ಆ್ಯಪ್ನಗರ

ಅನ್ನಪೂರ್ಣ ಸ್ಟುಡಿಯೋದಲ್ಲಿ ಮಹೇಶ್ ಬಾಬು-ಶಿವಣ್ಣ ಭೇಟಿ

ಕವಚ ಸೇರಿದಂತೆ, ಕನ್ನಡದ ಸೆಂಚುರಿ ಸ್ಟಾರ್ ಶಿವಣ್ಣ ಅವರು ಸಾಕಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ದಿ ವಿಲನ್ ನಂತರ ಶಿವಣ್ಣ ಚಿತ್ರಗಳು ತೆರೆಯ ಮೇಲೆ ಬಂದಿಲ್ಲ. ಹೀಗಾಗಿ ಸಹಜವಾಗಿಯೇ ಶಿವರಾಜ್‌ಕುಮಾರ್ ಅಭಿಮಾನಿಗಳು ಅವರ ಚಿತ್ರಗಳನ್ನು ತೆರೆಯ ಮೇಲೆ ನೋಡಲು ಕಾಯುತ್ತಿದ್ದಾರೆ.

Vijaya Karnataka Web 13 Mar 2019, 12:55 pm
ಕನ್ನಡದ ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ನಟ ಶಿವರಾಜ್ ಕುಮಾರ್ ಹಾಗೂ ಟಾಲಿವುಡ್ ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಇತ್ತೀಚಿಗೆ ಪರಸ್ಪರ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರಿಬ್ಬರೂ ಸಾಕಷ್ಟು ಹೊತ್ತು ಮಾತನಾಡಿದ್ದಾರೆ ಎನ್ನಲಾಗಿದೆ.
Vijaya Karnataka Web mahesh1303


ಖಾಸಗಿ ಜಾಹೀರಾತು ಒಂದರ ಶೂಟಿಂಗ್ ನಿಮಿತ್ತ ಶಿವಣ್ಣ ಹೈದಾರಾಬಾದ್ನ ಅನ್ನಪೂರ್ಣ ಸ್ಟುಡಿಯೋಗೆ ಹೋಗಿದ್ದರು. ಅಲ್ಲಿ, ಪಕ್ಕದಲ್ಲೇ ಮಹರ್ಷಿ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದ ತೆಲುಗು ನಟ 'ಪ್ರಿನ್ಸ್' ಮಹೇಶ್ ಬಾಬು ಬಂದು ಶಿವಣ್ಣ ಹಾಗೂ ಅವರ ಜೊತೆಗಿದ್ದ ಕನ್ನಡದ ಖ್ಯಾತ ನಿರ್ಮಾಪಕ ಕೆಪಿ ಶ್ರೀಕಾಂತ್ ಅವರನ್ನು ಮಾತನಾಡಿಸಿದ್ದಾರೆ. ಈ ಸಂದರ್ಭದಲ್ಲಿ, ಶಿವರಾಜ್‌ಕುಮಾರ್ ಅವರ ಮುಂಬರುವ ಚಿತ್ರಗಳು ಹಾಗೂ ಸದ್ಯದಲ್ಲೇ ನಡೆಯಲಿರುವ ಲೋಕಸಭಾ ಚುನಾವಣೆ ಕುರಿತಂತೆ ಮಾತುಕತೆ ನಡೆದಿದೆ ಎಂದು ಸುದ್ದಿ ಮೂಲಗಳಿಂದ ತಿಳಿದು ಬಂದಿದೆ.

ಸದ್ಯದಲ್ಲೇ ಬಿಡುಗಡೆ ಕಾಣಲಿರುವ ಕವಚ ಸೇರಿದಂತೆ, ಕನ್ನಡದ ಸೆಂಚುರಿ ಸ್ಟಾರ್ ಶಿವಣ್ಣ ಅವರು ಸಾಕಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ದಿ ವಿಲನ್ ನಂತರ ಶಿವಣ್ಣ ಚಿತ್ರಗಳು ತೆರೆಯ ಮೇಲೆ ಬಂದಿಲ್ಲ. ಹೀಗಾಗಿ ಸಹಜವಾಗಿಯೇ ಶಿವರಾಜ್‌ಕುಮಾರ್ ಅಭಿಮಾನಿಗಳು ಅವರ ಚಿತ್ರಗಳನ್ನು ತೆರೆಯ ಮೇಲೆ ನೋಡಲು ಕಾಯುತ್ತಿದ್ದಾರೆ. ಕವಚ ಚಿತ್ರವು ಮಲಯಾಳಂ ಚಿತ್ರದ ರೀಮೇಕ್ ಆಗಿದ್ದು, ಚಿತ್ರದ ಕಥೆ ತುಂಬಾ ಚೆನ್ನಾಗಿದೆ ಎಂಬ ಕಾರಣಕ್ಕೆ ಶಿವಣ್ಣ ಅವರು ರೀಮೇಕ್ ಚಿತ್ರವನ್ನು ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು, ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಮಹರ್ಷಿ ಚಿತ್ರದ ಚಿತ್ರೀಕರಣದಲ್ಲಿ ಸದ್ಯಕ್ಕೆ ನಿರತರಾಗಿದ್ದಾರೆ. ಸುಕುಮಾರ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಸ್ವತಃ ನಟ ಮಹೇಶ್ ಬಾಬು ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದು. ಮಹರ್ಷಿ ನಂತರ ಅವರು ಎಸ್ಎಸ್ ರಾಜಮೌಳಿಯವರ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ, ಇತ್ತೀಚಿಗೆ ಸ್ಯಾಂಡಲ್‌ವುಡ್ ಹಾಗೂ ಟಾಲಿವುಡ್ ಸ್ಟಾರ್‌ಗಳ ಭೇಟಿಗಳು ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎನ್ನಬಹುದು. ಟಾಲಿವುಡ್-ಸ್ಯಾಂಡಲ್‌ವುಡ್ ಮಾತ್ರವಲ್ಲದೇ ತಮಿಳು-ಸ್ಯಾಂಡಲ್‌ವುಡ್ ದಿಗ್ಗಜರ ಸಂಗಮವೂ ಇತ್ತೀಚಿಗೆ ಸಾಕಷ್ಟು ಪ್ರಮಾಣದಲ್ಲಿ ನಡೆದಿದೆ ಎಂಬುದನ್ನು ಗಮನಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌