ಕಾರ್ಪೋರೇಟ್ ಕ್ಷೇತ್ರದಲ್ಲಿನ ತವಕ ತಲ್ಲಣಗಳನ್ನು ಹೇಳುವ ಇರುವುದೆಲ್ಲವ ಬಿಟ್ಟು ಸಿನಿಮಾದಲ್ಲಿ ಮೇಘನಾ ರಾಜ್ ತಿಲಕ್ ಜತೆ ರೊಮ್ಯಾನ್ಸ್ ಮಾಡಿದ್ದಾರೆ.
ನಿರ್ದೇಶಕ ಕಾಂತ ಕನ್ನಲ್ಲಿ ಅವರು ಜಲ್ಸಾ ಬಳಿಕ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ನೀಲಿ ಸೀರಿಯಲ್ ಖ್ಯಾತಿಯ ಶ್ರೀ ಮಹದೇವ್ ನಾಯಕರಾಗಿದ್ದಾರೆ.
ಸಾಫ್ಟ್ ವೇರ್ ರಂಗದಲ್ಲಿ ದೊಡ್ಡ ಹೆಸರು ಮಾಡಬೇಕು ಎಂಬ ಹಂಬಲವಿರುವ ಪಾತ್ರದಲ್ಲಿ ಮೇಘನಾ ರಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ವಾಸ್ತವತೆಯ ಸಿನಿಮಾ ಎನ್ನುವ ನಿರ್ದೇಶಕರು, ನಮ್ಮದೆಲ್ಲವನ್ನೂ ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಹೊರಟಾಗ, ಆಗುವ ಸಮಸ್ಯೆಗಳು, ಅನುಭವಿಸುವ ನೋವುಗಳು ಚಿತ್ರದ ಹೈಲೈಟ್.
ಇದುವರೆಗೂ ಬಿಡುಗಡೆಯಾಗಿರುವ ಫೊಟೋಗಳು ಮತ್ತು ಸ್ಟಿಲ್ಗಳನ್ನು ನೋಡಿದರೆ ತಿಲಕ್ ಇಲ್ಲಿ ಕಾರ್ಪೋರೇಟ್ ಕಂಪನಿಯಲ್ಲಿ ಕೆಲಸ ಮಾಡುವ ಹುಡುನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಊಟಿಯಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಬೆಂಗಳೂರಿನಲ್ಲಿ ಶೂಟಿಂಗ್ ಮಾಡುತ್ತಿದೆ.
ಚಿತ್ರಕ್ಕೆ ಶ್ರೀಧರ್ ವಿ.ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ. ರಂಗಿತರಂಗ ಖ್ಯಾತಿಯ ಛಾಯಾಗ್ರಾಹಕ ವಿಲಿಯಮ್ ಡೇವಿಡ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿಯುತ್ತಿದ್ದಾರೆ.