್ವಗ್ರಾಮದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಶುಕ್ರವಾರ ಮುಂಜಾನೆ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯಾಗಿದ್ದ ಮಲ್ಲೇಶ್ 150ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.

ವಠಾರ ಮಲ್ಲೇಶ್ ನಿಧಕ್ಕೆ ಸಾಮಾಜಿಕ ತಾಣಗಳಲ್ಲಿ ಅವರ ಅಭಿಮಾನಿಗಳು ಸಂತಾಪದ ಕೋಡಿ ಹರಿಸಿದ್ದಾರೆ. 'ವಠಾರ' ಧಾರಾವಾಹಿ ಮೂಲಕ ಬಣ್ಣದ ಜಗತ್ತಿಗೆ ಅಡಿಯಿಟ್ಟ ಮಲ್ಲೇಶ್ ರಂಗಭೂಮಿಯಲ್ಲೂ ಸಕ್ರಿಯರಾಗಿದ್ದರು.


ಸುಂಟರಗಾಳಿ, ದತ್ತ, ಅಭಯ್, ಅಜಯ್, ಚಾರ್‌ಮಿನಾರ್, ಚಡ್ಡಿದೋಸ್ತ್ ಮುಂತಾದ ಚಿತ್ರಗಳಲ್ಲಿ ಹಾಸ್ಯನಟನಾಗಿ ನಕ್ಕು ನಲಿಸಿದ್ದಾರೆ ವಠಾರ ಮಲ್ಲೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸೋಣ.





ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌