ಆ್ಯಪ್ನಗರ

ವೀರ ಯೋಧ 'ಗುರು' ಕುಟುಂಬಕ್ಕೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಇಂದು, ಫೆಬ್ರವರಿ 16ರಂದು ನಡೆಯುತ್ತಿರುವರ ವೀರ ಸೈನಿಕ 'ಗುರು' ಅವರ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತಿಮ ನಮನ ಕಾರ್ಯಕ್ರಮದಲ್ಲಿ ಹಾಜರಿದ್ದ ನಿಖಿಲ್ ಕುಮಾರ್ ಅವರು ಗುರು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

Vijaya Karnataka Web 16 Feb 2019, 3:18 pm
ಸ್ಯಾಂಡಲ್‌ವುಡ್ ಉದಯೋನ್ಮುಖ ನಟ, ಮುಖ್ಯಮಂತ್ರಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರ್ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ 'ಗುರು' ಎಂಬ ವೀರ ಯೋಧನ ಅಂತಿಮ ನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇಂದು, ಫೆಬ್ರವರಿ 16ರಂದು ನಡೆಯುತ್ತಿರುವರ ವೀರ ಸೈನಿಕ 'ಗುರು' ಅವರ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತಿಮ ನಮನ ಕಾರ್ಯಕ್ರಮದಲ್ಲಿ ಹಾಜರಿದ್ದ ನಿಖಿಲ್ ಕುಮಾರ್ ಅವರು ಗುರು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
Vijaya Karnataka Web nikhil162


ಮೊನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ಆತ್ಮಾಹುತಿ ದಾಳಿ ಮೂಲಕ ಭಾರತದ ವೀರ ಯೋಧರ ಮೇಲೆ ನಡೆದ ದಾಳಿಯಲ್ಲಿ ಮಂಡ್ಯದ ವೀರ ಸೈನಿಕ ಗುರು ಸೇರಿದಂತೆ 44 ಜನರು ವೀರ ಮರಣವನ್ನಪ್ಪಿದ್ದಾರೆ. ಭಯೋತ್ಪಾದಕರ ಈ ಹೇಯ ಕೃತ್ಯಕ್ಕೆ ಚೀನಾ ಸೇರಿದಂತೆ ಇಡೀ ವಿಶ್ವವೇ ಕಂಬನಿ ಮಿಡಿದಿದೆ. ಇಡೀ ಭಾರತದಲ್ಲಿ ಸೂತಕದ ಛಾಯೆ ಆವರಿಸಿದ್ದು ಭಯೋತ್ಪಾದಕರ ಅಟ್ಟಹಾಸಕ್ಕೆ ನಲುಗಿದ ಕರ್ತವ್ಯದಲ್ಲಿದ್ದ ಸೈನಿಕರ ಸಾವಿನ ಬಗ್ಗೆ ಎಲ್ಲ ಕಡೆಯ ಜನರೂ ಕಣ್ಣೀರಾಗಿದ್ದಾರೆ. ದೇಶ ಕಾಯುತ್ತಿರುವ ಸೈನಿಕರಿಗೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷ ಬೇಧ ಮರೆತು ಜನರು ಸಾಂತ್ವನ ಹೇಳುತ್ತಿದ್ದಾರೆ.

ಅದರಂತೆ, ಸಂಪೂರ್ಣ ಸ್ಯಾಂಡಲ್‌ವುಡ್ ಅಗಲಿದ ಸೈನಿಕರಿಗೆ ಅಂತಿಮ ಶ್ರದ್ಧಾಂಜಲಿ ಸಲ್ಲಿಸಿದ್ದು ಅಗಲಿದ ಸೈನಿಕರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ದರ್ಶನ್, ಸುದೀಪ್, ಯಶ್, ಪುನೀತ್, ನೆನಪಿರಲಿ ಪ್ರೇಮ್, ನೀನಾಸಂ ಸತೀಶ್ ಸೇರಿದಂತೆ ಚಿತ್ರರಂಗದ ಬಹಳಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮಗ ನಿಖಿಲ್ ಸ್ವತಃ ವೀರ ಯೋಧ, ಮಂಡ್ಯದ ಗುರು ಅವರ ಕುಟುಂಬ ಹಾಗೂ ಮಿತ್ರರಿಗೆ ಸಾಂತ್ವನ ಹೇಳುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಅಂದಹಾಗೆ, ಇತ್ತೀಚಿಗಷ್ಟೇ ನಿಖಿಲ್ ಕುಮಾರಸ್ವಾಮಿ ನಾಯಕತ್ವದ 'ಸೀತಾರಾಮ ಕಲ್ಯಾಣ' ಚಿತ್ರವು ಬಿಡಿಗಡೆಯಾಗಿತ್ತು. ರಚಿತಾ ರಾಮ್ ಈ ಚಿತ್ರದ ನಾಯಕಿಯಾಗಿದ್ದರು. ಮುನಿರತ್ನ ನಿರ್ಮಾಣದಲ್ಲಿ ಬಿಡುಗಡೆ ಆಗಬೇಕಾಗಿರುವ ದರ್ಶನ್ ನಾಯಕತ್ದ ''ಕುರುಕ್ಷೇತ್ರ' ಚಿತ್ರದಲ್ಲಿ ನಿಖಿಲ್ ಕುಮಾರ್ 'ಅಭಿಮನ್ಯು' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌