ಆ್ಯಪ್ನಗರ

ಕನಸುಗಾರನ ಹಿಂದಿನ ಶಕ್ತಿ ನಮ್ಮ ತಾತ: ಮನೋರಂಜನ್ ರವಿಚಂದ್ರನ್

ನಿರ್ಮಾಪಕ ವೀರಾಸ್ವಾಮಿ ಅವರನ್ನು ಅವರ ಮಗ ರವಿಚಂದ್ರನ್ ಯಾವಾಗಲೂ ನೆನೆಯುತ್ತಾರೆ. ಅದೇ ರೀತಿ ಇಂದು ಪ್ರೀತಿಯ ತಾತನ ಬಗ್ಗೆ ರವಿಚಂದ್ರನ್ ಮಗ, ಮನೋರಂಜನ್ ರವಿಚಂದ್ರನ್ ಮಾತುಗಳನ್ನ ಆಡಿದ್ದಾರೆ.

Vijaya Karnataka Web 17 Apr 2019, 4:59 pm
ಇಂದು, 17ನೇ ಏಪ್ರಿಲ್, ಸ್ಯಾಂಡಲ್‌ವುಡ್ ಅಂಗಳದಲ್ಲಿ ಒಂದು ಸ್ಪೆಷಲ್ ಡೇ. ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಂದೆ, ನಿರ್ಮಾಪಕ ವೀರಾಸ್ವಾಮಿ ಅವರ ಹುಟ್ಟುಹಬ್ಬದ ಸವಿ ನೆನಪು. ಕನ್ನಡ ಚಿತ್ರರಂಗಕ್ಕೆ ದೊಡ್ಡ ದೊಡ್ಡ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹೆಮ್ಮೆಯ ನಿರ್ಮಾಪಕರೊಬ್ಬರು ಹುಟ್ಟಿದ ದಿನ‌.
Vijaya Karnataka Web manoranjan1704


ನಿರ್ಮಾಪಕ ವೀರಾಸ್ವಾಮಿ ಅವರನ್ನು ಅವರ ಮಗ ರವಿಚಂದ್ರನ್ ಯಾವಾಗಲೂ ನೆನೆಯುತ್ತಾರೆ. ಅದೇ ರೀತಿ ಇಂದು ಪ್ರೀತಿಯ ತಾತನ ಬಗ್ಗೆ ರವಿಚಂದ್ರನ್ ಮಗ, ಮನೋರಂಜನ್ ರವಿಚಂದ್ರನ್ ಮಾತುಗಳನ್ನ ಆಡಿದ್ದಾರೆ. ನಿರ್ದೇಶಕ ರಾಘುರಾಮ್, ರವಿಚಂದ್ರನ್ ಅಭಿಮಾನಿಗಳು ಸೇರಿದಂತೆ ಸಾಕಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ವೀರಾಸ್ವಾಮಿ ರವರನ್ನು ನೆನೆದಿದ್ದಾರೆ.

ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ‌ ತಾತನ ಬಗ್ಗೆ ಬರೆದುಕೊಂಡಿರುವ ಮನೋರಂಜನ್ ಅವರು "ನಮ್ಮ ತಾತ ಕಂಡ ಕನಸು, ಅವರು ಹೊತ್ತ ಆಸೆ ಇವತ್ತು ಈಶ್ವರಿ ಪ್ರೊಡಕ್ಷನ್ಸ್ ‌ಇಷ್ಟು ದೊಡ್ಡ ಹೆಸರು ಮಾಡೋಕ್ಕೆ ಸಾಧ್ಯ ಆಯ್ತು. ನಮ್ಮ‌ ತಂದೆ ರವಿಚಂದ್ರನ್ ಅವರನ್ನು ನೀವೆಲ್ಲ‌ ಕನಸುಗಾರ ಅಂತ ಹೇಳಬಹುದು. ಆದರೆ, ಅವರ ಕನಸುಗಳ‌ ಹಿಂದೆ ಇದ್ದ ದೊಡ್ಡ ಶಕ್ತಿ ನಮ್ಮ‌ ತಾತ. ಇಂದು ಅವರ ಹುಟ್ಟುಹಬ್ಬ. ಲವ್ ಯೂ ತಾತ, ಸದಾ ಚಿರಋಣಿ" ಎಂದು ಮನೋರಂಜನ್ ಹಂಚಿಕೊಂಡಿದ್ದಾರೆ.
View this post on Instagram Make a person smile everyday! How many people will u b making smile in your life??? Isn't it a good thought?? A post shared by Manoranjan Ravichandran (@mano_ravichandran) on Jul 25, 2018 at 10:19pm PDT


ಅಂದಹಾಗೆ, 'ನಾಗರಹಾವು', 'ಭೂತಯ್ಯನ ಮಗ ಅಯ್ಯು', 'ಪ್ರೇಮಲೋಕ', 'ರಣಧೀರ', 'ಶಾಂತಿ ಕ್ರಾಂತಿ', 'ರಾಮಾಚಾರಿ', 'ಚಕ್ರವ್ಯೂಹ' ಹೀಗೆ ಸಾಕಷ್ಟು ಸಿನಿಮಾಗಳು 'ಈಶ್ವರಿ ಪ್ರೊಡಕ್ಷನ್ ಹೌಸ್‌'ನಿಂದ ಬಂದಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌