ಆ್ಯಪ್ನಗರ

ಯಶ್ ಅಭಿನಯದ 'ಕೆಜಿಎಫ್: ಚಾಪ್ಟರ್ 2' ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಕೆಜಿಎಫ್‌ನ ಜೆಎಂಎಫ್‌ಸಿ ನ್ಯಾಯಾಲಯ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿದೆ. ಚಿತ್ರದಲ್ಲಿ ಕೆಜಿಎಫ್‍ನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ದೂರಲಾಗಿದೆ.

Vijaya Karnataka Web 27 Aug 2019, 6:44 pm

ಕನ್ನಡದ ಬಹುನಿರೀಕ್ಷಿತ ಚಿತ್ರ 'ಕೆಜಿಎಫ್: ಚಾಪ್ಟರ್ 2' ಚಿತ್ರದ ಚಿತ್ರೀಕರಣಕ್ಕೆ ಕೆಜಿಎಫ್‌ನ ಜೆಎಂಎಫ್‌ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಮೂಲಕ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರಕ್ಕೆ ಭಾರಿ ಸಂಕಷ್ಟ ಎದುರಾಗಿದೆ.
Vijaya Karnataka Web kgf-main


ಕೆಜಿಎಫ್ ನಗರದ ಸೈನೈಡ್ ದಿಬ್ಬದ ಪ್ರದೇಶದಲ್ಲಿ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಚಿತ್ರದಲ್ಲಿ ಕೆಜಿಎಫ್ ಅನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. [ಮೈಸೂರು ಲಲಿತ ಮಹಲ್ ಪ್ಯಾಲೇಸ್‌ನಲ್ಲಿ ಕೆಜಿಎಫ್ 2 ಚಿತ್ರೀಕರಣ]

ಕೆಜಿಎಫ್‌ನ ಸಂರಕ್ಷಿತ ಸೈನೇಡ್ ದಿಬ್ಬದ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿ ಪರಿಸರ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೆಜಿಎಫ್‌ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ ಎನ್ ಶ್ರೀನಿವಾಸ್ ಎಂಬುವರು ನ್ಯಾಯಾಲಯ ಮೋರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿ ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿದೆ ಕೆಜಿಎಫ್ ಜೆಎಂಎಫ್‌ಸಿ ನ್ಯಾಯಾಲಯ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್: ಚಾಪ್ಟರ್ 2' ಸಿನಿಮಾದ ಚಿತ್ರೀಕರಣ ಕೆಜಿಎಫ್‌ನಲ್ಲಿ ಭರದಿಂದ ಸಾಗುತ್ತಿತ್ತು. ಇದಕ್ಕಾಗಿ ಕೆಜಿಎಫ್‌ನ ಸೈನೇಡ್ ಗುಡ್ಡಗಳಲ್ಲಿ ಭರ್ಜರಿ ಸೆಟ್ ಹಾಕಿ ಚಿತ್ರೀಕರಿಸಲಾಗುತ್ತಿತ್ತು.

ಈಗಾಗಲೆ ಸಂಜಯ್ ದತ್ ಅವರ ಅಧೀರ ಲುಕ್ ಬಿಡುಗಡೆಯಾಗಿದ್ದು ಸಿನಿಮಾ ಬಗ್ಗೆ ಇನ್ನಷ್ಟು ಕುತೂಹಲ ಮೂಡಿಸಿದೆ. ಪಾತ್ರವರ್ಗದಲ್ಲಿ ರವೀನಾ ಟಂಡನ್ ಸಹ ಇದ್ದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯಾಗಿ ಕಾಣಿಸಲಿದ್ದಾರೆ.
ಸೈನೆಡ್ ಗುಡ್ಡಗಳಲ್ಲಿ 'ಕೆಜಿಎಫ್: ಚಾಪ್ಟರ್ 2' ಭರ್ಜರಿ ಸೆಟ್‌ ದೃಶ್ಯಗಳು

ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ, ಅಚ್ಯುತ ಕುಮಾರ್, ಅನಂತ್ ನಾಗ್, ನಾಸರ್, ಅರ್ಚನಾ ಜೋಯಿಸ್, ವಸಿಷ್ಠ ಸಿಂಹ, ಮಾಳವಿಕಾ ಅವಿನಾಶ್ ಹಾಗೂ ರಾಮಚಂದ್ರ ರಾಜು ಪಾತ್ರವರ್ಗದಲ್ಲಿದ್ದು ರವಿ ಬಸ್ರೂರ್ ಸಂಗೀತ ಚಿತ್ರಕ್ಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌