ಆ್ಯಪ್ನಗರ

ದರ್ಶನ್ ಭೇಟಿಯಾದ 'ಟಕ್ಕರ್' ಸಿನಿಮಾ ಟೀಮ್: ದರ್ಶನ್ ಹೇಳಿದ್ದೇನು ಗೊತ್ತೇ?

ಎಸ್ಎಲ್ಎನ್ ಕ್ರಿಯೇಶನ್ಸ್ ಲಾಂಛನದಲ್ಲಿ ನಾಗೇಶ್ ಕೋಗಿಲು ನಿರ್ಮಿಸುತ್ತಿರುವ ಸಿನಿಮಾ ಟಕ್ಕರ್. ದರ್ಶನ್ ಸಂಬಂಧಿಕ ಹುಡುಗ ಮನೋಜ್ ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕ ನಟನಾಗಿ ಕಾಲಿಟ್ಟಿದ್ದಾರೆ. ಇತ್ತೀಚಿಗಷ್ಟೇ ಟಕ್ಕರ್ ಚಿತ್ರದ ಮೊದಲ ಟೀಸರನ್ನು ದಿನಕರ್ ತೂಗುದೀಪ ಲೋಕಾರ್ಪಣೆಗೊಳಿಸಿದ್ದರು.

Vijaya Karnataka Web 1 May 2019, 4:22 pm
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂಬಂಧಿ ಮನೋಜ್ ಮನು ನಟನೆಯ 'ಟಕ್ಕರ್' ಸಿನಿಮಾ ಇದೀಗ ಸಖತ್ ಸೌಂಡ್ ಮಾಡತೊಡಗಿದೆ. ಇತ್ತೀಚೆಗಷ್ಟೇ ಟೀಸರ್ ರಿಲೀಸ್ ಮಾಡಿಕೊಂಡು ಸಂಭ್ರಮದಲ್ಲಿ ತೇಲಾಡುತ್ತಿರುವ 'ಟಕ್ಕರ್' ಚಿತ್ರತಂಡವು ನಟ ದರ್ಶನ್ ಅವರನ್ನು ಭೇಟಿ ಮಾಡಿ ಹೊಗಳಿಕೆ ಪಡೆದುಕೊಂಡಿದೆ ಎನ್ನಲಾಗಿದೆ.
Vijaya Karnataka Web darshan-manoj


ಎಸ್ಎಲ್ಎನ್ ಕ್ರಿಯೇಶನ್ಸ್ ಲಾಂಛನದಲ್ಲಿ ನಾಗೇಶ್ ಕೋಗಿಲು ನಿರ್ಮಿಸುತ್ತಿರುವ ಸಿನಿಮಾ ಟಕ್ಕರ್. ದರ್ಶನ್ ಸಂಬಂಧಿಕ ಹುಡುಗ ಮನೋಜ್ ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕ ನಟನಾಗಿ ಕಾಲಿಟ್ಟಿದ್ದಾರೆ. ಇತ್ತೀಚಿಗಷ್ಟೇ ಟಕ್ಕರ್ ಚಿತ್ರದ ಮೊದಲ ಟೀಸರನ್ನು ದಿನಕರ್ ತೂಗುದೀಪ ಲೋಕಾರ್ಪಣೆಗೊಳಿಸಿದ್ದರು. ಈಗ ದರ್ಶನ್ ಅವರು ಟಕ್ಕರ್ ಚಿತ್ರತಂಡವನ್ನು ಮನೆಗೆ ಕರೆಸಿಕೊಂಡು ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಅಷ್ಟೇ ಅಲ್ಲ, ಸ್ಟಾರ್ ನಟ ದರ್ಶನ್ ಈ ಚಿತ್ರವನ್ನು ಯಾವ ರೀತಿ ಬಿಡುಗಡೆ ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ನಿರ್ಮಾಪಕ ನಾಗೇಶ್ ಕೋಗಿಲು ಅವರಿಗೆ ನೀಡಿದ್ದಾರಂತೆ.
ಮೊದಲ ಟೀಸರ್ ತುಂಬಾ ಚೆನ್ನಾಗಿ ಬಂದಿದೆ ಎಂದಿರುವ ದರ್ಶನ್ ಅವರು, ಧ್ವನಿಮುದ್ರಣಗೊಂಡಿರುವ ಟೈಟಲ್ ಸಾಂಗ್ ಕೇಳಿ ಅದರ ಬಗ್ಗೆ ಕೂಡಾ ಮೆಚ್ಚುಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅಂದಹಾಗೆ ಈ ಚಿತ್ರದ ನಿರ್ದೇಶಕರು ವಿ ರಘು ಶಾಸ್ತ್ರಿ.

ಚಿತ್ರದ ಬಗ್ಗೆ ಮಾತನಾಡಿರುವ ದರ್ಶನ್ ಅಷ್ಟಕ್ಕೇ ಸುಮ್ಮನಾಗಿಲ್ಲ. ತಮ್ಮ ಸಂಬಂಧಿ ಹುಡುಗ, ಟಕ್ಕರ್ ಚಿತ್ರದ ನಾಯಕನಟ ಮನೋಜ್‌ಗೆ "ನಿನ್ನನ್ನು ನಂಬಿ ನಿರ್ಮಾಪಕರು ಹಣ ಹೂಡಿದ್ದಾರೆ. ಪ್ರತಿ ಹಂತದಲ್ಲೂ ನೀನು ಅವರ ಜೊತೆಗಿರಬೇಕು. ನಿರ್ಮಾಪಕರ ಹಿತ ಕಾಯಬೇಕಿರುವುದು ಪ್ರತಿಯೊಬ್ಬ ಕಲಾವಿದನ ಕರ್ತವ್ಯ. ನಾಗೇಶ್ ಕೋಗಿಲು ಮತ್ತು ನಿನ್ನ ಸ್ನೇಹ ಬಾಂಧವ್ಯ ಈ ಒಂದು ಸಿನಿಮಾಗೆ ಕೊನೆಯಾಗಬಾರದು. ಟಕ್ಕರ್ ಸಿನಿಮಾ ತೆರೆಗೆ ಬಂದ ಮೇಲೂ ಇನ್ನೂ ಸಾಕಷ್ಟು ಸಿನಿಮಾಗಳಲ್ಲಿ ನೀವು ಒಟ್ಟಿಗೇ ಕೆಲಸ ಮಾಡುವಂತಾಗಲಿ” ಎಂದು ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌