ಆ್ಯಪ್ನಗರ

ನಟ ಮಹೇಶ್‌ ಬಾಬು ವಿರುದ್ಧ ಕನ್ನಡಿಗರ ಕಿಡಿ

ತೆಲುಗಿನ ಜನಪ್ರಿಯ ನಟ ಮಹೇಶ್‌ ಬಾಬು ವಿರುದ್ಧ ಕನ್ನಡಿಗರು ಕಿಡಿ ಕಾರಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ಅವರು ಎಲ್ಲರಿಗೆ ಶುಭಾಶಯ ಕೋರುವಾಗ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಕೋಪಗೊಂಡಿದ್ದಾರೆ.

Vijaya Karnataka 21 Oct 2018, 5:00 am
ತೆಲುಗಿನ ಜನಪ್ರಿಯ ನಟ ಮಹೇಶ್‌ ಬಾಬು ವಿರುದ್ಧ ಕನ್ನಡಿಗರು ಕಿಡಿ ಕಾರಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ಅವರು ಎಲ್ಲರಿಗೆ ಶುಭಾಶಯ ಕೋರುವಾಗ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಕೋಪಗೊಂಡಿದ್ದಾರೆ.
Vijaya Karnataka Web kannada movie lovers against mahesh babu
ನಟ ಮಹೇಶ್‌ ಬಾಬು ವಿರುದ್ಧ ಕನ್ನಡಿಗರ ಕಿಡಿ


ಮಹೇಶ್‌ ಬಾಬು ದಸರಾ ಸಂದರ್ಭದಲ್ಲಿ ಎಲ್ಲರಿಗೂ ವಿಜಯ ದಶಮಿ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದರು. ಇದರಲ್ಲಿ ಅವರು ತಮಿಳು, ತೆಲುಗು ಮತ್ತು ಮಲೆಯಾಳ ಭಾಷೆಗಳಲ್ಲಿ ಶುಭಾಶಯ ಕೋರಿದ್ದರು. ಅದರೆ, ಕನ್ನಡ ಭಾಷೆಯಲ್ಲಿ ಟ್ವೀಟ್‌ ಮಾಡಿರಲಿಲ್ಲ. ಇದು ಕನ್ನಡಿಗರಿಗೆ ಕೋಪ ತರಿಸಿದೆ.

ಮಹೇಶ್‌ ಬಾಬು ನಟನೆಯ ಚಿತ್ರಗಳಿಗೆ ಕರ್ನಾಟಕದಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿದೆ. ಹೀಗಿದ್ದರೂ ಕನ್ನಡವನ್ನು ನಿರ್ಲಕ್ಷಿಸಿದ್ದಾರೆ ಎಂದು ಕನ್ನಡಿಗರು ಅಸಮಾಧಾನ ತೋರಿದ್ದಾರೆ. ಅವರ ಸಿನಿಮಾಗಳನ್ನು ಕನ್ನಡ ನಾಡಿನಲ್ಲಿ ಬ್ಯಾನ್‌ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಸಿನಿ ಪ್ರಿಯರು ಬರೆಯತೊಡಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌