ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನಿಖಿಲ್ 'ಕಲ್ಯಾಣ'
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅವರ ಮುಂದಿನ ಚಿತ್ರ 'ಸೀತಾರಾಮ ಕಲ್ಯಾಣ' ಮುಹೂರ್ತ ಬೆಂಗಳೂರಿನ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ನಡೆಯಿತು.
Vijaya Karnataka Web 30 Nov 2017, 12:52 pm
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅವರ ಮುಂದಿನ ಚಿತ್ರ 'ಸೀತಾರಾಮ ಕಲ್ಯಾಣ' ಮುಹೂರ್ತ ಬೆಂಗಳೂರಿನ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಎ ಹರ್ಷ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿತ್ರದ ಶೀರ್ಷಿಕೆ ಕೇಳಿದರೆ ಇದೊಂದು ಪೌರಾಣಿಕ ಚಿತ್ರವೇನೋ ಅನ್ನಿಸುತ್ತದೆ. ಆದರೆ ಇದು ಪೌರಾಣಿಕ ಅಲ್ಲ ಎನ್ನುತ್ತಾರೆ ಚಿತ್ರದ ನಿರ್ದೇಶಕ ಹರ್ಷ. ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ ಮೂಡಿ ಬರುತ್ತಿರುವ ಚಿತ್ರವಂತೆ. ಅಲ್ಲದೇ, ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಎಂಬ ಮಾತು ಕೇಳಿ ಬಂದಿತ್ತು. ಅದಕ್ಕೂ ಉತ್ತರ ಕೊಟ್ಟಿದ್ದಾರೆ ನಿರ್ದೇಶಕರು.
ಇದೊಂದು ಕಾಲ್ಪನಿಕ ಕತೆಯಂತೆ. ಅಲ್ಲದೇ, ಕ್ಯೂಟ್ ಲವ್ಸ್ಟೋರಿಯನ್ನು ಈ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ಡಿ.10ರಿಂದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರಿನಲ್ಲಿ ಇಂದು ಚಿತ್ರಕ್ಕೆ ಮುಹೂರ್ತ. ಹಲವು ವಿಶೇಷತೆಗಳು ಈ ಸಿನಿಮಾದಲ್ಲಿ ಇವೆಯಂತೆ. ದಕ್ಷಿಣ ಭಾರತದ ಖ್ಯಾತ ನಟ ಶರತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರು ತಾರಾಗಣದಲ್ಲಿ ಇದ್ದಾರೆ.
ಚಿತ್ರದ ಶೀರ್ಷಿಕೆ ಕೇಳಿದರೆ ಇದೊಂದು ಪೌರಾಣಿಕ ಚಿತ್ರವೇನೋ ಅನ್ನಿಸುತ್ತದೆ. ಆದರೆ ಇದು ಪೌರಾಣಿಕ ಅಲ್ಲ ಎನ್ನುತ್ತಾರೆ ಚಿತ್ರದ ನಿರ್ದೇಶಕ ಹರ್ಷ. ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ ಮೂಡಿ ಬರುತ್ತಿರುವ ಚಿತ್ರವಂತೆ. ಅಲ್ಲದೇ, ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಎಂಬ ಮಾತು ಕೇಳಿ ಬಂದಿತ್ತು. ಅದಕ್ಕೂ ಉತ್ತರ ಕೊಟ್ಟಿದ್ದಾರೆ ನಿರ್ದೇಶಕರು.
ಇದೊಂದು ಕಾಲ್ಪನಿಕ ಕತೆಯಂತೆ. ಅಲ್ಲದೇ, ಕ್ಯೂಟ್ ಲವ್ಸ್ಟೋರಿಯನ್ನು ಈ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ಡಿ.10ರಿಂದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರಿನಲ್ಲಿ ಇಂದು ಚಿತ್ರಕ್ಕೆ ಮುಹೂರ್ತ. ಹಲವು ವಿಶೇಷತೆಗಳು ಈ ಸಿನಿಮಾದಲ್ಲಿ ಇವೆಯಂತೆ. ದಕ್ಷಿಣ ಭಾರತದ ಖ್ಯಾತ ನಟ ಶರತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರು ತಾರಾಗಣದಲ್ಲಿ ಇದ್ದಾರೆ.