ಆ್ಯಪ್ನಗರ

ಸಿನಿಮಾ ನಾಯಕಿಯ ಕಥೆ ಹೇಳ್ತಾರೆ ಆದರ್ಶ್‌

ಶುದ್ಧಿ ಚಿತ್ರದ ಮೂಲಕ ಗಮನ ಸೆಳೆದಿದ್ದ ನಿರ್ದೇಶಕ ಆದರ್ಶ ಈಶ್ವರಪ್ಪ ಭಿನ್ನ ಎಂಬ ವಿಶಿಷ್ಟ ಟೈಟಲ್‌ ಉಳ್ಳ ಸಿನಿಮಾ ಮಾಡುತ್ತಿದ್ದಾರೆ.

Vijaya Karnataka 14 Apr 2018, 4:47 pm
ಶುದ್ಧಿ ಚಿತ್ರದ ಮೂಲಕ ಗಮನ ಸೆಳೆದಿದ್ದ ನಿರ್ದೇಶಕ ಆದರ್ಶ ಈಶ್ವರಪ್ಪ ಭಿನ್ನ ಎಂಬ ವಿಶಿಷ್ಟ ಟೈಟಲ್‌ ಉಳ್ಳ ಸಿನಿಮಾ ಮಾಡುತ್ತಿದ್ದಾರೆ. ಶರಪಂಜರ ಸಿನಿಮಾದ ಛಾಯೆಯಲ್ಲಿ ಚಿತ್ರವೊಂದನ್ನು ಮಾಡುವುದಾಗಿ ಹೇಳಿದ್ದರು. ಈಗ ಆ ಸಿನಿಮಾದ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದ್ದು,ಚಿತ್ರಕ್ಕೆ ಭಿನ್ನ ಎಂಬ ಟೈಟಲ್‌ ಫೈನಲ್‌ ಮಾಡಿದ್ದಾರೆ. ಈ ಚಿತ್ರದಲ್ಲಿ ಸಿನಿಮಾದಲ್ಲಿ ನಾಯಕಿಯಾಗಬೇಕು ಎಂದು ಕನಸು ಕಟ್ಟಿಕೊಂಡ ಯುವತಿಗೆ, ಆ ಕನಸು ನುಚ್ಚು ನೂರಾದಾಗ ಆಕೆಯ ಬದುಕಲ್ಲಿ ನಡೆಯುವ ಘಟನೆಗಳನ್ನೇ ಸಿನಿಮಾ ಮಾಡಲು ಹೊರಟಿದ್ದಾರೆ ಆದರ್ಶ್‌.
Vijaya Karnataka Web sharapanjara


ಈ ಚಿತ್ರದ ಮೂಲಕ ನಿರ್ದೇಶಕ ಪುಟ್ಟಣ್ಣ ಅವರಿಗೆ ವಿಶೇಷ ಗೌರವ ಸಲ್ಲಿಸಲು ಮುಂದಾಗಿದ್ದಾರೆ ಆದರ್ಶ್‌. ಈ ಚಿತ್ರದಲ್ಲಿ ಏಳು ಪಾತ್ರಗಳನ್ನು ಇಟ್ಟುಕೊಂಡಿದ್ದಾರೆ. ಶುದ್ಧಿ ಸಿನಿಮಾದಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞನರೇ ಇಲ್ಲೂ ಕೆಲಸ ಮಾಡುತ್ತಿದ್ದಾರೆ. ಭಿನ್ನ, ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾ ಆಗಿದ್ದು ಜುಲೈ ನಲ್ಲಿ ಚಿತ್ರೀಕರಣ ಶುರುವಾಗಲಿದೆ. ಚಿತ್ರವನ್ನ ನಿರ್ದೇಶನ ಮಾಡುವುದರ ಜೊತೆಯಲ್ಲಿ ಸಂಕಲನದ ಜವಬ್ದಾರಿಯನ್ನು ಆದರ್ಶ್‌ ಹೊತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌