ಆ್ಯಪ್ನಗರ

ಬಹುಬಾಷಾ ನಟ ರಮೇಶ್ ಅರವಿಂದ್‌ಗೆ ಡಾ.ವಿಷ್ಣುವರ್ಧನ ರಾಷ್ಟ್ರೀಯ ಪ್ರಶಸ್ತಿ

ಡಾ. ವಿಷ್ಣುವರ್ಧನ್‌ ಸೇನಾ ಸಮಿತಿ ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಜತೆಗೆ ಸಿನಿಮಾ ರಂಗದವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸುವ ಸಂಪ್ರದಾಯ ಕೂಡಿ ಬೆಳೆಸಿಕೊಂಡು ಬಂದಿದೆ.

Vijaya Karnataka Web 6 Sep 2019, 7:47 pm
ಬೆಂಗಳೂರು: ಡಾ.ವಿಷ್ಣುವರ್ಧನ ಹೆಸರಿನಲ್ಲಿ ಕಳೆದ ಮೂರು ವರ್ಷಗಳಿಂದ ನೀಡಲಾಗುತ್ತಿರುವ ಡಾ.ವಿಷ್ಣುವರ್ಧನ ರಾಷ್ಟ್ರೀಯ ಪ್ರಶಸ್ತಿಗೆ ಈ ಬಾರಿ ಬಹುಭಾಷಾ ನಟ ಮತ್ತು ಡಾ.ವಿಷ್ಣುವರ್ಧನ್ ಆಪ್ತ ಒಡನಾಡಿ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆಂದು ಡಾ.ವಿಷ್ಣು ಸೇನಾ ಸಮಿತಿ ತಿಳಿಸಿದೆ.
Vijaya Karnataka Web ರಮೇಶ್ ಅರವಿಂದ್
ರಮೇಶ್‌ ಅರವಿಂದ್


ಪ್ರಶಸ್ತಿಯು ಅಭಿನಂದನಾ ಪತ್ರ, ಪ್ರಶಸ್ತಿ ಫಲಕ 25000 ರೂ. ನಗದು ಪುರಸ್ಕಾರ ಒಳಗೊಂಡಿದೆ ಎಂದು ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.

2017ನೇ ಸಾಲಿನಲ್ಲಿ ಹೊಸದಿಲ್ಲಿಯಲ್ಲಿ ನಡೆದ ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವದಿಂದ ಈ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸಮಿತಿ ಶುರುಮಾಡಿದೆ.

ಡಾ.ವಿಷ್ಣುವರ್ಧನ 69ನೇ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 18 ರಿಂದ 20 ರ ತನಕ ಮೂರು ದಿನಗಳ ಕಾಲ ನಡೆಯಲಿರುವ ಡಾ.ವಿಷ್ಣುವರ್ಧನ ನಾಟಕೋತ್ಸವದ ಉದ್ಘಾಟನಾ ದಿನವಾದ ಸೆಪ್ಟೆಂಬರ್ 18 ರಂದು ಸಂಜೆ 4.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ.

2017ನೇ ಇಸವಿಯಲ್ಲಿ ಮೊದಲಿಗೆ ಈ ಪ್ರಶಸ್ತಿಯನ್ನು ಹಿರಿಯ ಕಲಾವಿದರಾದ ಎಸ್.ಶಿವರಾಮ್‌ಗೆ ಮತ್ತು 2018 ನೇ ಇಸವಿಯಲ್ಲಿ ಬಹು ಭಾಷಾ ನಟಿ ವಿನಯಾಪ್ರಕಾಶ್‌ಗೆ ನೀಡಿದ್ದನ್ನು ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌