ಆ್ಯಪ್ನಗರ

ಇಲ್ಲಿವೆ ನೋಡಿ ಕುರುಕ್ಷೇತ್ರ ಸಿನಿಮಾ ವೀಕ್ಷಿಸಲು 5 ಕಾರಣಗಳು

ಈ ಸಿನಿಮಾವನ್ನು 3ಡಿಯಲ್ಲಿ ಮಾಡಲಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಹರಿಕೃಷ್ಣ ಸಂಗೀತ ನೀಡಿರುವ ಈ ಸಿನಿಮಾದ ಹಾಡುಗಳು ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

Vijaya Karnataka Web 8 Aug 2019, 5:23 pm
ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಸಹ ಒಂದು. ದರ್ಶನ್ ಜತೆಗೆ ಅರ್ಜುನ್ ಸರ್ಜಾ, ನಿಖಿಲ್ ಕುಮಾರಸ್ವಮಿ, ರವಿಚಂದ್ರನ್, ಅಂಬರೀಷ್, ಸ್ನೇಹಾ ಸೇರಿದಂತೆ ಹಲವಾರು ತಾರೆಗಳಿಂದ ಸಿನಿಮಾ ತುಂಬಿ ತುಳುಕುತ್ತಿದ್ದು ಇನ್ನಷ್ಟು ಕುತೂಹಲ ಕೆರಳಿಸಿದೆ. ಇಲ್ಲಿವೆ ನೋಡಿ ಕುರುಕ್ಷೇತ್ರ ಸಿನಿಮಾ ನೋಡಲು 5 ಕಾರಣಗಳು.
Vijaya Karnataka Web kurukshetra


1. ಅದ್ಭುತ ತಾರಾಗಣದ ಸಿನಿಮಾ ಇದು
ಇದೊಂದು ಬಹುತಾರಾಗಣದ ಸಿನಿಮಾ ಎಂಬುದು ಗೊತ್ತೇ ಇದೆ. ಸ್ಯಾಂಡಲ್‍ವುಡ್‍ನ ಘಟಾನುಘಟಿ ತಾರೆಗಳೆಲ್ಲಾ ಅಭಿನಯಿಸಿರುವ ಕಾರಣ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇವೆ. ದರ್ಶನ್, ಅರ್ಜುನ್ ಸರ್ಜಾ, ನಿಖಿಲ್, ರವಿಚಂದ್ರನ್, ಸೋನು ಸೂದ್, ಅಂಬರೀಷ್, ಸ್ನೇಹಾ ಮತ್ತು ಮೇಘನಾ ರಾಜ್ ತಾರಾಗಣದಲ್ಲಿದ್ದಾರೆ. ದುರ್ಯೋಧನನ ಪಾತ್ರದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಭೀಷ್ಮನಾಗಿ ಅಂಬರೀಷ್, ಕರ್ಣನಾಗಿ ಅರ್ಜುನ್ ಸರ್ಜಾ, ಅಭಿಮನ್ಯು ಆಗಿ ನಿಖಿಲ್ ಕಾಣಿಸಲಿದ್ದಾರೆ. ಶಕುನಿ ಪಾತ್ರದಲ್ಲಿ ರವಿಶಂಕರ್, ದ್ರೌಪದಿಯಾಗಿ ಸ್ನೇಹಾ, ಅರ್ಜುನನಾಗಿ ಸೋನು ಸೂದ್, ಕೃಷ್ಣನಾಗಿ ರವಿಚಂದ್ರನ್ ಹಾಗೂ ಶಲ್ಯನ ಪಾತ್ರದಲ್ಲಿ ರಾಕ್‌ಲೈನ್ ವೆಂಕಟೇಶ್ ತೆರೆಯ ಮೇಲೆ ಅಬ್ಬರಿಸಲಿದ್ದಾರೆ.

2. ಗಮನಸೆಳೆದಿರುವ ಗ್ರಾಫಿಕ್ಸ್
ಇದು ತ್ರಿಡಿ ಸಿನಿಮಾ ಆಗಿದ್ದು ಚಿತ್ರದಲ್ಲಿ ಯಾವ ರೀತಿಯ ತಂತ್ರಜ್ಞಾನ ಬಳಕೆಯಾಗಿದೆ, ಚಕ್ರವ್ಯೂಹ ಭೇದಿಸುವ ಸನ್ನಿವೇಶ ಹಾಗೂ ಕೌರವರು ಮತ್ತು ಪಾಂಡವರ ನಡುವಿನ ಕುರುಕ್ಷೇತ್ರ ಯುದ್ಧ ಸನ್ನಿವೇಶಗಳು ಯಾವ ರೀತಿ ಮೂಡಿಬಂದಿವೆ ಎಂಬ ಕುತೂಹಲ ಇದ್ದೇ ಇದೆ.

3. ಭಾರಿ ಬಜೆಟ್ ಸಿನಿಮಾ ಇದು
ಕುರುಕ್ಷೇತ್ರ ಸಿನಿಮಾವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಕನ್ನಡದ ಅತ್ಯಂತ ದುಬಾರಿ ಸಿನಿಮಾಗಳಲ್ಲಿ ಒಂದು ಎನ್ನಿಸಿಕೊಂಡಿದೆ. ಸೆಟ್, ಕಾಸ್ಟ್ಯೂಮ್ ಸೇರಿದಂತೆ ಎಲ್ಲವನ್ನೂ ಅದ್ದೂರಿಯಾಗಿಯೇ ತೆರೆಗೆ ತರಲಾಗಿದೆ. ಕುರುಕ್ಷೇತ್ರ ಸಿನಿಮಾದ ಮೂಲಕ ಇಂತಹ ಇನ್ನಷ್ಟು ದುಬಾರಿ ಸಿನಿಮಾಗಳು ಮುಂದಿನ ದಿನಗಳಲ್ಲಿ ನಿರ್ಮಾಣವಾಗಲಿವೆಯೇ? ಎಂಬ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

4. ಹಲವಾರು ಭಾಷೆಗಳಲ್ಲೂ ರಿಲೀಸ್ ಆಗುತ್ತಿದೆ
ಎರಡು ವರ್ಷಗಳ ಕಾಲ ಸಿನಿಮಾ ಚಿತ್ರೀಕರಣ ನಡೆದಿದೆ. ಕನ್ನಡ ಸೇರಿದಂತೆ ಮಲಯಾಳಂ, ತೆಲುಗು, ತಮಿಳು ಮತ್ತು ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ. ಮುನಿರತ್ನ ನಿರ್ಮಾಣದ ಸಿನಿಮಾವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಕುರುಕ್ಷೇತ್ರ ಸಿನಿಮಾ 2ಡಿ ಮತ್ತು 3ಡಿ ಆವೃತ್ತಿಗಳಲ್ಲಿ ತೆರೆಕಾಣುತ್ತಿದೆ. ಚಿತ್ರಕಥೆ ಜೆ ಕೆ ಭಾರವಿ.

5. ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ಸಿನಿಮಾ
ಸ್ಯಾಂಡಲ್‌ವುಡ್‌ನಲ್ಲಿ ಅತ್ಯಂತ ಪ್ರತಿಷ್ಠಾತ್ಮಕವಾಗಿ ನಿರ್ಮಾಣವಾಗಿರುವ ಕುರುಕ್ಷೇತ್ರ ಚಿತ್ರವು ಈಗಾಗಲೇ ತೆಲುಗು, ತಮಿಳು, ಮಲೆಯಾಳಂ ಚಿತ್ರರಂಗಗಳ ಗಮನ ಸೆಳೆದಿದೆ. ಅಷ್ಟೇ ಅಲ್ಲದೇ ಬಾಲಿವುಡ್‌ನಲ್ಲೂ ಈ ಚಿತ್ರವು ಸದ್ದು ಮಾಡುತ್ತಿದೆ. ದರ್ಶನ್‌ ಇದೇ ಮೊದಲ ಬಾರಿ ಸುಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರದಲ್ಲಿ ಅವರು ಅದ್ಭತವಾಗಿ ನಟಿಸಿದ್ದು, ಪಾತ್ರದ ಕಾಸ್ಟ್ಯೂಮ್ಸ್‌ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌