ಆ್ಯಪ್ನಗರ

ಪುಟ್ಟಣ್ಣ ನಂತರ ಇನ್ನೂಂದು ಕಥಾ ಸಂಗಮ ಮುನ್ನುಡಿ ಬರೆದ ರಿಶಬ್‌

ಪುಟ್ಟಣ್ಣ ಕಣಗಾಲ್‌ ನಂತರ ಮತ್ತೊಂದು ಮಹಾ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ರಿಷಬ್‌ ಶೆಟ್ಟಿ. ಕಥಾ ಸಂಗಮ ಹೆಸರಿನಲ್ಲಿ ತಯಾರಾಗಲಿರುವ ಈ ಚಿತ್ರದಲ್ಲಿ ಹತ್ತು ಹಲವು ವಿಶೇಷಗಳಿವೆ. ಈ ಕುರಿತು ರಿಷಬ್‌ ಮಾತನಾಡಿದ್ದಾರೆ.

Vijaya Karnataka 30 Jan 2019, 7:31 am
-ಶರಣು ಹುಲ್ಲೂರು
Vijaya Karnataka Web Rishab Shetty


ಏಳು ನಿರ್ದೇಶಕರು, ಏಳು ಸಂಗೀತ ನಿರ್ದೇಶಕರು, ಒಂದೊಂದು ಚಿತ್ರಕ್ಕೂ ಬೇರೆ ಬೇರೆ ಕಲಾವಿದರು. ಹೀಗೆ ಸಪ್ತ ಕಥೆಗಳನ್ನು ಇಟ್ಟುಕೊಂಡು 'ಕಥಾ ಸಂಗಮ' ಸಿನಿಮಾ ಸಿದ್ಧವಾಗುತ್ತಿದೆ. ಈ ಎಲ್ಲ ಸಿನಿಮಾಗಳ ನೇತೃತ್ವ ವಹಿಸಿದ್ದಾರೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿ. 1976ರಲ್ಲಿ ಪುಟ್ಟಣ್ಣ ಕಣಗಾಲ್‌ ಅವರು ಐದು ಕಥೆಗಳನ್ನು ಒಟ್ಟಾಗಿಸಿ 'ಕಥಾ ಸಂಗಮ' ಚಿತ್ರ ಮಾಡಿದ್ದರು. 43 ವರ್ಷಗಳ ನಂತರ ಅದೇ ಹೆಸರಿನಲ್ಲಿ ಮತ್ತೊಂದು ಸಿನಿಮಾ ಬರುತ್ತಿದೆ.

ವಿಜಯ ಕರ್ನಾಟಕ -ಲವಲವಿಕೆ ಆಯೋಜನೆ ಮಾಡಿದ್ದ ಕಿರುಚಿತ್ರೋತ್ಸವದಲ್ಲಿ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದಿದ್ದ ನಿರ್ದೇಶಕ ಜೈ ಶಂಕರ್‌ ಕೂಡ ಕಥಾಸಂಗಮದಲ್ಲಿ ಒಂದು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

'ಕನ್ನಡದ ಮಹಾನ್‌ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರು ಎಲ್ಲ ರೀತಿಯ ಪ್ರಯೋಗಗಳನ್ನು ಕನ್ನಡ ಚಿತ್ರರಂಗದಲ್ಲಿ ಮಾಡಿದ್ದಾರೆ. ಅವುಗಳಲ್ಲಿ ಪ್ರಮುಖವಾದದ್ದು ಕೆಲ ಕಥೆಗಳನ್ನು ಒಟ್ಟಾಗಿಸಿ ಕಥಾ ಸಂಗಮ ಚಿತ್ರ ಮಾಡಿದ್ದು. ಈಗ ನಾವು ಕೂಡ ಅವರ ನೆನಪಿನಲ್ಲೇ ಈ ಚಿತ್ರ ಮಾಡುತ್ತಿದ್ದೇವೆ. ಏಳು ವಿಭಿನ್ನ ಸಂಸ್ಕೃತಿಯ, ನೆಲದ, ಸೊಗಡಿನ ಕಥೆಗಳನ್ನು ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇವೆ. ಹೊಸ ಮತ್ತು ಅನುಭವಿ ಕಲಾವಿದರು ನಟಿಸುತ್ತಿದ್ದಾರೆ. ಆದಷ್ಟು ಹೊಸ ನಿರ್ದೇಶಕರಿಗೆ ಅವಕಾಶ ಸಿಕ್ಕಿದೆ. ಇದೊಂದು ಖುಷಿ ಸಂಗತಿ' ಎಂದು ರಿಶಬ್‌ ತಿಳಿಸಿದ್ದಾರೆ.

ನಿರ್ದೇಶಕ ಕರಣ್‌ ಅನಂತ್‌ ನಿರ್ದೇಶನದ ಚಿತ್ರದಲ್ಲಿ ಪ್ರಕಾಶ್‌ ಬೆಳವಾಡಿ ಮತ್ತು ಸೌಮ್ಯ ನಟಿಸುತ್ತಿದ್ದರೆ, ವಾಸು ದೀಕ್ಷಿತ್‌ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸುಮಂತ್‌ ಭಟ್‌ ನಿರ್ದೇಶನದ ಸಿನಿಮಾದಲ್ಲಿ ಮಾನಸಿ ಸುಧೀರ್‌ ಮತ್ತು ಸುಹಾನ್‌ ಶೆಟ್ಟಿ ಮುಖ್ಯ ಕಲಾವಿದರು. ಮಿದುನ್‌ ಮುಕುಂದನ್‌ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ. ರಾಹುಲ್‌ ಪಿ.ಕೆ. ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಚಿತ್ರಕ್ಕೆ ಬಾಲಾಜಿ ಮನೋಹರ್‌ ಮತ್ತು ಪ್ರಮೋದ್‌ ಶೆಟ್ಟಿ ಪ್ರಮುಖ ಕಲಾವಿದರು. ಉದಿತ್‌ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶಶಿಕುಮಾರ್‌ ಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ಮತ್ತು ಅಮೃತಾ ನಾಯಕ್‌ ನಟಿಸುತ್ತಿದ್ದಾರೆ. ಧೀರೇಂದ್ರ ದಾಸ್‌ ಅವರ ಸಂಗೀತ ಚಿತ್ರಕ್ಕಿದೆ. ಕಿರಣ್‌ ರಾಜ್‌ ನಿರ್ದೇಶನದ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ ನಾಯಕನಾದರೆ, ಹರಿಪ್ರಿಯಾ ನಾಯಕಿ. ವಾಸುಕಿ ವೈಭವ್‌ ಸಂಗೀತ ಸಂಯೋಜನೆ ಚಿತ್ರಕ್ಕಿದೆ.ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನದ ಚಿತ್ರದಲ್ಲಿ ಕಿಶೋರ್‌ ಮತ್ತು ಯಜ್ಞಾ ಶೆಟ್ಟಿ ಪ್ರಮುಖ ಪಾತ್ರ ಮಾಡಿದ್ದಾರೆ.

ನನ್ನ ನಿರ್ದೇಶನದ ಈ ಚಿತ್ರದಲ್ಲಿ ಏಳು ನಿರ್ದೇಶಕರು ಹೊಸ ಬಗೆಯ ಕಥೆಯನ್ನು ಹೇಳುತ್ತಿದ್ದಾರೆ. ಇದೊಂದು ಹೊಸ ಪ್ರಯೋಗ. ಒಂದೇ ಸಿನಿಮಾದಲ್ಲಿ ಏಳು ಸಿನಿಮಾ ನೋಡುವ ಹೊಸ ಅನುಭವ ಈ ಚಿತ್ರ ನೀಡಲಿದೆ- ರಿಷಬ್‌ ಶೆಟ್ಟಿ, ನಿರ್ದೇಶಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌